ದೊರಸ್ವಾಮಿ ನೂರು ವರ್ಷದಲ್ಲಿ ಅನುಭವಿಸದೇ ಇರುವುದನ್ನು ಈಗ ಅನುಭವಿಸುವಂತಾಗಿದೆ: ಅಯನೂರು
Team Udayavani, Mar 1, 2020, 1:05 PM IST
ಶಿವಮೊಗ್ಗ: ಬಸನಗೌಡ ಯತ್ನಾಳ್ ಮತ್ತು ದೊರೆಸ್ವಾಮಿ ಬಗ್ಗೆ ಪರ ವಿರೋಧ ಹೇಳಿಕೆ ನಡುವೆ ದೊರೆಸ್ವಾಮಿ ನಿತ್ಯ ಅಪಮಾನಕ್ಕೆ ಒಳಗಾಗುತ್ತಿದ್ದಾರೆ. ದೊರೆಸ್ವಾಮಿಯವರು ಶತಾಯುಷಿ. ದೊರಸ್ವಾಮಿ ನೂರು ವರ್ಷದಲ್ಲಿ ಅನುಭವಿಸದೇ ಇರುವುದನ್ನು ಈಗ ಅನುಭವಿಸುವಂತಾಗಿದೆ ಎಂದು ವಿಧಾನ ಪರಿಷತ್ ಸದಸ್ಯ ಅಯನೂರು ಮಂಜುನಾಥ್ ಹೇಳಿದರು.
ಹಿರಿಯ ಸ್ವಾತಂತ್ರ್ಯ ಹೋರಾಟಗಾರ ದೊರೆಸ್ವಾಮಿ ಅವರು ತಮ್ಮ ಕ್ರೆಡಿಟ್ ಅನ್ನು ಎಲ್ಲದಕ್ಕೂ ಬಳಸಬಾರದು. ದೊರೆಸ್ವಾಮಿಯಾಗಿ ತಮ್ಮ ನಿಲುವು ಪ್ರಕಟ ಮಾಡುತ್ತಾರೋ? ಅಥವಾ ಸ್ವಾತಂತ್ರ್ಯ ಹೋರಾಟಗಾರರಾಗಿ ಪ್ರಕಟ ಮಾಡುತ್ತಾರೋ ಅವರು ಸ್ಪಷ್ಟಪಡಿಸಬೇಕು ಎಂದರು.
ಯತ್ನಾಳ ಹೇಳಿಕೆಯಲ್ಲಿ ಕೆಲ ಪದಗಳ ಬಳಕೆ ಅಷ್ಟು ಸಮಂಜಸವಾಗಿಲ್ಲ ಎಂದ ಅವರು, ಈ ವಿವಾದ ಇಲ್ಲಿಗೆ ನಿಲ್ಲಿಸುವಂತೆ ಮನವಿ ಮಾಡುತ್ತೇನೆ ಎಂದರು.
ಸಿದ್ದರಾಮಯ್ಯನವರಿಗೆ ಬೇರೆ ವಿಷಯವೇ ಸಿಕ್ಕಿಲ್ಲ. ಅದಕ್ಕೆ ಯತ್ನಾಳ ಹೇಳಿಕೆ ವಿಷಯ ಕುರಿತು ಅಧಿವೇಶನದಲ್ಲಿ ಮಾತನಾಡುತ್ತಾರೆ. ಕಾಂಗ್ರೆಸ್ ಪಕ್ಷದಲ್ಲಿ ಜೀವಂತವಾಗಿ ಇರುವುದಕ್ಕೆ ಈ ವಿಷಯ ತೆಗೆದುಕೊಂಡಿದ್ದಾರೆ. ಸಿದ್ದರಾಮಯ್ಯ ಶಾಸಕ, ಸಿಎಂ ಆದರೂ ಉತ್ತಮ ಪಾರ್ಲಿಮೆಂಟರಿಯನ್ ಆಗಲಿಲ್ಲ ಎಂದು ಅಯನೂರು ಟೀಕಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ
Rameshwaram Cafe blast:ತೀರ್ಥಹಳ್ಳಿಯಲ್ಲಿ ಬೆಳ್ಳಂಬೆಳಗ್ಗೆ ಎನ್ಐಎ ದಾಳಿ
ರಾಜ್ಯ ಬಿಜೆಪಿಯಲ್ಲೀಗ ಕಾಂಗ್ರೆಸ್ ಸಂಸ್ಕೃತಿ ಬಂದಿದೆ: ಕೆ.ಎಸ್. ಈಶ್ವರಪ್ಪ
ಶಿವಮೊಗ್ಗ: ಮಂಗನ ಕಾಯಿಲೆಗೆ ಏಳು ವರ್ಷದ ಬಾಲಕಿ ಸಾವು
Rice: ಅಂಗನವಾಡಿ ಮಕ್ಕಳಿಗಿಲ್ಲ ಅನ್ನ ಭಾಗ್ಯ! ಮೂರು ತಿಂಗಳಿಂದ ಅಕ್ಕಿ ಪೂರೈಕೆ ಸ್ಥಗಿತ
MUST WATCH
ಹೊಸ ಸೇರ್ಪಡೆ
IPL; ಇಂದು ಚಿನ್ನಸ್ವಾಮಿಯಲ್ಲಿ ಆರ್ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?
Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್
Subramanya: ಮಗು ಮಲಗಿದೆ ಜೋರಾಗಿ ಮಾತನಾಡಬೇಡಿ ಎಂದಿದಕ್ಕೆ ಕತ್ತಿಯಿಂದ ಹಲ್ಲೆ
Politics: ಸುಮಲತಾ – ನಾವು ಶಾಶ್ವತ ಶತ್ರುಗಳಲ್ಲ: ಕುಮಾರಸ್ವಾಮಿ
Sullia: ಕೂಜಿಮಲೆ ಪ್ರದೇಶದಲ್ಲಿ ಕಾಣಿಸಿಕೊಂಡಾಕೆ ನಕ್ಸಲ್ ಅಲ್ಲ