ಎಪಿಎಂಸಿ ತಿದ್ದುಪಡಿ ಕಾಯ್ದೆಯಿಂದ ಸಹಕಾರಿ ಸಂಘಗಳಲ್ಲಿ ಆತಂಕ


Team Udayavani, May 21, 2020, 1:25 PM IST

21-May-13

ಭದ್ರಾವತಿ: ಕೃಷಿ ವ್ಯವಸಾಯೋತ್ಪನ್ನ ಮಾರುಕಟ್ಟೆಯ ನೋಟ.

ಭದ್ರಾವತಿ: ಲಾಕ್‌ಡೌನ್‌ ಕಾರಣದಿಂದ ನೆಲಕಚ್ಚಿದ್ದ ವ್ಯವಸಾಯೋತ್ಪನ್ನ ಮಾರುಕಟ್ಟೆಯಲ್ಲಿನ ವ್ಯಾಪಾರ ನಿಧಾನವಾಗಿ  ತರಿಸಿಕೊಳ್ಳತ್ತಾ ವ್ಯಾಪಾರ-ವಹಿವಾಟನ್ನು ಆರಂಭಿಸಿದೆ ಆದರೂ ಸರ್ಕಾರ ಜಾರಿಗೆ ತಂದಿರುವ ಎಪಿಎಂಸಿ ಕಾಯ್ದೆ ತಿದ್ದುಪಡಿ ಇಲ್ಲಿನ ಸಹಕಾರಿ ಕ್ಷೇತ್ರದ ಸಂಸ್ಥೆಗಳ ಅಸ್ತಿತ್ವದ ಮೇಲೆ ಗಂಭೀರ ಪರಿಣಾಮ ಬೀರಲಿದೆ ಎಂಬ ಆತಂಕವನ್ನು ಇಲ್ಲಿನ ಕೃಷಿ ಉತ್ಪನ್ನ ಮಾರುಕಟ್ಟೆಯ ಪ್ರಮುಖರು ವ್ಯಕ್ತಪಡಿಸುತ್ತಾರೆ.

ತಾಲೂಕಿನ ಕೃಷಿ ಉತ್ಪನ್ನಗಳ ಮಾರಾಟಕ್ಕೆ ರೈತರಿಗೆ ಎಪಿಎಂಸಿ ವೇದಿಕೆಯಾಗಿತ್ತು. ಆದರೆ ಈಗ ಸರ್ಕಾರ ಎಪಿಎಂಸಿ ಕಾಯ್ದೆಗೆ ತಂದಿರುವ ತಿದ್ದುಪಡಿ ಕಾಯ್ದೆಯಿಂದಾಗಿ ರೈತರು ತಾವು ಬೆಳೆದ ಬೆಳೆಗಳನ್ನು ಮಾರಾಟ ಮಾಡಲು ಎಪಿಎಂಸಿ ಹೊರಗೆ ಸಹ ಅವಕಾಶ ದೊರಕಿರುವುದರಿಂದ ಎಪಿಎಂಸಿ ಮೇಲಿನ ಅವಲಂಬನೆ ಕಡಿಮೆಯಾದಂತಾಗಿದೆ.

ತಾಲೂಕಿನಲ್ಲಿರುವ ಸುಮಾರು 180ಕ್ಕೂ ಅಧಿಕ ಗ್ರಾಮಾಂತರ ಪ್ರದೇಶಗಳಲ್ಲಿನ ಬಹುತೇಕ ರೈತರು ತಮ್ಮ ಜಮೀನುಗಳನ್ನು ಅಡಕೆ ತೋಟವನ್ನಾಗಿ ಮಾಡಿರುವುದರಿಂದ ಅಡಕೆ ಬೆಳೆ ಹೆಚ್ಚಾಗಿದೆ. ಅಡಕೆ ಬೆಳೆಗರರಿಗೆ ಸಹಕಾರಿಯಾಗಿ ಎಪಿಎಂಸಿ ಪ್ರಾಂಗಣದಲ್ಲಿ (ರ್‍ಯಾಂಕೋಸ್‌) ಮತ್ತು ಮ್ಯಾಮ್ಕೋಸ್‌, ಕ್ಯಾಂಪ್ಕೋ ಸಹಕಾರ ಸಂಘಗಳು ರೈತರು ಬೆಳೆದ ಅಡಕೆಗೆ ಬೆಳೆ ಪರಿಷ್ಕರಣೆ ಮತ್ತು ದಾಸ್ತಾನು ಮಾಡಲು ಉತ್ತಮ ಗೋಡೌನ್‌ ಸೌಲಭ್ಯ ನೀಡುತ್ತಾ ತಾಲೂಕಿನ ಅಡಕೆ ಬೆಳೆಗಾರರ ಹಿತ ಕಾಯುತ್ತಾ ಬಂದಿವೆ. ಈಗ ಎಪಿಎಂಸಿ ಕಾಯ್ದೆಗೆ ತಿದ್ದುಪಡಿ ತಂದಿರುವುದರಿಂದ ಭವಿಷ್ಯತ್ತಿನಲ್ಲಿ ರಾಂಕೋಸ್‌, ಮಾಮ್ಕೋಸ್‌ ವ್ಯಾಪಾರ-ವಹಿವಾಟಿನ ಮೇಲೆ ಗಂಭೀರ ಪರಿಣಾಮ ಬೀರಬಹುದೆಂಬ ಆತಂಕ ಈ ಸಂಸ್ಥೆಗಳ ಮೇಲೆ ಆವರಿಸಿದೆ.

