ಕುವೆಂಪು ವಿವಿ ಪ್ರವೇಶ ಕೌನ್ಸೆಲಿಂಗ್‌ ಆರಂಭ


Team Udayavani, Dec 19, 2020, 6:45 PM IST

ಕುವೆಂಪು ವಿವಿ ಪ್ರವೇಶ ಕೌನ್ಸೆಲಿಂಗ್‌ ಆರಂಭ

ಶಿವಮೊಗ್ಗ: ಕುವೆಂಪು ವಿಶ್ವವಿದ್ಯಾಲಯದಲ್ಲಿ ಶುಕ್ರವಾರ ನಡೆದ ಸ್ನಾತಕೋತ್ತರ ಪದವಿ ಪ್ರವೇಶ ಕೌನ್ಸೆಲಿಂಗ್‌ನಲ್ಲಿ ಸುಮಾರು 30ಕ್ಕೂ ಹೆಚ್ಚು ವಿಭಾಗಗಳಿಗೆ ವಿದ್ಯಾರ್ಥಿಗಳು ಉತ್ಸಾಹದೊಂದಿಗೆ ಪ್ರವೇಶ ಪಡೆದುಕೊಂಡರು. ವಿಶ್ವವಿದ್ಯಾಲಯದ ಮುಖ್ಯಆವರಣ, ಕಡೂರು ಪಿ.ಜಿ.ಕೇಂದ್ರ, ಚಿಕ್ಕಮಗಳೂರು ಪಿಜಿ ಕೇಂದ್ರ ಮತ್ತು 20ಕ್ಕೂ ಹೆಚ್ಚು ಸ್ನಾತಕೋತ್ತರ ಕಾಲೇಜುಗಳ ಎಲ್ಲಾ ವಿಭಾಗಗಳಿಗೆ ಡಿಸೆಂಬರ್‌ 18, 19 ಮತ್ತು 21 ರಂದು ಪ್ರವೇಶಾತಿ ಕೌನ್ಸೆಲಿಂಗ್‌ ಹಮ್ಮಿಕೊಳ್ಳಲಾಗಿದೆ. ಮೊದಲದಿನವಾದ ಶುಕ್ರವಾರದಂದು ಮೆರಿಟ್‌ ಸೀಟುಗಳಿಗೆಪ್ರವೇಶಾತಿ ಪ್ರಕ್ರಿಯೆ ಯಾವುದೇ ತೊಡಕುಗಳಿಲ್ಲದೆ ನಡೆಯಿತು.

19 ಹಾಗೂ 21 ರಂದು ಪೇಮೆಂಟ್‌ ಮತ್ತು ಇತರೆ ಕೋಟಾಗಳ ಸೀಟುಗಳಿಗೆ ಪ್ರವೇಶಾತಿ ನಡೆಯಲಿದೆ. ವಿಶ್ವವಿದ್ಯಾಲಯದ ಶೈಕ್ಷಣಿಕ ವಿಭಾಗದಪ್ರಕಾರ ಶುಕ್ರವಾರ ಸಂಜೆ4 ಗಂಟೆಯ ಹೊತ್ತಿಗೆಎಲ್ಲ ಸ್ನಾತಕೋತ್ತರ ವಿಭಾಗಗಳ ಶೇ. 65ರಷ್ಟು ಸೀಟುಗಳು ಭರ್ತಿಯಾಗಿದ್ದವು ಹಾಗೂ ಕೋವಿಡ್‌19 ಕಾರಣದಿಂದಾಗಿ ಇನ್ನುಳಿದ ಆಕಾಂಕ್ಷಿಗಳು ಶನಿವಾರಮತ್ತು ಸೋಮವಾರ ವಿವಿಗೆ ಆಗಮಿಸಿ ಪ್ರವೇಶ ಪಡೆಯಲಿದ್ದಾರೆ.

