ಕಸಸಂಗ್ರಹ ವಾಹನದಲ್ಲಿ ಜಾಗೃತಿ ಸಂದೇಶ

•ಆನ್‌ಲೈನ್‌ ವಂಚನೆ ತಡೆಗೆ ವಿನೂತನ ಪ್ರಯೋಗ •ಪ್ರತಿ ವಾರ್ಡ್‌ಗಳಲ್ಲೂ ಸಂಚಾರ

Team Udayavani, Jul 30, 2019, 12:15 PM IST

sm-tdy-2

ಶಿವಮೊಗ್ಗ: ಬಡಾವಣೆಯೊಂದರಲ್ಲಿ ಕಸದ ವಾಹನದೊಂದಿಗೆ ಜಾಗೃತಿ ಕಾರ್ಯ.

ಶಿವಮೊಗ್ಗ: ಜಿಲ್ಲೆಯಲ್ಲಿ ಆನ್‌ಲೈನ್‌ ವಂಚನೆ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾ ಪೊಲೀಸ್‌ ಇಲಾಖೆ ವಿನೂತನ ಪ್ರಯತ್ನದ ಮೂಲಕ ಜನರಲ್ಲಿ ಜಾಗೃತಿ ಮೂಡಿಸುತ್ತಿದೆ.

ಎಸ್‌ಎಂಎಸ್‌, ಕರಪತ್ರಗಳ ಮೂಲಕ ಜಾಗೃತಿ ಸಂದೇಶ ಕಳುಹಿಸಿದರೂ ಅದನ್ನು ನೋಡುವರು, ಓದುವವರ ಸಂಖ್ಯೆ ಕಡಿಮೆ ಆಗಿರುವುದರಿಂದ ವಂಚನೆಗೆ ಒಳಗಾಗುವವರ ಪ್ರಮಾಣ ಏರಿಕೆಯಾಗುತ್ತಲೇ ಇತ್ತು. ಕಳೆದ ಒಂದೂವರೆ ವರ್ಷದಲ್ಲಿ 3 ಕೋಟಿ ಅಧಿಕ ಮೊತ್ತವನ್ನು ಕಳೆದುಕೊಂಡಿರುವುದೇ ಇದಕ್ಕೆ ಸಾಕ್ಷಿಯಾಗಿತ್ತು. ಹೀಗಾಗಿ ಇಲಾಖೆ ಈಗ ಹೊಸ ಪ್ರಯೋಗಕ್ಕೆ ಮುಂದಾಗಿದ್ದು ಕಸದ ವಾಹನದ ಮೂಲಕ ಜನರಿಗೆ ಸಂದೇಶ ನೀಡುವ ಪ್ರಯತ್ನ ನಡೆದಿದೆ.

ಜನಜಾಗೃತಿಯೇ ಮದ್ದು: ಪ್ರಸ್ತುತ ದಿನಗಳಲ್ಲಿ ಜನ ಡಿಜಿಟಲ್ ಆಗುತ್ತಿದ್ದಾರೆ. ಆದರೆ ಸಣ್ಣಪುಟ್ಟ ವ್ಯತ್ಯಾಸಗಳನ್ನು ಗಮನಿಸದೆ ಆಸೆ, ಆಮಿಷಗಳಿಗೆ ಒಳಗಾಗಿ ಹಣ ಕಳೆದುಕೊಳ್ಳುತ್ತಿದ್ದರು. ನಿಮ್ಮ ಎಟಿಎಂ ಹ್ಯಾಕ್‌ ಆಗಿದೆ, ಎಟಿಎಂ ಅವಧಿ ಮುಗಿದಿದೆ. ಹೀಗೆ ಅನೇಕ ಕಾರಣ ನೀಡಿ ಓಟಿಪಿ ಪಡೆದು ಕ್ಷಣಾರ್ಧದಲ್ಲಿ ಹಣ ಲಪಟಾಯಿಸುತ್ತಿದ್ದರು. ವಂಚಕರು ದೇಶದ ಯಾವುದೋ ಮೂಲೆಯಲ್ಲಿ ಕುಳಿತು ಇಂತಹ ಕೃತ್ಯ ಎಸಗುವುದರಿಂದ ಅವರನ್ನು ಪತ್ತೆ ಹಚ್ಚುವುದು ಸುಲಭವಾಗಿರುವುದಿಲ್ಲ. ನಕಲಿ ದಾಖಲೆ, ನಕಲಿ ಸಿಎಂ ಕೊಟ್ಟು ಬ್ಯಾಂಕ್‌ ಅಕೌಂಟ್ ಓಪನ್‌ ಮಾಡುವ ಅವರು ಹಣ ವರ್ಗಾವಣೆಯಾದ ತಕ್ಷಣ ಹಣ ತೆಗೆದುಕೊಂಡು ಎಸ್ಕೇಪ್‌ ಆಗುತ್ತಾರೆ. ಫೇಸ್‌ಬುಕ್‌, ವಾಟ್ಸಾಪ್‌ ಹ್ಯಾಕ್‌ ಮಾಡುವ ಮೂಲಕವು ಹಣಕ್ಕೆ ಬೇಡಿಕೆ ಇಡುತ್ತಿದ್ದರು. ಹಾಗಾಗಿ ಇಂತಹ ಸಮಸ್ಯೆಗಳಿಗೆ ಜನರೇ ಜಾಗೃತರಾಗುವುದು ಅನಿವಾರ್ಯವಾಗಿದೆ. ಹಾಗಾಗಿ ಪೊಲೀಸ್‌ ಇಲಾಖೆ ಮನೆ ಮನೆಗೆ ಸಂದೇಶ ತಲುಪಿಸುವ ವ್ಯವಸ್ಥೆ ಮಾಡಿದೆ.

