ಭದ್ರಾವತಿ: ಕಳಪೆ ರಸ್ತೆ ಕಾಮಗಾರಿಗೆ ಸಾರ್ವಜನಿಕರ ಬ್ರೇಕ್‌!


Team Udayavani, May 29, 2021, 11:45 AM IST

ಭದ್ರಾವತಿ: ಕಳಪೆ ರಸ್ತೆ ಕಾಮಗಾರಿಗೆ ಸಾರ್ವಜನಿಕರ ಬ್ರೇಕ್‌!

ಭದ್ರಾವತಿ: ಕೋವಿಡ್ ಆರಂಭಕ್ಕೂ ಮುನ್ನ ನಗರಸಭೆ ವ್ಯಾಪ್ತಿಯಲ್ಲಿ ಕೈಗೊಂಡಿದ್ದ ಕೆಲವು ಕಾಮಗಾರಿಗಳನ್ನು ಅಸಮರ್ಪಕ ಹಾಗೂ ಬೇಕಾಬಿಟ್ಟಿ ಮಾಡಲಾಗುತ್ತಿದೆ ಎಂಬ ಸಾರ್ವಜನಿಕರ ಮತ್ತು ಸಂಘ-ಸಂಸ್ಥೆಗಳ ಆರೋಪದ ಮೇರೆಗೆ ಸ್ಥಗಿತಗೊಂಡಿದ್ದ ಕೆಲವು ಕಾಮಗಾರಿಗಳನ್ನು ಈಗ ಲಾಕ್‌ಡೌನ್‌ ಇರುವ ವೇಳೆ ಮರು ಚಾಲನೆ ನೀಡುವ ಪ್ರಯತ್ನವನ್ನು ಲೋಕೋಪಯೋಗಿ ಇಲಾಖೆ ಮತ್ತು ನಗರಸಭೆಯವರು ಮಾಡಲು ಮುಂದಾಗಿದ್ದರು. ಇದನ್ನು ಸಾರ್ವಜನಿಕರು ಖಂಡಿಸಿ ಅಸಮರ್ಪಕ ರಸ್ತೆ ಕಾಮಗಾರಿ ಮಾಡದಂತೆ ತಡೆದ ಘಟನೆ ಶುಕ್ರವಾರ ನಗರದಲ್ಲಿ ನಡೆಯಿತು.

ಕಳಪೆ ಕಾಮಗಾರಿ ಮುಂದುವರಿಕೆ ಸ್ಥಗಿತ: ನಗರದ ತಾಲೂಕು ಕಚೇರಿ ರಸ್ತೆ ಅಗಲೀಕರಣದ ನೆಪದಲ್ಲಿ ಅಸಂಖ್ಯಾತ ಬೃಹತ್‌ ಮರಗಳನ್ನು ಕಡಿದು ಹಾಕಲಾಯಿತು. ಆದರೆ ಮಾಡಿರುವ ರಸ್ತೆ ಅಗಲೀಕರಣ ಅಸಮರ್ಪಕವಾಗಿದ್ದು, ಒಂದೊಂದು ಕಡೆ ಒಂದೊಂದು ಅಳತೆಯಂತೆ ಮನಸ್ಸಿಗೆ ಬಂದಂತೆ ಸಿಮೆಂಟ್‌ ರಸ್ತೆ ಮಾಡಿ, ಕೋರ್ಟ್‌ ಮುಂದೆ ರಸ್ತೆಯ ವಿಸ್ತೀರ್ಣವನ್ನು ಮಾಡದೆ ಅದಕ್ಕೇ ತೇಪೆ ಹಾಕುವ ಕೆಲಸಕ್ಕೆ ಮುಂದಾದಾಗ ನಗರದ ನ್ಯಾಯವಾದಿಗಳ ಸಂಘ ಹಾಗೂ ಸಾರ್ವಜನಕರು ಖಂಡಿಸಿ ಆಗಿರುವ ಲೋಪವನ್ನು ಸರಿಪಡಿಸುವಂತೆ 2020ರ ಮಾರ್ಚ್‌ ತಿಂಗಳಲ್ಲಿ ಪ್ರತಿಭಟನೆ ಮಾಡಿದ್ದರು.

ಆಗ ಅಧಿ ಕಾರಿಗಳು ಸ್ಥಳಕ್ಕೆ ಬಂದು ಆಗಿರುವ ಲೋಪವನ್ನು ಸರಿಪಡಿಸಿ ರಸ್ತೆ ಅಗಲೀಕರಣಕ್ಕೆ ಅಡ್ಡಿಯಾಗಿರುವ ಕಟ್ಟಡವನ್ನು ತೆರವುಗೊಳಿಸಿ ಸರಿಯಾದ ಪ್ರಮಾಣದ ರಸ್ತೆ ಅಗಲೀಕರಣ ಮಾಡುವ ಭರವಸೆ ನೀಡಿದ ಮೇರೆಗೆ ವಕೀಲರ ಸಂಘ ಪ್ರತಿಭಟನೆ ನಿಲ್ಲಿಸಿತ್ತು.

ಶುಕ್ರವಾರ ಕೋರ್ಟ್‌ ಮುಂದಿನ ಸಂಕುಚಿತ ರಸ್ತೆಯನ್ನೇ ಅಗೆದು ತೇಪೆ ಹಾಕಲು ಹಿಟಾಚಿ ಯಂತ್ರದಿಂದ ರಸ್ತೆ ಅಗೆಯಲು ಆರಂಭಿಸುತ್ತಿದ್ದಂತೆ ಕೆಲವು ವಕೀಲರು ಹಾಗೂ ನಾಗರಿಕರು ಕಳಪೆ ಕಾಮಗಾರಿಯನ್ನು ನಿಲ್ಲಿಸುವಂತೆ ಆಗ್ರಹಿಸಿದ ಮೇರೆಗೆ ಸ್ಥಳಕ್ಕೆ ಲೋಕೋಪಯೋಗಿ ಇಲಾಖೆ ಇಂಜಿನಿಯರ್‌ ಜಗದೀಶ್‌ ಬಂದು ರಸ್ತೆ ಅಗಲೀಕರಣದಲ್ಲಿ ಆಗಿರುವ ಲೋಪವನ್ನು ವೀಕ್ಷಿಸಿ ನಗರಸಭೆಯೊಂದಿಗೆ ಮಾತನಾಡಿ, ರಸ್ತೆ ಅಗಲೀಕರಣಕ್ಕೆ ಅಗತ್ಯವಾದಷ್ಟು ಪ್ರಮಾಣದ ಜಾಗದಲ್ಲಿರುವ ಕಟ್ಟಡವನ್ನು ತೆರವಿಗೊಳಿಸಿದ ನಂತರ ರಸ್ತೆ ಅಗಲೀಕರಣ ಮಾಡುತ್ತೇವೆ.

ಅಲ್ಲಿಯವರೆಗೆ ಈ ಕಾಮಗಾರಿಯನ್ನು ಮಾಡುವುದಿಲ್ಲ. ಅಗೆದಿರುವ ಜಾಗಕ್ಕೆ ಜಲ್ಲಿ ಕಲ್ಲು ಹಾಕಿ ಸರಿಪಡಿಸಿಕೊಡುವುದಾಗಿ ಭರವೆಸೆ ನೀಡಿದ ನಂತರ ವಕೀಲರು ಮತ್ತು ನಾಗರಿಕರು ಸ್ಥಳದಿಂದ ತೆರಳಿದರು.

ಟಾಪ್ ನ್ಯೂಸ್

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು1

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.