2024 ರಲ್ಲೂ ಮತ್ತೊಮ್ಮೆ ವಿಜೃಂಭಿಸಲಿದೆ ಬಿಜೆಪಿ

ಮೋದಿಯವರ 8 ವರ್ಷದ ಆಡಳಿತದಲ್ಲಿ ವಿಶ್ವಮಟ್ಟದಲ್ಲಿ ದೇಶದ ಹಿರಿಮೆ ಹೆಚ್ಚಳ: ಸಂಸದ ರಾಘವೇಂದ್ರ

Team Udayavani, Jun 3, 2022, 3:12 PM IST

bjp

ಶಿವಮೊಗ್ಗ: ಪ್ರಧಾನಿ ಮೋದಿ ಅವರ 8 ವರ್ಷದ ಸಮರ್ಥ ಅಭಿವೃದ್ಧಿಯ ಆಡಳಿತದ ಫಲವಾಗಿ 2024 ರಲ್ಲಿ ಮತ್ತೂಮ್ಮೆ ಬಿಜೆಪಿ ರಾಷ್ಟ್ರಾದ್ಯಂತ ವಿಜೃಂಭಿಸಲಿದೆ ಎಂದು ಸಂಸದ ಬಿ.ವೈ. ರಾಘವೇಂದ್ರ ಹೇಳಿದರು.

ಬಿಜೆಪಿ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿ ಮತ್ತು ಸಂವಾದ ಕಾರ್ಯಕ್ರಮದಲ್ಲಿ ಅವರು ಮಾತನಾಡಿ, ಪ್ರಧಾನಿ ಅವರು ಕಳೆದ 8 ವರ್ಷಗಳಲ್ಲಿ ಅನೇಕ ಅಭಿವೃದ್ಧಿ ಕಾರ್ಯಕ್ರಮ ರೂಪಿಸಿ ಜಾರಿಗೊಳಿಸಿದ್ದಾರೆ. ರೈತರಿಗೆ, ಬಡವರಿಗೆ, ಕಾರ್ಮಿಕರಿಗೆ ವಿಶೇಷ ಯೋಜನೆಗಳನ್ನು ರೂಪಿಸಿದ್ದಾರೆ. ಕೋಟ್ಯಂತರ ಜನ ಇದರ ಪ್ರಯೋಜನ ಪಡೆದಿದ್ದಾರೆ. ಅವರ 8 ವರ್ಷದ ಸಾಧನೆ ಅಷ್ಟದಿಕ್ಕುಗಳಲ್ಲಿಯೂ ಪಸರಿಸಿದೆ. ಭಾರತದ ಕೀರ್ತಿ ಪತಾಕೆಯನ್ನು ಹಾರಿಸಿದೆ. ಅವರೇ ಹೇಳುವಂತೆ ನಾನೊಬ್ಬ ಸೇವಕ ಎಂದು ದೇಶದ ಸಮಗ್ರ ಅಭಿವೃದ್ಧಿಯ ಜೊತೆಗೆ ರಕ್ಷಣೆ, ಆಂತರಿಕ ಭದ್ರತೆಗೆ ಹೆಚ್ಚು ಒತ್ತು ಕೊಟ್ಟಿದ್ದಾರೆ. ಭಾರತವನ್ನು ಬಲಿಷ್ಠ ರಾಷ್ಟ್ರವನ್ನಾಗಿ ರೂಪಿಸಿದ ಕೀರ್ತಿ ಮೋದಿ ಅವರಿಗೆ ಸಲ್ಲುತ್ತದೆ ಎಂದರು.

ಪ್ರಧಾನಿ ಮೋದಿ ಅವರು ಕೊರೊನಾ ಸಮಯದಲ್ಲಿ ಅತ್ಯಂತ ಎಚ್ಚರಿಕೆಯಿಂದ ಜನರ ಪ್ರಾಣಗಳನ್ನು ರಕ್ಷಿಸಿದ್ದಾರೆ. ಅನೇಕ ಬಡರಾಷ್ಟ್ರಗಳಿಗೆ ಲಸಿಕೆಯನ್ನು ಉಚಿತವಾಗಿ ನೀಡಿದ್ದಾರೆ. ಅವರ ವಿದೇಶಾಂಗ ನೀತಿ ಜಗತ್ತಿನ ಗಮನ ಸೆಳೆದಿದೆ. 110 ಕ್ಕೂ ಹೆಚ್ಚು ಬಾರಿ ವಿದೇಶ ಪ್ರವಾಸ ಮಾಡಿದ್ದಾರೆ. 60 ಕ್ಕೂ ಹೆಚ್ಚು ದೇಶಗಳಿಗೆ ಭೇಟಿ ನೀಡಿದ್ದಾರೆ. ಅಮೆರಿಕದ ಸಂಸತ್‌ ಭವನ ಕೂಡ ಅವರನ್ನು ಅಭಿನಂದಿಸಿದೆ. ಆಂತರಿಕ ಭದ್ರತೆಯ ವಿಷಯದಲ್ಲಿ ಇಡೀ ವಿಶ್ವವೇ ಅಚ್ಚರಿಪಡುವಷ್ಟು ಕ್ರಮ ತೆಗೆದುಕೊಂಡಿದ್ದಾರೆ. ಕಾಶ್ಮೀರ ವಿಷಯ, ಅರುಣಾಚಲ ಪ್ರದೇಶದಲ್ಲಿ ರಕ್ಷಣೆ, ನಕ್ಸಲ್‌ ಪೀಡಿತ ಪ್ರದೇಶಗಳ ಅಭಿವೃದ್ಧಿ, ಪಾಕಿಸ್ತಾನವನ್ನು ಒಂಟಿಯಾಗಿ ಮಾಡಿದ್ದು ಇತಿಹಾಸ ಎಂದರು. 370 ನೇ ವಿಧಿ ರದ್ದು, ರಾಮಮಂದಿರ ಸೇರಿದಂತೆ ಇಡೀ ರಾಷ್ಟ್ರಾದ್ಯಂತ ಹಿಂದೂ ದೇವಾಲಯಗಳ ಪುನರುಜ್ಜೀವನಗೊಳಿಸಿದ್ದು, ಯೋಗಕ್ಕೆ ಒತ್ತುಕೊಟ್ಟಿದ್ದು ಉಕ್ರೇನ್‌ ಯುದ್ಧದಲ್ಲಿ 23 ಸಾವಿರ ವಿದ್ಯಾರ್ಥಿಗಳನ್ನು ರಕ್ಷಣೆ ಮಾಡಿ ಭಾರತಕ್ಕೆ ವಾಪಸ್‌ ಕರೆಸಿಕೊಂಡಿದ್ದು ಮೋದಿ ಅವರ ಸಾಧನೆ ಎಂದು ಕೊಂಡಾಡಿದರು.