ಆನ್‌ಲೈನ್‌-ಆಫ್‌ಲೈನ್‌: ಪ್ರವೇಶಾತಿ ಪಡೆದ ಕೋರ್ಸುಗಳ ದಾಖಲಾತಿ ನಿರ್ವಹಣೆ ಹಾಗೂ ಶುಲ್ಕವನ್ನು ಭರಿಸಲು ವಿದ್ಯಾರ್ಥಿಗಳಿಗೆ ಆನ್‌ಲೈನ್‌ಮತ್ತು ಆಫ್‌ಲೈನ್‌ನ ಎರಡೂ ಮಾದರಿಗಳಲ್ಲಿಅವಕಾಶಗಳನ್ನು ನೀಡಲಾಗಿತ್ತು. ಆಫ್‌ಲೈನ್‌ನಲ್ಲಿ ಶುಲ್ಕಭರಿಸುವವರ ಸಂಖ್ಯೆ ಹೆಚ್ಚಾದಂತೆ ಮೂರು ಕೌಂಟರ್‌ಗಳನ್ನು ಬ್ಯಾಂಕಿನಲ್ಲಿ ತೆರೆಯಲಾಗಿತ್ತು. ಕೋವಿಡ್‌-19 ಮಾರ್ಗದರ್ಶಿ ಸೂತ್ರಗಳೊಂದಿಗೆ ವಿದ್ಯಾರ್ಥಿಗಳುಮತ್ತು ಪಾಲಕರು ಸುರಕ್ಷಿತವಾಗಿ ಪ್ರವೇಶಾತಿ ಪ್ರಕ್ರಿಯೆಯಲ್ಲಿ ಪಾಲ್ಗೊಂಡಿದ್ದರು.

ವಿಶ್ವವಿದ್ಯಾಲಯ ಪ್ರವೇಶ ಪ್ರಕ್ರಿಯೆಯನ್ನುಅಚ್ಚುಕಟ್ಟಾಗಿ ಆಯೋಜಿಸಿದ್ದು, ಕೊಠಡಿಗಳನ್ನುಸ್ಯಾನಿಟೈಸ್‌ ಮಾಡಲಾಗಿತ್ತು. ದೇಹದ ಉಷ್ಣಾಂಶ ಪರೀಕ್ಷಿಸಿ ವಿವಿ ಕ್ಯಾಂಪಸ್‌ ಒಳಗೆ ಬಿಡುವ ಜೊತೆಗೆವಿಭಾಗಗಳಲ್ಲಿ ಕೂರಲು 6ಅಡಿ ಅಂತರ ನೀಡಿಕುರ್ಚಿಗಳನ್ನು ಹಾಕಲಾಗಿತ್ತು. ಕರ್ನಾಟಕದ ವಿವಿಧಜಿಲ್ಲೆಗಳಿಂದ ಆಗಮಿಸಿದ್ದ ಸಾವಿರಕ್ಕೂ ಹೆಚ್ಚುಸೀಟು ಆಕಾಂಕ್ಷಿಗಳು ಮತ್ತು ಅವರ ಪೋಷಕರುಉತ್ಸುಕತೆಯಿಂದ ಪ್ರವೇಶ ಚಟುವಟಿಕೆಗಳಲ್ಲಿ ಭಾಗವಹಿಸಿದ್ದರು.

