BJP; ಹಾವೇರಿ ಟಿಕೆಟ್ ಬೊಮ್ಮಾಯಿಗೆ: ಕಣ್ಣೀರಿಟ್ಟ ಈಶ್ವರಪ್ಪ ಕುಟುಂಬ
Team Udayavani, Mar 13, 2024, 9:04 PM IST
ಶಿವಮೊಗ್ಗ : ಬಿಜೆಪಿ ಎರಡನೇ ಪಟ್ಟಿ ಪ್ರಕಟವಾಗುತ್ತಿದ್ದಂತೆ ಹಾವೇರಿ ಕ್ಷೇತ್ರಕ್ಕೆ ಬಸವರಾಜ್ ಬೊಮ್ಮಾಯಿ ಅವರ ಹೆಸರು ಘೋಷಣೆಯಾದುದನ್ನು ಕಂಡು ಮಾಜಿ ಸಿಎಂ ಕೆ.ಎಸ್. ಈಶ್ವರಪ್ಪ ಅವರ ಕುಟುಂಬ ಕಣ್ಣೀರಿಟ್ಟ ಬಗ್ಗೆ ವರದಿಯಾಗಿದೆ.
ಟಿಕೆಟ್ ಪ್ರಕಟವಾಗುತ್ತಿದ್ದಂತೆ ಹಾವೇರಿ ಟಿಕೆಟ್ ಗಾಗಿ ತೀವ್ರ ಪ್ರಯತ್ನ ನಡೆಸಿದ್ದ ಕೆ.ಈ.ಕಾಂತೇಶ್ ಇತರ ಬೆಂಬಲಿಗರೊಂದಿಗೆ ಈಶ್ವರಪ್ಪ ಅವರು ಕಾರಿನಲ್ಲಿ ಹೊರಟಿದ್ದಾರೆ. ಫೋನ್ ಕರೆಯೊಂದು ಬರುತ್ತಿದ್ದಂತೆ ತುರ್ತಾಗಿ ಈಶ್ವರಪ್ಪ ಮತ್ತು ಕಾಂತೇಶ್ ಅವರು ತೆರಳಿದ್ದಾರೆ. ಅವರ ಮುಖದಲ್ಲಿ ತೀವ್ರ ಬೇಸರ ಮನೆ ಮಾಡಿತ್ತು. ಮನೆಯಿಂದ ಹೊರಡುತ್ತಿದ್ದಂತೆ, ಮಾಧ್ಯಮದವರನ್ನು ಹೊರಗೆ ಹೋಗಿ ಎಂದ ಕುಟುಂಬ ಸದಸ್ಯರು ಕೇಳಿಕೊಂಡಿದ್ದಾರೆ. ಕಾಂತೇಶ್ ಪತ್ನಿ ಸೇರಿ ಈಶ್ವರಪ್ಪ ಕುಟುಂಬ ಕಣ್ಣೀರು ಹಾಕುತ್ತಿರುವ ದೃಶ್ಯವೂ ಕಂಡು ಬಂದಿರುವ ಬಗ್ಗೆ ವರದಿಯಾಗಿದೆ.
ಬಸವರಾಜ್ ಬೊಮ್ಮಾಯಿ ಅವರು ಶಿಗ್ಗಾಂವ ಕ್ಷೇತ್ರದ ಹಾಲಿ ಶಾಸಕರಾಗಿದ್ದರೂ ಬಿಜೆಪಿ ಟಿಕೆಟ್ ಘೋಷಣೆ ಮಾಡಿದೆ. ಕಾಂತೇಶ್ ಅವರು ಟಿಕೆಟ್ ಗಾಗಿ ಮಾಜಿ ಸಿಎಂ ಯಡಿಯೂರಪ್ಪ ಅವರ ಮೂಲಕವೂ ಒತ್ತಡ ಹೇರಿದ್ದರು. ಟಿಕೆಟ್ ಕೊಡಿಸುವ ಪ್ರಯತ್ನ ಮಾಡುವುದಾಗಿಯೂ ಯಡಿಯೂರಪ್ಪ ಅವರು ಬಹಿರಂಗ ಹೇಳಿಕೆ ನೀಡಿದ್ದರು.
ಇನ್ನೊಂದೆಡೆ ಮಾಜಿ ಸಚಿವ ಬಿ.ಸಿ.ಪಾಟೀಲ್ ಅವರೂ ಹಾವೇರಿ ಕ್ಷೇತ್ರದ ಟಿಕೆಟ್ ಗಾಗಿ ಲಾಭಿ ನಡೆಸಿದ್ದರು. ಹಾಲಿ ಸಂಸದ ಶಿವಕುಮಾರ್ ಉದಾಸಿ ಅವರು ಕಣದಿಂದ ನಿವೃತ್ತಿಯಾಗುವುದಾಗಿ ಘೋಷಿಸಿದ ಬಳಿಕ, ಕಳೆದ ವಿಧಾನಸಭಾ ಚುನಾವಣೆಯ ಬಳಿಕ ಕಾಂತೇಶ್ ಅವರು ಹಾವೇರಿ ಕ್ಷೇತ್ರದ ಮೇಲೆ ಕಣ್ಣಿಟ್ಟು ಚುನಾವಣೆ ಸಿದ್ಧತೆಯನ್ನೂ ನಡೆಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ
Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು
ಮುನ್ನೂರಿಗೆ ಹೋಗುವ ರಸ್ತೆಯ ಧರೆ ಕುಸಿತ: ಸಂಪರ್ಕ ಕಡಿತಗೊಳ್ಳುವ ಆತಂಕ…!
Arasalu; ರೈಲು ಹಳಿ ಮೇಲೆ ಮರ ಬಿದ್ದು ರೈಲು ಸಂಚಾರ ಸ್ಥಗಿತ
ನಿರಂತರ ಬಿರುಗಾಳಿ ಮಳೆ: ತೀರ್ಥಹಳ್ಳಿ,ಸಾಗರ ತಾಲೂಕಿನ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ
MUST WATCH
ಹೊಸ ಸೇರ್ಪಡೆ
Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ
Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ
Chittapur: ಪಟ್ಟಣದ ಹೊರವಲಯದಲ್ಲಿ ಯುವಕನ ಶವ ಪತ್ತೆ: ಕೊಲೆ ಶಂಕೆ
Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ
Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.