ದೇಶವನ್ನು ಬಲಿಷ್ಠಗೊಳಿಸಿದ್ದಲ್ಲದೇ ಅಭಿವೃದ್ಧಿ ಪಥದಲ್ಲಿ ತೆಗೆದುಕೊಂಡು ಹೋಗಿದ್ದಾರೆ. ಶಿಕ್ಷಣ, ಆರೋಗ್ಯ, ಭದ್ರತೆ, ಕೈಗಾರಿಕಾ ಅಭಿವೃದ್ಧಿ ಹೀಗೆ ಎಲ್ಲಾ ಕ್ಷೇತ್ರಗಳ ಅಭಿವೃದ್ಧಿಯಾಗಿದೆ. ಪ್ರಧಾನ ಮಂತ್ರಿಗಳ ಅನೇಕ ಜನಪ್ರಿಯ ಯೋಜನೆಗಳಿಂದ ಕೋಟಿ ಕೋಟಿ ಜನ ಪ್ರಯೋಜನ ಪಡೆದಿದ್ದಾರೆ. ಬೀದಿ ಬದಿ ವ್ಯಾಪಾರಿಗಳಿಗೆ ನೆರವು ನೀಡಿದ್ದಾರೆ. 8 ಲಕ್ಷ ಹಳ್ಳಿಗಳನ್ನು ಬಹಿರ್ದೆಸೆ ಮುಕ್ತ ಮಾಡಿದ್ದಾರೆ. ಎರಡೂವರೆ ಕೋಟಿ ವಿದ್ಯುತ್‌ ಸಂಪರ್ಕ ಕಲ್ಪಿಸಿದ್ದಾರೆ. 9.5 ಕೋಟಿ ಬಡವರ ಮನೆಗಳಿಗೆ ನೀರು ನೀಡಿದ್ದಾರೆ. 45 ಕೋಟಿಗೂ ಹೆಚ್ಚು ಜನ ವಿವಿಧ ಯೋಜನೆಗಳ ಪ್ರಯೋಜನ ಪಡೆದಿದ್ದಾರೆ ಎಂದರು.

ರಾಜ್ಯ ಸರ್ಕಾರ ಕೂಡ ಅಭಿವೃದ್ಧಿಯ ಪಥದತ್ತ ಸಾಗಿದೆ. ಡಬಲ್‌ ಇಂಜಿನ್‌ ಸರ್ಕಾರದಿಂದ ಸಾಕಷ್ಟು ಯೋಜನೆಗಳು ಕಾರ್ಯರೂಪಕ್ಕೆ ಬಂದಿವೆ. ಕೇಂದ್ರದಿಂದ ಸಾಕಷ್ಟು ಹಣ ಕೂಡ ಬಂದಿದೆ. ಸ್ಮಾರ್ಟ್‌ ಸಿಟಿ ಕೆಲಸಗಳು ಮುಗಿದ ಮೇಲೆ ಅದರ ಮಹತ್ವ ಗೊತ್ತಾಗುತ್ತದೆ. ಸಣ್ಣ ಪುಟ್ಟ ತಪ್ಪುಗಳು ಇರಬಹುದು. ಅವುಗಳನ್ನು ಸರಿಪಡಿಸಲಾಗುವುದು ಎಂದರು.

ಒಟ್ಟಾರೆ, ಮೋದಿ ಅವರ 8 ವರ್ಷದ ಸಾಧನೆಯನ್ನು ಪ್ರತಿ ಬೂತ್‌ ಮಟ್ಟದಿಂದ ತಿಳಿಸಲಾಗುವುದು. ನಮ್ಮ ಕಾರ್ಯಕರ್ತರು ಮೋದಿ ಅವರ ಎಲ್ಲಾ ಯೋಜನೆಗಳ ಬಗ್ಗೆ ಅರಿವು ಮೂಡಿಸುವರು. ಈ ಎಲ್ಲಾ ಸಾಧನೆಗಳಿಂದ 2024 ರಲ್ಲಿ ಕೇಂದ್ರ ಮತ್ತು ರಾಜ್ಯಗಳಲ್ಲಿ ಬಿಜೆಪಿ ಮತ್ತೆ ವಿಜೃಂಭಿಸುತ್ತದೆ ಎಂದರು. ಗೋಷ್ಠಿಯಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಟಿ.ಡಿ. ಮೇಘರಾಜ್‌, ವಿಭಾಗೀಯ ಪ್ರಭಾರಿ ಗಿರೀಶ್‌ ಪಟೇಲ್‌ ಇದ್ದರು.

ಟಾಪ್ ನ್ಯೂಸ್

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ

BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.