ನಾಗರಿಕರ ಸಂಕಷ್ಟಕ್ಕೆ ಸ್ಪಂದಿಸಿ: ಸೋಮಶೇಖರ್
Team Udayavani, May 1, 2020, 2:52 PM IST
ಭದ್ರಾವತಿ: ಹುಟ್ಟಿದವರಿಗೆ ಸಾವು ಹೇಗೆ ನಿಶ್ಚಿತವೂ ಹಾಗೆಯೇ ಸರ್ಕಾರಿ ಕೆಲಸಕ್ಕೆ ಸೇರಿದವರಿಗೆ ನಿವೃತ್ತಿ ಎಂಬುದು ಅಷ್ಟೇ ನಿಶ್ಚಿತ ಎಂದು ನಿವೃತ್ತ ತಹಶೀಲ್ದಾರ್ ಸೋಮಶೇಖರ್ ಹೇಳಿದರು.
ಗುರುವಾರ ಅವರು ವೃತ್ತಿಯಿಂದ ನಿವೃತ್ತರಾದ ಕಾರಣ ಸಾರ್ವಜನಿಕರು ವಿವಿಧ ಇಲಾಖೆಯವರು ಆಶ್ರಯದಲ್ಲಿ ಏರ್ಪಡಿಸಿದ್ದ ಬೀಳ್ಕೊಡುಗೆ ಸಮಾರಂಭದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದ ಅವರು, ಅವಧಿಯಲ್ಲಿರುವಷ್ಟು ಕಾಲ ಸಾರ್ವಜನಿಕರ ಕಷ್ಟ ಸುಖಗಳಿಗೆ ಸ್ಪಂದಿಸಿ ಕಾರ್ಯನಿರ್ವಹಿಸಿದಾಗ ಮಾತ್ರ ಅಧಿಕಾರ, ಹುದ್ದೆ ಸಾರ್ಥಕತೆ ಪಡೆಯುತ್ತದೆ. ಅಧಿಕಾರಿಗಳು, ಸಿಬ್ಬಂದಿ, ನಾಗರಿಕರು ಪರಸ್ಪರ ಪೂರಕವಾಗಿ ಕಾರ್ಯನಿರ್ವಹಿಸಿದಾಗ ಮಾತ್ರ ಆಡಳಿತ ರಥ ಸುಗಮವಾಗಿ ಸಾಗಲು ಸಾಧ್ಯವಾಗುತ್ತದೆ. ಭದ್ರಾವತಿಯಲ್ಲಿ ನನ್ನ ಅಧಿಕಾರದ ಅವಧಿ ವೇಳೆ ಉತ್ತಮವಾಗಿ ಕಾರ್ಯನಿರ್ವಹಿಸಲು ಇಲ್ಲಿನ ವಿವಿಧ ಇಲಾಖೆ ಅಧಿಕಾರಿಗಳು, ಸಿಬ್ಬಂದಿ,ನಾಗರಿಕರು ಹಾಗೂ ಮಾರ್ಗದರ್ಶನ ನೀಡಿದ ಇಲ್ಲಿನ ಇಬ್ಬರು ಶಾಸಕರ ಸಹಕಾರ ಕಾರಣ ಅವರೆಲ್ಲರಿಗೂ ಈ ಮೂಲಕ ಧನ್ಯವಾದಗಳು ಎಂದರು.
ಉಪಭಾಗಾಧಿಕಾರಿ ಪ್ರಕಾಶ್ ಅಧ್ಯಕ್ಷತೆ ವಹಿಸಿದ್ದರು. ನೂತನ ತಹಶೀಲ್ದಾರ್ ಸೋಮಶೇಖರ್, ನಗರಸಭೆ ಆಯುಕ್ತ ಮನೋಹರ್, ತಾಪಂ ಇಒ ತಮ್ಮಣ್ಣಗೌಡ, ಡಿವೈಎಸ್ಪಿ ಸುಧಾಕರ್ ನಾಯ್ಕ, ಉಪ ತಹಶೀಲ್ದಾರ್ ರಂಗಮ್ಮ, ಜೈನ್ ಸಮಾಜದ ಸಂಪತ್ ಕುಮಾರ್ ಬಾಟಿಯಾ, ಮಾಜಿ ಸೈನಿಕ ಗಿರೀಶ್, ಪತ್ರಕರ್ತ ರವೀಂದ್ರ, ಆಶ್ರಯ ಸಮಿತಿಯ ರಾಘವೇಂದ್ರ ಮುಂತಾದವರು ಮಾತನಾಡಿದರು. ಡಾ.ಗಾಯತ್ರಿ, ನೀಲೇಶ್, ಡಾ.ಮಲ್ಲಪ್ಪ, ಗ್ರಾಮಾಂತರ ಸರ್ಕಲ್ ಇನ್ಸ್ ಪೆಕ್ಟರ್ ಮಂಜುನಾಥ್ ಮುಂತಾದವರು.
ಹಾಜರಿದ್ದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ
LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ
Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ
Kerala ವಯನಾಡಲ್ಲಿ ರಾಹುಲ್ ಅಡಗಿ ಕುಳಿತಿದ್ದಾರೆ: ಬಿ.ವೈ. ವಿಜಯೇಂದ್ರ
Holehonnur: ರಾಜ್ಯದಲ್ಲಿ ಹೆಣ್ಣು ಮಕ್ಕಳಿಗೆ ಸುರಕ್ಷತೆಯಿಲ್ಲ: ಬಿ.ವೈ. ವಿಜಯೇಂದ್ರ
MUST WATCH
ಹೊಸ ಸೇರ್ಪಡೆ
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ
Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ
HD Revanna, ಪ್ರಜ್ವಲ್ ಮೇಲೆ ಲೈಂಗಿಕ ದೌರ್ಜನ್ಯ ಕೇಸ್!
CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್; ಮರು ಪರೀಕ್ಷೆ ನಡೆಸದಿರಲು ನಿರ್ಧಾರ
Chennai ಅಪಾರ್ಟ್ಮೆಂಟ್ನ ಟಿನ್ ರೂಫ್ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