ಈವರೆಗೆ ಇಲ್ಲಿನ ಅಡಕೆ ಬೆಳೆಗಾರರು ತಾವು ಬೆಳೆದ ಅಡಕೆಯನ್ನು ಈ ಸಂಸ್ಥೆಗಳ ಮೂಲಕವೇ ಮಾರಾಟ ಮಾಡುತ್ತಾ ಬಂದಿರುವುದರಿಂದ ಈ ಸಂಸ್ಥೆಗಳು ತಾವೂ ಬೆಳೆದು ಸದಸ್ಯ ರೈತರನ್ನೂ ಬೆಳೆಸುತ್ತಾ ಬಂದಿದ್ದವು. ಆದರೆ ಇನ್ನು ಮುಂದೆ ಇದೇ ಪರಿಸ್ಥಿತಿ ಇರುವುದು ಅನುಮಾನ ಎಂಬ ಆತಂಕ ಸಹಕಾರಿ ಸಂಘಗಳನ್ನು ಕಾಡುತ್ತಿದೆ. ಬಂಡವಾಳಶಾಹಿಗಳು ನೇರವಾಗಿ ಅಡಕೆ ಬೆಳೆಗಾರರ ತೋಟದಿಂದಲೇ ಅಡಕೆ ಖರೀದಿಸಿ ಅವರಿಗೆ ಹಣ ನೀಡುವ ಅವಕಾಶವಿರುವುದರಿಂದ ರೈತರಿಗೆ ಸಾಗಾಟದ ವೆಚ್ಚವಿಲ್ಲದೆ ಕುಳಿತಲ್ಲೇ ಅಡಕೆ ಮಾರಾಟವಾಗುತ್ತದೆ. ಆದ್ದರಿಂದ ರೈತರು ಈ ವ್ಯವಸ್ಥೆಗೆ ಮಣೆ ಹಾಕುತ್ತಾರೆ. ಆದರೆ ಇದರ ಪರಿಣಾಮವಾಗಿ ಸಹಕಾರಿ ಕ್ಷೇತ್ರದ ಆಧಾರ ಮೇಲೆ ಬೆಳೆದುಬಂದ ರಾಂಕೋಸ್‌ ಮತ್ತು ಮಾಮ್ಕೋಸ್‌ನಂತಹ ಸಂಸ್ಥೆಗಳ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದೆಂಬ ಆತಂಕ ಸೃಷ್ಟಿಯಾಗಿದೆ.

ಒಟ್ಟಿನಲ್ಲಿ ಒಂದೆಡೆ ಸರ್ಕಾರ ರೈತರ ಅನುಕೂಲಕ್ಕೆ ಪೂರಕವಾಗಿ ಜಾರಿಗೆ ತಂದಿದೆ ಎನ್ನಲಾಗುವ ಎಪಿಎಂಸಿ ತಿದ್ದಪಡಿ ಕಾಯ್ದೆ, ಮತ್ತೂಂದೆಡೆ ರೈತರ ಹಿತ ಕಾಯುವುದಕ್ಕಾಗಿ ರೈತರಿಂದಲೇ ಅಸ್ತಿತ್ವಕ್ಕೆ ಬಂದ ರಾಂಕೋಸ್‌, ಮಾಮ್ಕೋಸ್‌ನಂತಹ ಸಹಕಾರಿ ಸಂಘಗಳ ಅಸ್ತಿತ್ವಕ್ಕೆ ಎಲ್ಲಿ ಮಾರಕವಾಗುತ್ತದೆಯೋ ಎಂಬ ಆತಂಕ ಸಹಕಾರಿ ಸಂಘ-ಸಂಸ್ಥೆಗಳಲ್ಲಿ ಹುಟ್ಟಿದೆ.

