ಬಲವಂತವಾಗಿ ಮತಾಂತರ ಮಾಡಲು ಅವಕಾಶವಿಲ್ಲ: ಸಂಸದ ಬಿ.ವೈ.ರಾಘವೇಂದ್ರ
Team Udayavani, Dec 11, 2021, 4:37 PM IST
ಶಿವಮೊಗ್ಗ: ಮತಾಂತರ ನಿಷೇಧ ಕಾಯ್ದೆ ಜಾರಿ ತರುವ ವಿಚಾರವಾಗಿ ಸಿಎಂ ಬೊಮ್ಮಾಯಿ ಅವರು ಈಗಾಗಲೇ ಹೇಳಿದ್ದಾರೆ. ಪದೇ ಪದೇ ಅಲ್ಲೊಂದು, ಇಲ್ಲೊಂದು ಮತಾಂತರ ಪ್ರಕರಣ ಕೇಳಿ ಬರುತ್ತಿದೆ. ಆ ದೃಷ್ಟಿಕೋನ ಇಟ್ಟುಕೊಂಡು ಮತಾಂತರ ಕಾಯ್ಧೆಯಲ್ಲಿ ತಿದ್ದುಪಡಿ ತರಲು ಸರ್ಕಾರ ಯೋಚಿಸುತ್ತಿದೆ. ಬೆಳಗಾವಿ ಅಧಿವೇಶನದಲ್ಲಿ ಮಹತ್ವದ ಚರ್ಚೆಯಾಗುವ ಸಾಧ್ಯತೆ ಇದೆ ಎಂದು ಗೃಹಸಚಿವರೂ ಹೇಳಿದ್ದಾರೆ ಎಂದು ಸಂಸದ ಬಿ.ವೈ.ರಾಘವೇಂದ್ರ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಾರೇ ಆದರೂ ಸ್ವತಂತ್ರವಾಗಿ ಅವರ ಧರ್ಮದಲ್ಲಿ ಬದುಕಲು ಅವಕಾಶವಿದೆ. ಅದರೆ ಬಲತ್ಕಾರವಾಗಿ ಮಾಡಲು ಕಾನೂನಿನಲ್ಲಿ ಅವಕಾಶ ಇಲ್ಲ. ಈ ನಿಟ್ಟಿನಲ್ಲಿ ಬಿಗಿಯಾದ ನಿಲುವು ಬರುವುದು ಸರಿ ಇದೆ ಎಂದು ಹೇಳಿದರು.
ಇದನ್ನೂ ಓದಿ:ಕಾಂಗ್ರೆಸ್ ನವರಿಗೆ ಬಿಟ್ ಕಾಯಿನ್ ನ ಅರ್ಥವೇ ಗೊತ್ತಿಲ್ಲ: ರೇಣುಕಾಚಾರ್ಯ ವ್ಯಂಗ್ಯ
ಗೋ ಹತ್ಯೆ ನಿಷೇಧ ಕಾಯ್ದೆಗೂ ತಿದ್ದುಪಡಿಯ ಅಗತ್ಯವಿದೆ. ಪ್ರಕರಣ ದಾಖಲಾದರೂ ಕೆಲವೇ ಗಂಟೆಯಲ್ಲಿ ಹೊರಬರುತ್ತಾರೆ. ಹೀಗಾಗಿ ಕಾಯ್ದೆ ಮತ್ತಷ್ಟು ಬಿಗಿಯಾದರೆ, ಕಾನೂನಿಗೂ ಗೌರವ ಬರುತ್ತದೆ ಎಂದು ಸಂಸದ ರಾಘವೇಂದ್ರ ಹೇಳಿದರು.
ಪರಿಷತ್ ಚುನಾವಣೆಯಲ್ಲಿ ನಾವು ಗೆಲ್ಲುತ್ತೇವೆ. ಮತದಾರರಿಂದ ಉತ್ತಮ ಸ್ಪಂದನೆ ಸಿಕ್ಕಿದ್ದು, ಮೊದಲ ಪ್ರಾಶಸ್ತ್ಯದಲ್ಲೇ ಶಿವಮೊಗ್ಗದಲ್ಲಿ ಗೆಲ್ಲುತ್ತೇವೆ. ರಾಜ್ಯದಲ್ಲಿ 12- 15 ಸ್ಥಾನ ಗೆಲ್ಲುತ್ತೇವೆ ಎಂದು ಬಿವೈ ರಾಘವೇಂದ್ರ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು
Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್
Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
MUST WATCH
ಹೊಸ ಸೇರ್ಪಡೆ
Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ
ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್