ಭದ್ರಾವತಿ 29ನೇ ವಾರ್ಡ್ ನಲ್ಲಿ ಜೆಡಿಎಸ್ ಗೆ ಭರ್ಜರಿ ಗೆಲುವು, ಬಿಜೆಪಿಗೆ ಕೇವಲ 70 ಮತ!


Team Udayavani, Sep 6, 2021, 9:38 AM IST

ಭದ್ರಾವತಿ 29ನೇ ವಾರ್ಡ್ ನಲ್ಲಿ ಜೆಡಿಎಸ್ ಗೆ ಭರ್ಜರಿ ಗೆಲುವು, ಬಿಜೆಪಿಗೆ ಕೇವಲ 70 ಮತ!

ಶಿವಮೊಗ್ಗ: ತೀವ್ರ ಕುತೂಹಲ ಕೆರಳಿಸಿದ್ದ ಭದ್ರಾವತಿ ನಗರಸಭೆ 29ನೇ ವಾರ್ಡ್ ಚುನಾವಣೆಲ್ಲಿ ಜೆಡಿಎಸ್ ಪಕ್ಷಕ್ಕೆ ವಿಜಯಲಕ್ಷ್ಮಿ ಒಲಿದಿದ್ದಾಳೆ. ಜೆಡಿಎಸ್ ಅಭ್ಯರ್ಥಿ ನಾಗರತ್ನ ಅವರು ಭರ್ಜರಿ ಗೆಲುವು ದಾಖಲಿಸಿದ್ದಾರೆ.

ಯಾರಿಗೆಷ್ಟು ಮತ ?

29ನೇ ವಾರ್ಡ್ ಚುನಾವಣೆಯಲ್ಲಿ ಜೆಡಿಎಸ್ ಪಕ್ಷದ ಅಭ್ಯರ್ಥಿ ನಾಗರತ್ನ ಅವರು 1282 ಮತಗಳನ್ನು ಪಡೆದುಕೊಂಡಿದ್ದಾರೆ. ಕಾಂಗ್ರೆಸ್ ಪಕ್ಷದ ಲೋಹಿತಾ ನಂಜಪ್ಪ 832 ಮತಗಳು, ಬಿಜೆಪಿ ಪಕ್ಷದ ಅಭ್ಯರ್ಥಿ ರಮಾ ವೆಂಕಟೇಶ್ ಅವರು 70 ಮತಗಳನ್ನು ಪಡೆದುಕೊಂಡಿದ್ದಾರೆ. ಜೆಡಿಎಸ್ ಅಭ್ಯರ್ಥಿ 450 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ.

ಯಾವ್ಯಾವ ಬೂತ್ ನಲ್ಲಿ ಯಾರಿಗೆಷ್ಟು ಮತ?

29ನೇ ವಾರ್ಡ್ ನಲ್ಲಿ ನಾಲ್ಕು ಬೂತ್ ಗಳಿದ್ದವು. ಬೂತ್ ನಂಬರ್ 111ರಲ್ಲಿ ಜೆಡಿಎಸ್ 243, ಕಾಂಗ್ರೆಸ್ 143, ಬಿಜೆಪಿ 15 ಮತ ಪಡೆದಿದೆ. ಇಲ್ಲಿ ಒಟ್ಟು 402 ಮತಗಳು ಚಲಾವಣೆಯಾಗಿತ್ತು. ಇನ್ನು ಬೂತ್ 112ರಲ್ಲಿ 420 ಮತ ಚಲಾವಣೆಯಾಗಿತ್ತು. ಈ ಪೈಕಿ ಜೆಡಿಎಸ್ 211, ಕಾಂಗ್ರೆಸ್ 195, ಬಿಜೆಪಿ 10 ಮತ ಪಡೆದಿವೆ. ಬೂತ್ 113ರಲ್ಲಿ 737 ಮತಗಳು ಚಲಾವಣೆಯಾಗಿದ್ದು, ಜೆಡಿಎಸ್ 485, ಕಾಂಗ್ರೆಸ್ 237, ಬಿಜೆಪಿ 12 ಮತಗಳು ಪಡೆದಿವೆ. ಬೂತ್ 114ರಲ್ಲಿ 641 ಮತಗಳು ಚಲಾವಣೆಯಾಗಿದ್ದವು. ಜೆಡಿಎಸ್ 343 ಕಾಂಗ್ರೆಸ್ 257, ಬಿಜೆಪಿ 33 ಮತ ಗಳಿಸಿದೆ.

ಇದನ್ನೂ ಓದಿ:ಕೋವಿಡ್ ನಕಲಿ ಲಸಿಕೆ ವದಂತಿ: ಅಸಲಿ ಲಸಿಕೆಯನ್ನು ಪತ್ತೆ ಮಾಡುವ ವಿಧಾನ ಇಲ್ಲಿದೆ

16 ನೋಟಾ ವೋಟು

ಜಿದ್ದಾಜಿದ್ದಿಯ ಕಣದಲ್ಲಿ ನೋಟಾ ವೋಟುಗಳು ಕೂಡ ಚಲಾವಣೆಯಾಗಿದೆ. 16 ಮಂದಿ ನೋಟಾ ಮತಗಳನ್ನು ಚಲಾಯಿಸಿದ್ದಾರೆ. ಬೂತ್ ನಂಬರ್ 111ರಲ್ಲಿ 1, 112ರಲ್ಲಿ 4, 113ರಲ್ಲಿ 3, 114ರಲ್ಲಿ 8 ನೋಟಾ ಮತಗಳು ಚಲಾವಣೆಯಾಗಿದೆ.

