ವೃದ್ಧ ದಂಪತಿ ಸೇರಿ 6 ಜನರಲ್ಲಿ ಕೋವಿಡ್
Team Udayavani, Jul 10, 2020, 1:22 PM IST
ಭದ್ರಾವತಿ: ಹಳೇನಗರದ ಬಸವೇಶ್ವರ ವೃತ್ತದ ಸಮೀಪದ ಮಾರುಕಟ್ಟೆ ಪ್ರದೇಶವನ್ನು ಸೀಲ್ಡೌನ್ ಮಾಡಿರುವುದು.
ಭದ್ರಾವತಿ: ನಗರದಲ್ಲಿ ಗುರುವಾರ ಇಬ್ಬರು ದಂಪತಿ ಸೇರಿದಂತೆ ಆರು ಜನರಲ್ಲಿ ಕೋವಿಡ್ ಪಾಸಿಟಿವ್ ಪ್ರಕರಣ ಪತ್ತೆಯಾಗಿದೆ.
ಗಾಂಧಿ ನಗರ: ಗಾಂಧಿನಗರದಲ್ಲಿ 60 ವರ್ಷದ ವೃದ್ಧನಲ್ಲಿ ಪಾಸಿಟಿವ್ ಕಾಣಿಸಿದ್ದು, ಈತ ಬೆಂಗಳೂರಿನಿಂದ ಬಂದಿದ್ದನೆನ್ನಲಾಗಿದೆ.
ಹೊಸಮನೆ: ಹೊಸಮನೆಯ ಹಿಂದೂ ಮಹಾಸಭಾ ಗಣಪತಿ ದೇವಾಲಯದ ಸಮೀಪ ಕಳೆದ 10 ದಿನಗಳ ಹಿಂದೆ ಕೆಎಸ್ಆರ್ಟಿಸಿ ಬಸ್ ಚಾಲಕನೋರ್ವನಲ್ಲಿ ಕೋವಿಡ್ ಸೋಂಕಿನ ಪಾಸಿಟಿವ್ ಪತ್ತೆಯಾದ ಹಿನ್ನೆಲೆಯಲ್ಲಿ ಆತನ ವೃದ್ಧ ತಂದೆ (70)ತಾಯಿ (65)ಯ ಗಂಟಲ ದ್ರವವನ್ನು ಪರೀಕ್ಷೆಗೆ ಕಳುಹಿಸಲಾಗಿತ್ತು. ಈ ಇಬ್ಬರು ದಂಪತಿಗಳಲ್ಲಿ ಕೋವಿಡ್ ಪಾಸಿಟಿವ್ ಇರುವುದು ದೃಢಪಟ್ಟಿದೆ.
ಕಡದಕಟ್ಟೆ: ಕಡದಕಟ್ಟೆ ಬಳಿ 40 ವರ್ಷದ ಓರ್ವ ಪುರುಷನಲ್ಲಿ ಕೋವಿಡ್ ಸೋಂಕು ಕಾಣಿಸಿಕೊಂಡಿದೆ.
ವಿಶ್ವೇಶ್ವರ ನಗರ: ಕಳೆದ ವಾರ ವಿಶ್ವೇಶ್ವರ ನಗರದಲ್ಲಿ ಬೆಂಗಳೂರಿನಿಂದ ಬಂದಿದ್ದ ಇಬ್ಬರು ಸಹೋದರಿಯರಲ್ಲಿ ಕಾಣಿಸಿಕೊಂಡಿದ್ದ ಪಾಸಿಟಿವ್ ಪ್ರಕರಣದ ಸಂಬಂಧ ಹೊಂದಿರುವ ಅದೇ ಮನೆಯ 49 ವರ್ಷ ವಯಸ್ಸಿನ ಮಹಿಳೆಯಲ್ಲಿ ಸೋಂಕು ಇರುವುದು ದೃಢಪಟ್ಟಿದೆ.
ಬಸವೇಶ್ವರ ಸರ್ಕಲ್ಮಾರ್ಕೆಟ್ ಬಳಿ: ಹಳೇನಗರದ ಬಸವೇಶ್ವರ ಸರ್ಕಲ್ ಸಮೀಪದ ಮಾರುಕಟ್ಟೆಯ ಸನಿಹದ ತಿರುವಿನಲ್ಲಿರುವ ಬೆತ್ತದ ಬುಟ್ಟಿ ಹೆಣೆಯುವ 27 ವರ್ಷದ ಯುವಕನಲ್ಲಿ ಕೋವಿಡ್ ಪಾಸಿಟಿವ್ ಕಾಣಿಸಿಕೊಳ್ಳುವ ಮೂಲಕ ಗುರುವಾರ ಸಂಜೆ ವೇಳೆಗೆ ಆರು ಪಾಸಿಟಿವ್ ಪ್ರಕರಣ ಪತ್ತೆಯಾದಂತಾಗಿದೆ.
ಈ ಎಲ್ಲಾ ಸ್ಥಳಕ್ಕೆ ತಹಶೀಲ್ದಾರ್ ಶಿವಕುಮಾರ್ ,ನಗರಸಭಾ ಆಯುಕ್ತ ಮನೋಹರ್, ಪರಿಸರ ಇಂಜನಿಯರ್ ರುದ್ರೇಗೌಡ, ತಾಲೂಕು ಮುಖ್ಯ ವೈದ್ಯಾಧಿಕಾರಿ ಡಾ| ಗಾಯತ್ರಿ, ಆರೋಗ್ಯ ಇಲಾಖೆ ಮುಖ್ಯ ಸಿಬ್ಬಂದಿ ನೀಲೇಶ್ ರಾಜ್ ಹಾಗೂ ಪೊಲೀಸ್ ಅಧಿಕಾರಿಗಳು ತೆರಳಿ ಸೋಂಕಿತರ ನಿವಾಸದ ಪ್ರದೇಶದ 100 ಮೀ. ವ್ಯಾಪ್ತಿಯ ಪ್ರದೇಶವನ್ನು ಸೀಲ್ಡೌನ್ ಮಾಡಿ, ಆರು ಜನ ಸೋಂಕಿತರನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯ ಕೋವಿಡ್ ಚಿಕಿತ್ಸಾ ಕೇಂದ್ರಕ್ಕೆ ಕಳುಹಿಸಿದರು.
ಇದರೊಂದಿಗೆ ಭದ್ರಾವತಿ ತಾಲೂಕಿನಲ್ಲಿ ಈವರೆಗೆ ಒಟ್ಟು 32 ಜನರಲ್ಲಿ ಕೋವಿಡ್ ಪಾಸಿಟಿವ್ ಪ್ರಕರಣ ಪತ್ತೆಯಾದಂತಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು
Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್
Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ
Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು
MUST WATCH
ಹೊಸ ಸೇರ್ಪಡೆ
Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ ಕಾರ್ಯಕರ್ತರ ಘರ್ಷಣೆ…
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