ಬಿಎಸ್ ವೈ ಅವರಿಂದ ಯತ್ನಾಳ್ ಶಾಸಕರಾಗಿದ್ದು, ಮಾತನಾಡುವ ಮೊದಲು ಯೋಚಿಸಲಿ: ಅಯನೂರು
Team Udayavani, May 30, 2020, 4:55 PM IST
ಶಿವಮೊಗ್ಗ: ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಆಡಿರುವ ಮಾತುಗಳನ್ನು ಒಪ್ಪಲು ಸಾಧ್ಯವಿಲ್ಲ. ಇತ್ತೀಚೆಗೆ ಪ್ರಚಾರಕ್ಕಾಗಿ ಕೀಳು ಮಟ್ಟದ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಇವರ ಹದ್ದುಮೀರಿದ ಹೇಳಿಕೆಗಳನ್ನು ಯಾರೂ ಒಪ್ಪಲ್ಲ ಎಂದು ವಿಧಾನ ಪರಿಷತ್ ಸದಸ್ಯ ಆಯನೂರು ಮಂಜುನಾಥ್ ಹೇಳಿದರು.
ಶಿವಮೊಗ್ಗದಲ್ಲಿ ಮಾತನಾಡಿದ ಅವರು, ಯತ್ನಾಳ್ ಅವರ ಹೇಳಿಕೆಗಳನ್ನು ಪಕ್ಷ ಗಂಭಿರವಾಗಿ ಪರಿಗಣಿಸಬೇಕು. ಪಕ್ಷ ಯತ್ನಾಳ್ ಅವರನ್ನು ಕ್ಷಮಿಸಬಾರದು. ರಾಜ್ಯಾಧ್ಯಕ್ಷರು ಇಂಥವರಿಗೆಲ್ಲಾ ಶೋಕಾಸ್ ನೋಟೀಸ್ ಜಾರಿ ಮಾಡಿ ಶಿಸ್ತು ಕ್ರಮ ಕೈಗೊಳ್ಳಬೇಕು ಎಂದರು.
ಯಾವುದೇ ಹೇಳಿಕೆ ನೀಡುವ ಸ್ವಾತಂತ್ರ್ಯ ಇದೆ. ಆದರೆ, ಸ್ವಾತಂತ್ರ್ಯಕ್ಕೂ ಒಂದು ಮಿತಿ ಇದೆ. ನಾನೇ ಸೀನಿಯರ್ ಎಂದು ಹೇಳಿಕೊಳ್ಳುವ ಭ್ರಮೆಯಿಂದ ಯತ್ನಾಳ್ ಹೊರಬರಬೇಕು. ನಿಮಗಿಂತ ಹಿರಿಯರು ತುಂಬಾ ಜನ ಇದ್ದಾರೆ ಎಂದರು.
ವಿವಾದಿತ ಹೇಳಿಕೆಗಳ ನೀಡುವ ಮೂಲಕ ನೆಗೆಟಿವ್ ಪ್ರಚಾರ ಪಡೆಯುತ್ತಿದ್ದಾರೆ. ಯಡಿಯೂರಪ್ಪ ಅವರ ವಿರುದ್ಧವಾಗಿ ಹೇಳಿಕೆ ನೀಡುವ ಮುನ್ನ ಒಮ್ಮೆ ಯೋಚಿಸಬೇಕು. ಯಡಿಯೂರಪ್ಪ ಸರ್ವಮಾನ್ಯ ಸಮೂಹ ನಾಯಕರು. ಬಿಎಸ್ ವೈ ಅವರ ಹೆಸರಿಂದ ಶಾಸಕರಾದವರು ತುಂಬಾ ಜನರಿದ್ದಾರೆ. ಅವರಿಂದ ಶಾಸಕರಾದವರಲ್ಲಿ ಬಸನಗೌಡ ಪಾಟೀಲ ಯತ್ನಾಳ್ ಕೂಡ ಒಬ್ಬರು ಆಯನೂರು ಮಂಜುನಾಥ್ ಕಿಡಿಕಾರಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Yogendra Yadav:ಕೃಷಿ ಉಳಿಯಬೇಕಾದರೆ ರೈತರು ಕಾಂಗ್ರೆಸ್ಗೆ ಮತಹಾಕಲಿ: ಯೋಗೇಂದ್ರ ಯಾದವ್
Manipal ಆಸ್ಪತ್ರೆಯ ಡಾ.ರಾಮದಾಸ್ ಪೈ ಬ್ಲಾಕ್; 161 ವಿಶೇಷ ಹಾಸಿಗೆಗಳ ವಾರ್ಡ್ ಸೇವೆ ಆರಂಭ
ರಜಿನಿಕಾಂತ್ ʼಕೂಲಿʼಯಲ್ಲಿ ಅನುಮತಿಯಿಲ್ಲದೆ ಹಾಡು ಬಳಕೆ: ಲೀಗಲ್ ನೋಟಿಸ್ ಕಳುಹಿಸಿದ ಇಳಯರಾಜ
Viral: ಮದುವೆಯ ದಿನ ವಧುವಿಗೆ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಭಾವಚಿತ್ರ ಉಡುಗೊರೆ ನೀಡಿದ ವರ
ಅಯ್ಯೋ ಬಿಸಿಲು! ಕರಾವಳಿಯಲ್ಲಿ ಮಣ್ಣಿನ ತೇವಾಂಶ ಕಡಿಮೆ: ನೀರಿಲ್ಲ, ಫಸಲಿಲ್ಲ