ಜಾಗೃತಿ ಹೇಗೆ: ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ 35 ವಾರ್ಡ್‌ಗಳಿದ್ದು ಪ್ರತಿ ವಾರ್ಡ್‌ಗಳಿಗೆ ಎರಡು ಕಸ ಸ್ವೀಕರಿಸುವ ವಾಹನಗಳಿವೆ. ಪ್ರತಿ ದಿನ ಬೆಳಗ್ಗೆ ನಗರದ ಪ್ರತಿ ರಸ್ತೆಗಳಿಗೆ ಹೋಗುವ ಅವು ಕಸ ಸಂಗ್ರಹಿಸುತ್ತವೆ. ಜತೆಗೆ ಸ್ವಚ್ಛತೆ ಬಗ್ಗೆ ಪಾಠ ಮಾಡುತ್ತವೆ. ಇಂತಹ ವಾಹನಗಳನ್ನೇ ಬಳಸಿಕೊಂಡಿರುವ ಪೊಲೀಸರು ಸ್ವಚ್ಛತೆ ಜಾಗೃತಿ ಹಾಡುಗಳ ಜತೆಗೆ ಆನ್‌ಲೈನ್‌ ವಂಚನೆಗಳಿಂದ ಹುಷಾರಾಗಿರುವಂತೆ ಮಾಹಿತಿ ನೀಡಲಿವೆ. ದುನಿಯಾ ಸಿನಿಮಾದ ಹಾಡಿದ ಸಂಗೀತ ಬಂತೆಂದರೆ ಕಸದ ಗಾಡಿ ಬಂತು ಎಂದು ಅಂದುಕೊಳ್ಳುತ್ತಿದ್ದ ಜನ ಇನ್ಮೇಲೆ ಜಾಗೃತಿ ಮಾತಗಳನ್ನು ಸಹ ಕೇಳಿಸಿಕೊಳ್ಳಲಿದ್ದಾರೆ.

ಇದಕ್ಕಾಗಿ ಪ್ರತ್ಯೇಕ ಸಂದೇಶ ಸಿದ್ಧಪಡಿಸಿ ಕಸದ ಗಾಡಿಗಳಲ್ಲಿ ಅಳವಡಿಸಲಾಗಿದೆ. ಮೂರು ದಿನಗಳಿಂದ ಶಿವಮೊಗ್ಗ ನಗರದ ಪ್ರತಿ ವಾರ್ಡ್‌ಗಳಲ್ಲಿ ಈ ಸಂದೇಶ ಕೇಳಿಬರುತ್ತಿದೆ.

ಟಾಪ್ ನ್ಯೂಸ್

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

5

Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ

Malaysian ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

Malaysia ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Modi ಕೀಳುಮಟ್ಟಕ್ಕಿಳಿದು ಮಾತನಾಡಬಾರದು: ಸಿಎಂ ಸಿದ್ದರಾಮಯ್ಯ

Modi ಕೀಳುಮಟ್ಟಕ್ಕಿಳಿದು ಮಾತನಾಡಬಾರದು: ಸಿಎಂ ಸಿದ್ದರಾಮಯ್ಯ

ದಿಂಗಾಲೇಶ್ವರ ಶ್ರೀಗೆ ನಾಮಪತ್ರ ವಾಪಾಸ್ ಪಡೆದು ಕಾಂಗ್ರೆಸ್ ಬೆಂಬಲಿಸಲು ಹೇಳಿದ್ದೇನೆ: ಸಿಎಂ

ದಿಂಗಾಲೇಶ್ವರ ಶ್ರೀಗೆ ನಾಮಪತ್ರ ವಾಪಾಸ್ ಪಡೆದು ಕಾಂಗ್ರೆಸ್ ಬೆಂಬಲಿಸಲು ಹೇಳಿದ್ದೇನೆ: ಸಿಎಂ

B.Y. Raghavendra: ಇಂಟರ್‌ಸಿಟಿ ರೈಲಿನ ಪ್ರಯಾಣಿಕರ ಬಳಿ ಬಿವೈಆರ್‌ ಮತಬೇಟೆ

B.Y. Raghavendra: ಇಂಟರ್‌ಸಿಟಿ ರೈಲಿನ ಪ್ರಯಾಣಿಕರ ಬಳಿ ಬಿವೈಆರ್‌ ಮತಬೇಟೆ

ರಾಘವೇಂದ್ರ

Shimoga; ರಾಜ್ಯ ಸರ್ಕಾರದ ತುಷ್ಟೀಕರಣ ನೀತಿಗೆ ಹಿಂದೂಗಳ ಬಲಿ: ರಾಘವೇಂದ್ರ ಕಿಡಿ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

Bengaluru: ಕದಂಬ ಹೋಟೆಲ್‌ ಸ್ಫೋಟ ಮಾಡುವುದಾಗಿ ಬೆದರಿಕೆ 

Bengaluru: ಕದಂಬ ಹೋಟೆಲ್‌ ಸ್ಫೋಟ ಮಾಡುವುದಾಗಿ ಬೆದರಿಕೆ 

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Rameshwaram Cafe Case: ರಾಮೇಶ್ವರಂ ಕೆಫೆ ಸ್ಫೋಟ ಶಂಕಿತರು ಮತ್ತೆ 7 ದಿನ ಎನ್‌ಐಎ ವಶಕ್ಕೆ

Rameshwaram Cafe Case: ರಾಮೇಶ್ವರಂ ಕೆಫೆ ಸ್ಫೋಟ ಶಂಕಿತರು ಮತ್ತೆ 7 ದಿನ ಎನ್‌ಐಎ ವಶಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.