ವಿವಿಯ ವಿಭಾಗಗಳನ್ನು ಕಲೆ ಮತ್ತು ಸಮಾಜ ವಿಜ್ಞಾನ ವಿಷಯಗಳು, ವಾಣಿಜ್ಯ ಮತ್ತು ನಿರ್ವಹಣಾ ವಿಷಯಗಳು, ಅನ್ವಯಿಕ ವಿಜ್ಞಾನಗಳು ಮತ್ತು ಮೂಲವಿಜ್ಞಾನಗಳೆಂದು ವಿಂಗಡಿಸಿ ಅನುಕ್ರಮವಾಗಿ ಸಮಾಜ ವಿಜ್ಞಾನ, ವಾಣಿಜ್ಯಶಾಸ್ತ್ರ, ಗಣಿತ ವಿಜ್ಞಾನ ಮತ್ತು ಜೀವವಿಜ್ಞಾನ ವಿಷಯಗಳ ಸಮುತ್ಛಯಗಳಲ್ಲಿ ಪ್ರವೇಶಾತಿ ಹಮ್ಮಿಕೊಳ್ಳಲಾಗಿತ್ತು. ಮುಂದಿನ ಎರಡು ದಿನವೂಇದೇ ಕಟ್ಟಡಗಳಲ್ಲಿ ಕೌನ್ಸೆಲಿಂಗ್‌ ನಡೆಯಲಿದೆ.ವಿಶ್ವವಿದ್ಯಾಲಯಕ್ಕೆ ಆಗಮಿಸುವ ವಿದ್ಯಾರ್ಥಿಗಳುಮತ್ತು ಪೋಷಕರಿಗೆ ವಿವಿಯದ್ವಾರದ ಬಳಿಯೇ ವಿಭಾಗವಾರು ಕೌನ್ಸೆಲಿಂಗ್‌ ಕಟ್ಟಡದ ವಿವರ, ಮಾರ್ಗ ತೋರುವ ಸೂಚನಾ ಫಲಕಗಳು, ಅಗತ್ಯ ದಾಖಲೆಗಳ ವಿವರ ಸೇರಿದಂತೆ ಸ್ವಾಗತ ಕೋರುವ ಫಲಕಗಳನ್ನು ಹಾಕಲಾಗಿತ್ತು. ಜೊತೆಗೆ ಪ್ರತಿಕಟ್ಟಡದ ಬಳಿಯೂ ಪೂರಕ ಮಾಹಿತಿ ನೀಡಲಾಗಿತ್ತು.

ಡಿಜಿಟಲ್‌ ಬೋರ್ಡ್‌ನಲ್ಲಿ ಮಾಹಿತಿ ಪ್ರದರ್ಶನ ;  ಸೀಟುಗಳ ವಿವಿರ, ವಿದ್ಯಾರ್ಥಿ ಮಾಹಿತಿ, ಕಾಲೇಜು ಆಯ್ಕೆ ಕುರಿತ ಮಾಹಿತಿಗಳನ್ನುಯಾವುದೇ ಗೊಂದಲಗಳಿಗೆ ದಾರಿಯಾಗದಂತೆಡಿಜಿಟಲ್‌ ಬೋರ್ಡ್‌ಗಳಲ್ಲಿ  ಪ್ರದರ್ಶಿಸಲಾಗುತ್ತಿತ್ತು ಹಾಗೂ ಮೈಕ್‌ಮೂಲಕ ಆಯ್ಕೆಗೊಂಡವರ ಹೆಸರುಗಳನ್ನು ಘೋಷಿಸಲಾಗುತ್ತಿತ್ತು.

ಟಾಪ್ ನ್ಯೂಸ್

Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ

Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ

Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

1-sasdas

ಮುನ್ನೂರಿಗೆ ಹೋಗುವ ರಸ್ತೆಯ ಧರೆ ಕುಸಿತ: ಸಂಪರ್ಕ ಕಡಿತಗೊಳ್ಳುವ ಆತಂಕ…!

1-sffdsfsd

Arasalu; ರೈಲು ಹಳಿ ಮೇಲೆ ಮರ ಬಿದ್ದು ರೈಲು ಸಂಚಾರ ಸ್ಥಗಿತ

rain

ನಿರಂತರ ಬಿರುಗಾಳಿ ಮಳೆ: ತೀರ್ಥಹಳ್ಳಿ,ಸಾಗರ ತಾಲೂಕಿನ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ

Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ

2-chithapura

Chittapur: ಪಟ್ಟಣದ ಹೊರವಲಯದಲ್ಲಿ ಯುವಕನ ಶವ ಪತ್ತೆ: ಕೊಲೆ ಶಂಕೆ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.