ಎಪಿಎಂಸಿ ಕಾಯ್ದೆಗೆ ಸರ್ಕಾರ ತಂದಿರುವ ತಿದ್ದುಪಡಿ ಆರಂಭದಲ್ಲಿ ರೈತರಿಗೆ ಆಪ್ಯಾಯಮಾನವಾಗಿ ಕಾಣಬಹುದಾದರೂ ಕಾಲಾ ನಂತರದಲ್ಲಿ ರೈತರು ತಮಗರಿವಿಲ್ಲದಂತೆ ಬಂಡವಾಳಶಾಹಿಗಳ, ಬಹುರಾಷ್ಟ್ರೀಯ ಕಂಪನಿಗಳ ಕಪಿಮುಷ್ಠಿಗೆ ಸಿಲುಕಿ ನರಳುವ ಪರಿಸ್ಥಿತಿ ನಿರ್ಮಾಣವಾಗುತ್ತದೆ.
ವಿರೂಪಾಕ್ಷಪ್ಪ, ರ್‍ಯಾಂಕೋಸ್‌
ಸಂಸ್ಥೆಯ ವ್ಯವಸ್ಥಾಪಕ, ಭದ್ರಾವತಿ

ಕೆ.ಎಸ್‌. ಸುಧೀಂದ್ರ ಭದ್ರಾವತಿ

ಟಾಪ್ ನ್ಯೂಸ್

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ

1—eewqewq

World’s largest ಅನಕೊಂಡ ಅನಾ ಜೂಲಿಯಾ ಸಾವು; ಆಗಿದ್ದೇನು?

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

1-asdasdad

Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11-

Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ

1-asasas

Rameshwaram Cafe blast:ತೀರ್ಥಹಳ್ಳಿಯಲ್ಲಿ ಬೆಳ್ಳಂಬೆಳಗ್ಗೆ ಎನ್ಐಎ ದಾಳಿ

ರಾಜ್ಯ ಬಿಜೆಪಿಯಲ್ಲೀಗ ಕಾಂಗ್ರೆಸ್‌ ಸಂಸ್ಕೃತಿ ಬಂದಿದೆ: ಕೆ.ಎಸ್‌. ಈಶ್ವರಪ್ಪ

ರಾಜ್ಯ ಬಿಜೆಪಿಯಲ್ಲೀಗ ಕಾಂಗ್ರೆಸ್‌ ಸಂಸ್ಕೃತಿ ಬಂದಿದೆ: ಕೆ.ಎಸ್‌. ಈಶ್ವರಪ್ಪ

ಶಿವಮೊಗ್ಗ: ಮಂಗನ ಕಾಯಿಲೆಗೆ ಏಳು ವರ್ಷದ ಬಾಲಕಿ ಸಾವು

ಶಿವಮೊಗ್ಗ: ಮಂಗನ ಕಾಯಿಲೆಗೆ ಏಳು ವರ್ಷದ ಬಾಲಕಿ ಸಾವು

Rice: ಅಂಗನವಾಡಿ ಮಕ್ಕಳಿಗಿಲ್ಲ ಅನ್ನ ಭಾಗ್ಯ! ಮೂರು ತಿಂಗಳಿಂದ ಅಕ್ಕಿ ಪೂರೈಕೆ ಸ್ಥಗಿತ

Rice: ಅಂಗನವಾಡಿ ಮಕ್ಕಳಿಗಿಲ್ಲ ಅನ್ನ ಭಾಗ್ಯ! ಮೂರು ತಿಂಗಳಿಂದ ಅಕ್ಕಿ ಪೂರೈಕೆ ಸ್ಥಗಿತ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

38

Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್‌

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

29

Hassan Lok sabha Constituency: ಪ್ರಜ್ವಲ್‌ ರೇವಣ್ಣ ನಾಮಪತ್ರ ಸಲ್ಲಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.