ಪ್ರಾಬಲ್ಯ ಮೆರೆದ ಜೆಡಿಎಸ್

29ನೇ ವಾರ್ಡ್ ನಲ್ಲಿ ಹಿಂದಿನಿಂದಲೂ ಜೆಡಿಎಸ್ ಪ್ರಾಬಲ್ಯವಿದೆ. ಈ ಚುನಾವಣೆಯ ಫಲಿತಾಂಶ ಪುನಃ ಸಾಬೀತುಪಡಿಸಿದೆ. ಈ ಹಿಂದೆ ಜೆಡಿಎಸ್ ಪಕ್ಷದ ಅನಿಲ್ ಕುಮಾರ್ ಅವರು ಈ ವಾರ್ಡ್ ನಿಂದ ಗದ್ದಿದ್ದರು. ಮೀಸಲಾತಿ ಬದಲಾದ ಹಿನ್ನೆಲೆ ಪತ್ನಿ ನಾಗರತ್ನ ಅವರನ್ನು ಕಣಕ್ಕಿಳಿಸಿದ್ದರು. ಈ ಭಾರಿಯೂ ಜನರು ಜೆಡಿಎಸ್ ಪರವಾಗಿ ಒಲವು ತೋರಿಸಿದ್ದಾರೆ.

ಜೆಡಿಎಸ್ ಪಾಳಯದಲ್ಲಿ ಸಂಭ್ರಮ

ತಮ್ಮ ಪಕ್ಷದ ಅಭ್ಯರ್ಥಿ ಗೆಲುವು ಸಾಧಿಸುತ್ತಿದ್ದಂತೆ ಜೆಡಿಎಸ್ ಪಾಳಯದಲ್ಲಿ ಸಂಭ್ರಮಾಚರಣೆ ಆರಂಭವಾಗಿದೆ. ಜೆಡಿಎಸ್ ಕಾರ್ಯಕರ್ತರು ಪಕ್ಷದ ಪರವಾಗಿ, ಪಕ್ಷದ ಮುಖಂಡರ ಪರವಾಗಿ ಘೋಷಣೆಗಳನ್ನು ಕೂಗಿ ಸಂಭ್ರಮಾಚರಣೆ ಮಾಡುತ್ತಿದ್ದಾರೆ.

ನಗರಸಭೆಯಲ್ಲಿ ಬಲಾಬಲ ಹೇಗಿದೆ?

ಜೆಡಿಎಸ್ ಅಭ್ಯರ್ಥಿ ಗೆಲುವಿನಿಂದಾಗಿ ಭದ್ರಾವತಿ ನಗರಸಭೆಯಲ್ಲಿ ಜೆಡಿಎಸ್ ಹುಮ್ಮಸ್ಸು ಹೆಚ್ಚಾಗಿದೆ. 35 ವಾರ್ಡುಗಳ ಪೈಕಿ ಕಾಂಗ್ರೆಸ್ 18, ಜೆಡಿಎಸ್ 12, ಬಿಜೆಪಿ 4, ಪಕ್ಷೇತರರಾಗಿ ಒಬ್ಬ ಅಭ್ಯರ್ಥಿ ಗೆಲುವು ಸಾಧಿಸಿದ್ದಾರೆ.

ಟಾಪ್ ನ್ಯೂಸ್

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

LokSabha Election; ಕಾಂಗ್ರೆಸ್ ಪರ ನಟ ದರ್ಶನ್ ಪ್ರಚಾರಕ್ಕೆ ಕುಮಾರಸ್ವಾಮಿ ಪ್ರತಿಕ್ರಿಯೆ

LokSabha Election; ಕಾಂಗ್ರೆಸ್ ಪರ ನಟ ದರ್ಶನ್ ಪ್ರಚಾರಕ್ಕೆ ಕುಮಾರಸ್ವಾಮಿ ಪ್ರತಿಕ್ರಿಯೆ

Shimoga; ವಿರೋಧ ಪಕ್ಷದವರಿಗೆ ಅಪಪ್ರಚಾರವೇ ಕೊನೆಯ ಅಸ್ತ್ರ: ಬಿವೈ ರಾಘವೇಂದ್ರ

Shimoga; ವಿರೋಧ ಪಕ್ಷದವರಿಗೆ ಅಪಪ್ರಚಾರವೇ ಕೊನೆಯ ಅಸ್ತ್ರ: ಬಿವೈ ರಾಘವೇಂದ್ರ

Shimoga; ಕೆ.ಎಸ್. ಈಶ್ವರಪ್ಪರನ್ನು ಭೀಷ್ಮರಿಗೆ ಹೋಲಿಸಿದ ಋಷಿಕುಮಾರ ಸ್ವಾಮೀಜಿ

Shimoga; ಕೆ.ಎಸ್. ಈಶ್ವರಪ್ಪರನ್ನು ಭೀಷ್ಮರಿಗೆ ಹೋಲಿಸಿದ ಋಷಿಕುಮಾರ ಸ್ವಾಮೀಜಿ

2-shimoga

Bhadravathi: ಲಾರಿ ಡಿಕ್ಕಿ, ರೈಲು ಹಳಿಗಳು ಏರುಪೇರು; ಎರಡೂವರೆ ತಾಸು ಪ್ರಯಾಣಿಕರು ಹೈರಾಣು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

Amit Shah

Modi 3.0 ಅವಧಿಯಲ್ಲಿ ನಕ್ಸಲ್‌ ಮುಕ್ತ ದೇಶ: ಅಮಿತ್‌ ಶಾ

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.