ಡಾ| ಕೊಟ್ರೇಶಪ್ಪ ತಾಪಂ ಇಒ
Team Udayavani, Jun 5, 2020, 5:50 PM IST
ಭದ್ರಾವತಿ: ನೂತನ ತಾಪಂ ಕಾರ್ಯ ನಿರ್ವಹಣಾಧಿಕಾರಿಯಾಗಿ ಡಾ| ಕೊಟ್ರೇಶಪ್ಪ ಅಧಿಕಾರ ಸ್ವೀಕರಿಸಿದರು.
ಭದ್ರಾವತಿ: ನೂತನ ತಾಪಂ ಕಾರ್ಯ ನಿರ್ವಹಣಾಧಿಕಾರಿಯಾಗಿ ಡಾ| ಕೊಟ್ರೇಶಪ್ಪ ಅವರು ಗುರುವಾರ ಅಧಿಕಾರ ಸ್ವೀಕರಿಸಿದರು.
ಈ ಹಿಂದಿನ ಕಾರ್ಯ ನಿರ್ವಹಣಾಧಿಕಾರಿಗಳಾದ ತಮ್ಮಣ್ಣ ಗೌಡರ ಕಾರ್ಯವೈಖರಿಯನ್ನು ಪ್ರಶ್ನಿಸಿ ತಾಪಂ ಸದಸ್ಯರು ಅವರ ವರ್ಗಾವಣೆಗೆ ಆಗ್ರಹಿಸಿ ಬುಧವಾರ ತಾಪಂ ಅಧ್ಯಕ್ಷೆ ಆಶಾ ಶ್ರೀಧರ್ ಅವರ ಅಧ್ಯಕ್ಷತೆಯಲ್ಲಿ ತಾಪಂ ಸಭಾಂಗಣದಲ್ಲಿ ಪ್ರತಿಭಟನೆ ನಡೆಸಿದ್ದರು. ಈ ಸಂದರ್ಭದಲ್ಲಿ ಜಿಪಂ ಸಿಇಒ ಅವರು ಪ್ರತಿಭಟನಾನಿರತರ ಜೊತೆ ದೂರವಾಣಿ ಮೂಲಕ ಮಾತನಾಡಿ ಗುರುವಾರದೊಳಗಾಗಿ ನೂತನ ಅಧಿಕಾರಿಯನ್ನು ಆ ಸ್ಥಾನಕ್ಕೆ ನೇಮಿಸುವ ಭರವಸೆ ನೀಡಿದ ಮೇರೆಗೆ ಸದಸ್ಯರು ಪ್ರತಿಭಟನೆ ಹಿಂಪಡೆದಿದ್ದರು.
ಆ ಪ್ರಕಾರ ಗುರುವಾರ ಇಲ್ಲಿನ ತಾಪಂ ಕಾರ್ಯ ನಿರ್ವಹಣಾಧಿಕಾರಿಗಳಾಗಿದ್ದ ತಮ್ಮಣ್ಣ ಗೌಡ ಅವರನ್ನು ಅವರ ಮೂಲ ಇಲಾಖೆಯಾದ ಶಿವಮೊಗ್ಗ ರೇಷ್ಮೆ ಇಲಾಖೆಗೆ ವರ್ಗಾವಣೆ ಮಾಡಿ ಇಲ್ಲಿ ಅವರ ಸ್ಥಾನಕ್ಕೆ ನೂತನ ತಾಪಂ ಕಾರ್ಯ ನಿರ್ವಹಣಾಧಿಕಾರಿಗಳಾಗಿ ಡಾ| ಕೊಟ್ರೇಶಪ್ಪ ಅವರನ್ನು ವರ್ಗಾವಣೆ ಮಾಡಲಾಗಿದೆ. ತಮ್ಮಣ್ಣ ಗೌಡ ಅವರು ಗುರುವಾರ ನೂತನ ಕಾರ್ಯ ನಿರ್ವಹಣಾಧಿಕಾರಿ ಡಾ| ಕೊಟ್ರೇಶಪ್ಪ ಅವರಿಗೆ ಅಧಿಕಾರ ಹಸ್ತಾಂತರ ಮಾಡಿದರು. ತಾಪಂ ಸದಸ್ಯ ಮಂಜುನಾಥ್ ಕದಿರೇಶ್, ಸ್ಥಾಯಿ ಸಮಿತಿ ಅಧ್ಯಕ್ಷ ರಮೇಶ್ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು
BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