ರಾಹುಲ್ ಗಾಂಧಿಗೆ ತಲೆ ತಿರುಗಿದೆ: B.S Yediyurappa
ವೀರಶೈವ ಲಿಂಗಾಯತರ ಬಗ್ಗೆ ರಾಹುಲ್ಗೆ ಏನು ಗೊತ್ತು?
Team Udayavani, Apr 25, 2023, 6:30 AM IST
ಶಿವಮೊಗ್ಗ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ತಲೆ ತಿರುಗಿದೆ. ವೀರಶೈವ ಲಿಂಗಾಯತರ ಬಗ್ಗೆ ಅವರಿಗೆ ಏನು ಗೊತ್ತಿದೆ? ಬಸವಣ್ಣನವರ ತತ್ವ-ಸಿದ್ಧಾಂತದ ಬಗ್ಗೆ ಏನು ಗೊತ್ತಿದೆ? ಈಗ ವೀರಶೈವರ ಬಗ್ಗೆ ಏನೋ ಭಾರೀ ತಿಳಿದವರ ರೀತಿ ಮಾತನಾಡುತ್ತಿದ್ದಾರೆ. ಇವರ ಈ ರೀತಿಯ ರಾಜಕಾರಣವೆಲ್ಲ ಇಲ್ಲಿ ನಡೆಯಲ್ಲ ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನರೇಂದ್ರ ಮೋದಿ, ಅಮಿತ್ ಶಾ ಎದುರು ರಾಹುಲ್ ಗಾಂಧಿ ಯಾವ ಲೆಕ್ಕ? ಕಾಂಗ್ರೆಸ್ನವರು ಏನೋ ಹೇಳಬೇಕು ಎಂದು ಏನೆನೆಲ್ಲಾ ಹೇಳುತ್ತಿದ್ದಾರೆ. ಯಾವುದೂ ಸರಿಯಾಗಿ ಗೊತ್ತಿಲ್ಲದ ರಾಹುಲ್ ಯಾರೋ ಹೇಳಿದ್ದನ್ನು ಕೇಳಿಕೊಂಡು ಮಾತನಾಡುತ್ತಿದ್ದಾರೆ. ಇದೆಲ್ಲ ನಡೆಯುವುದಿಲ್ಲ. ಸಿದ್ದರಾಮಯ್ಯ ಲಿಂಗಾಯತ ಸಮಾಜದ ಬಗ್ಗೆ ಹಗುರವಾಗಿ ಮಾತನಾಡಿದ್ದಾರೆ. ವಿಪಕ್ಷ ನಾಯಕ ಎಂಬುದರ ಅರಿವಿಲ್ಲದೇ ಮಾತನಾಡುತ್ತಿದ್ದಾರೆ. ಜನ ಅವರಿಗೆ ತಕ್ಕ ಉತ್ತರ ಕೊಡುತ್ತಾರೆ. ಈ ಬಾರಿ ಸಿದ್ದರಾಮಯ್ಯ ಗೆಲ್ಲೋದು ಕಷ್ಟ. ನಾವು ಆ ರೀತಿ ತಂತ್ರ ಮಾಡಿದ್ದೇವೆ. ಕಾಂಗ್ರೆಸ್ಗೆ ಜನ ಈ ಬಾರಿ ರಾಜ್ಯಾದ್ಯಂತ ತಕ್ಕ ಪಾಠ ಕಲಿಸುತ್ತಾರೆ ಎಂದರು.
ಸಂತೋಷ್ ಅವರು ಬಿಜೆಪಿಯ ಹಿರಿಯ ಮುಖಂಡರು. ಅವರ ಬಗ್ಗೆ ಯಾರಾದರೂ ಹಗುರವಾಗಿ ಮಾತನಾಡಿದರೆ ಸಹಿಸಲ್ಲ. ಅವರ ಬಗ್ಗೆ ಟೀಕೆ ಮಾಡಲು ಯೋಗ್ಯತೆ ಇಲ್ಲ. ಸಂತೋಷ್ ಸಂಘಟನೆಗಾಗಿ ಕೆಲಸ ಮಾಡುತ್ತಿದ್ದಾರೆ. ಅವರ ಬಗ್ಗೆ ಮಾತನಾಡೋದು ಸರಿಯಲ್ಲ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ
LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ
Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ
Kerala ವಯನಾಡಲ್ಲಿ ರಾಹುಲ್ ಅಡಗಿ ಕುಳಿತಿದ್ದಾರೆ: ಬಿ.ವೈ. ವಿಜಯೇಂದ್ರ
Holehonnur: ರಾಜ್ಯದಲ್ಲಿ ಹೆಣ್ಣು ಮಕ್ಕಳಿಗೆ ಸುರಕ್ಷತೆಯಿಲ್ಲ: ಬಿ.ವೈ. ವಿಜಯೇಂದ್ರ