ಡಿಸಿಎಂ ಹುದ್ದೆ ಬಗ್ಗೆ ನನಗೆ ಗೊತ್ತಿಲ್ಲ, ಸಂಪುಟ ವಿಸ್ತರಣೆ ಬಗ್ಗೆ ಸಿಎಂ ನಿರ್ಧಾರ: ಈಶ್ವರಪ್ಪ
Team Udayavani, Aug 25, 2019, 12:57 PM IST
ಶಿವಮೊಗ್ಗ: ರಾಜ್ಯದಲ್ಲಿ ಸಂಪುಟ ವಿಸ್ತರಣೆ, ಖಾತೆ ಹಂಚಿಕೆ ಬಗ್ಗೆ ಮುಖ್ಯಮಂತ್ರಿಗಳು ನಿರ್ಧಾರ ತೆಗೆದುಕೊಳ್ತಾರೆ. ಉಪಮುಖ್ಯಮಂತ್ರಿ ಹುದ್ದೆಯ ಬಗ್ಗೆ ನನಗೆ ಗೊತ್ತಿಲ್ಲ ಎಂದು ಸಚಿವ ಕೆ.ಎಸ್.ಈಶ್ವರಪ್ಪ ಹೇಳಿಕೆ ನೀಡಿದ್ದಾರೆ.
ನಗರದಲ್ಲಿ ಮಾತನಾಡಿದ ಅವರು, ನನಗೆ ಯಾವುದೇ ಖಾತೆ ಕೊಟ್ಟರೂ ನಿಭಾಯಿಸುವೆ. ಹಿರಿಯರು ತೆಗೆದುಕೊಳ್ಳುವ ನಿರ್ಧಾರಕ್ಕೆ ಬದ್ಧವಾಗಿದ್ದೇವೆ ಎಂದರು.
ಪಕ್ಷದ ಬಗ್ಗೆ ಮಾತನಾಡಿದ ಅವರು, ಪಕ್ಷದಲ್ಲಿ ಸಣ್ಣಪುಟ್ಟ ಗೊಂದಲಗಳಿದ್ದು ನಿವಾರಣೆ ಮಾಡಲಾಗುತ್ತದೆ. ಬಿಜೆಪಿ ಒಂದು ಕುಟುಂಬವಿದ್ದಂತೆ. ಕುಟುಂಬದ ಹಿರಿಯರು ಇದನ್ನು ಬಗೆಹರಿಸುತ್ತಾರೆ ಎಂದರು. ಲಕ್ಷಣ್ ಸವದಿಗೆ ಸಚಿವ ಸ್ಥಾನ ನೀಡಿರುವ ವಿಚಾರ ಪಕ್ಷದ ಹಿರಿಯರು ತಗೊಂಡಿರೋ ನಿರ್ಧಾರ. ಹಿರಿಯರ ನಿರ್ಧಾರಕ್ಕೆ ಎಲ್ಲರೂ ಬದ್ಧ ಎಂದು ಈಶ್ವರಪ್ಪ ಹೇಳಿದರು.