ರೈತರ ಬದುಕು ಹಸನಾದರೆದೇಶ ಸುಭಿಕ್ಷ: ರಾಘವೇಂದ್ರ
ರಾಜ್ಯ ಸರ್ಕಾರದಿಂದ ರೈತರ ನೆರವಿಗೆ ವಿವಿಧ ಯೋಜನೆ
Team Udayavani, Mar 2, 2020, 4:01 PM IST
ಭದ್ರಾವತಿ: ರೈತನ ಬದುಕು ಸುಖವಾಗಿದ್ದರೆ ದೇಶವೇ ಸುಖವಾಗಿರುತ್ತದೆ ಎಂದು ಸಂಸದ ಬಿ.ವೈ. ರಾಘವೇಂದ್ರ ಹೇಳಿದರು.
ಶನಿವಾರ ಗೊಂದಿ ಯೋಜನಾ ಮಟ್ಟದ ನೀರು ಬಳಕೆದಾರರ ಸಹಕಾರ ಸಂಘಗಳ ಒಕ್ಕೂಟದ ವತಿಯಿಂದ ನಗರದ ಮಿಲ್ಟ್ರಿಕ್ಯಾಂಪ್ ಸಶಸ್ತ್ರ ಮೀಸಲು ಪಡೆ ಆವರಣದಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಒಕ್ಕೂಟದ ನೂತನ ಕಟ್ಟಡ ಹಾಗೂ ಗೊಂದಿ ಅಣೆಕಟ್ಟಿನ ಅಭಿವೃದ್ಧಿ ಕಾಮಗಾರಿಗಳನ್ನು ಉದ್ಘಾಟಿಸಿ ಅವರು ಮಾತನಾಡಿದರು.
ವೈಜ್ಞಾನಿಕವಾಗಿ ಎಷ್ಟೇ ಮುಂದುವರಿದರೂ ಆಹಾರ ಧಾನ್ಯ ಬೆಳೆಯಲು ರೈತನಿಂದ ಮಾತ್ರ ಸಾಧ್ಯ ಎಂಬ ಸತ್ಯವನ್ನು ಮರೆಯಬಾರದು. ಎಲ್ಲರಿಗೂ ಅನ್ನ ನೀಡುವ ರೈತನ ಕಷ್ಟವನ್ನು ದೂರಮಾಡಲು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಅನೇಕ ಯೋಜನೆಗಳನ್ನು ಜಾರಿಗೆ ತಂದಿವೆ. ಆ ಯೋಜನೆಗಳ ಫಲವನ್ನು ರೈತರಿಗೆ ತಲುಪಿಸಿದಾಗ ಸರ್ಕಾರದ ಯೋಜನೆಗಳ ಉದ್ಧೇಶ ಈಡೇರಿದಂತಾಗುತ್ತದೆ. ಕೃಷಿ ಮತ್ತು ತಂತ್ರಜ್ಞಾನಗಳ ಪರಸ್ಪರ ಪೂರಕ ಯೋಜನೆಗಳನ್ನು ಅನುಷ್ಠಾನಕ್ಕೆ ತರಲು ಸರ್.ಎಂ.ವಿಶ್ವೇಶ್ವರಯ್ಯ ಈ ನೆಲದಲ್ಲಿ ಕೈಗೊಂಡಿರುವ ಕಾರ್ಯಗಳಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ.
ಇಂತಹ ಮಹಾನ್ ವ್ಯಕ್ತಿಯನ್ನು ಸ್ಮರಿಸಿಕೊಳ್ಳುವುದು ನಮ್ಮೆಲ್ಲರ ಕರ್ತವ್ಯವಾಗಿದೆ. ಭದ್ರಾ ಜಲಾಶಯ ನಿರ್ಮಿಸುವ ಮೂಲಕ ಇಲ್ಲಿನ ರೈತರ ಬಾಳಿಗೆ ಬೆಳಕು ನೀಡಿದ್ದಾರೆ. ಗೊಂದಿ ಅಣ್ಣೆಕಟ್ಟಿನ ವ್ಯಾಪ್ತಿಯಲ್ಲಿ ಬರುವ ಒಕ್ಕೂಟಗಳು ನೀರನ್ನು ಸರಿಯಾಗಿ ಸದ್ಬಳಕೆ ಮಾಡಿಕೊಳ್ಳಬೇಕೆಂದರು.
ರಾಜ್ಯ ಸರ್ಕಾರ ರೈತರ ಸಾಲ ಮನ್ನಾ ಮಾಡುವ ಜೊತೆಗೆ ನೀರಾವರಿ ಯೋಜನೆಗಳಿಗೆ ಸಾಕಷ್ಟು ಅನುದಾನ ಸಹ ಬಿಡುಗಡೆಗೊಳಿಸಿದೆ. ಒಕ್ಕೂಟದ ಬೇಡಿಕೆಗಳನ್ನು ಈಡೇರಿಸುವ ನಿಟ್ಟಿನಲ್ಲಿ ಪ್ರಾಮಾಣಿಕವಾಗಿ ಪ್ರಯತ್ನಿಸಲಾಗುವುದು ಎಂದರು.
ಶಾಸಕ ಬಿ.ಕೆ. ಸಂಗಮೇಶ್ವರ್ ಮಾತನಾಡಿ, ಕ್ಷೇತ್ರದ ರೈತರ ಬೇಡಿಕೆಗಳನ್ನು ಈಡೇರಿಸಿಕೊಡುವ ಜೊತೆಗೆ ವಿಐಎಸ್ ಎಲ್ ಮತ್ತು ಎಂಪಿಎಂ ಎರಡು ಕಾರ್ಖಾನೆಗಳನ್ನು ಅಭಿವೃದ್ಧಿಗೊಳಿಸಲು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಮುಂದಾಗಬೇಕು. ಈ ನಿಟ್ಟಿನಲ್ಲಿ ಸಂಸದರಿಗೆ ಮನವಿ ಮಾಡುತ್ತೇನೆ ಎಂದರು.
ಒಕ್ಕೂಟದ ಅಧ್ಯಕ್ಷ ಬಿ.ಪಿ. ಚನ್ನಬಸಪ್ಪ ಅಧ್ಯಕ್ಷತೆ ವಹಿಸಿದ್ದರು. ಜಿಪಂ ಸದಸ್ಯರಾದ ಜೆ.ಪಿ. ಯೋಗೇಶ್, ಎಸ್. ಮಣಿಶೇಖರ್, ವೀರಭದ್ರಪ್ಪ ಪೂಜಾರಿ, ರೇಖಾ ಉಮೇಶ್, ತಾಪಂ ಅಧ್ಯಕ್ಷೆ ಆಶಾ ಶ್ರೀಧರ್, ರಾಜ್ಯ ರೈತಸಂಘ ಹಾಗೂ ಹಸಿರು ಸೇನೆ ಗೌರವಾಧ್ಯಕ್ಷ ಎಚ್.ಆರ್. ಬಸವರಾಜಪ್ಪ, ಡಾ| ಶ್ರೀನಿವಾಸ ಮುದ್ರಕರ್ತ, ಬಿಆರ್ಎಲ್ಬಿಸಿ ನಂ.4ರ ಅಧೀಕ್ಷಕ ಇಂಜಿನಿಯರ್ ಆರ್. ರವಿಚಂದ್ರ, ಒಕ್ಕೂಟದ ಉಪಾಧ್ಯಕ್ಷ ಫರೀದ್ ಖಾನ್, ತಾಪಂ ಸದಸ್ಯ ಮಂಜುನಾಥ್ ಕೆ. ಕದಿರೇಶ್, ಮುಖಂಡರಾದ ಮಂಗೋಟೆ ರುದ್ರೇಶ್, ಕದಿರೇಶ್, ಜಿ. ಆನಂದಕುಮಾರ್ ಮತ್ತಿತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್
LokSabha Election; ಕಾಂಗ್ರೆಸ್ ಪರ ನಟ ದರ್ಶನ್ ಪ್ರಚಾರಕ್ಕೆ ಕುಮಾರಸ್ವಾಮಿ ಪ್ರತಿಕ್ರಿಯೆ
Shimoga; ವಿರೋಧ ಪಕ್ಷದವರಿಗೆ ಅಪಪ್ರಚಾರವೇ ಕೊನೆಯ ಅಸ್ತ್ರ: ಬಿವೈ ರಾಘವೇಂದ್ರ
Shimoga; ಕೆ.ಎಸ್. ಈಶ್ವರಪ್ಪರನ್ನು ಭೀಷ್ಮರಿಗೆ ಹೋಲಿಸಿದ ಋಷಿಕುಮಾರ ಸ್ವಾಮೀಜಿ
Bhadravathi: ಲಾರಿ ಡಿಕ್ಕಿ, ರೈಲು ಹಳಿಗಳು ಏರುಪೇರು; ಎರಡೂವರೆ ತಾಸು ಪ್ರಯಾಣಿಕರು ಹೈರಾಣು
MUST WATCH
ಹೊಸ ಸೇರ್ಪಡೆ
CN Ashwath Narayan: ಕಾಂಗ್ರೆಸ್ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ
Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್
Politics: ಡಿ.ಕೆ.ಶಿವಕುಮಾರ್ ಸಿಎಂ ಆಗುತ್ತಾರೆ: ಎಚ್.ವಿಶ್ವನಾಥ್
Bramavara; ಹೆದ್ದಾರಿಯಲ್ಲಿ ಭೀಕರ ಅಪಘಾತ: ಲಾರಿಗೆ ಸಿಲುಕಿ ಬೈಕ್ ಸವಾರ ದುರ್ಮರಣ
D. K. Shivakumar: ಡಿಕೆಶಿ ರಕ್ಷಿಸಲೆಂದೇ ಸಿಬಿಐಗೆ ನೀಡಿದ್ದ ಅನುಮತಿ ವಾಪಸ್