‘ಸಿ.ಟಿ.ರವಿ ಇದ್ದಾನಲ್ಲಾ. ಅವನು ಕಮ್ಯುನಲ್ ಫೆಲ್ಲೋ..’: ಸಿದ್ದರಾಮಯ್ಯ ವಾಗ್ದಾಳಿ
Team Udayavani, Nov 29, 2022, 2:34 PM IST
ಶಿವಮೊಗ್ಗ: ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದರೆ ಕೊಲೆ ಸುಲಿಗೆ ಜಾಸ್ತಿಯಾಗತ್ತದೆ ಎಂಬ ಮಾಜಿ ಸಚಿವ ಸಿ.ಟಿ. ರವಿ ಹೇಳಿಕೆಗೆ ಪ್ರತಿಕ್ರಿಯೆ ನೀಡಿರುವ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ, “ಸಿ.ಟಿ ರವಿ ಇದ್ದಾನಲ್ಲಾ ಅವನು ಕಮ್ಯುನಲ್ ಫೆಲ್ಲೋ. ಅವನಿಗೆಲ್ಲಾ ನಾನು ಉತ್ತರ ಕೊಡಲ್ಲ. ಹಿ ಇಸ್ ಏ ಮೋಸ್ಟ್ ಕಮ್ಯುನಲ್ ಫೆಲ್ಲೋ. ಅವರಿಗೆ ಜಾತ್ಯಾತೀತ ತತ್ವ ಅರ್ಥವಾಗಲ್ಲ. ಸಂವಿಧಾನ ಅವರಿಗೆ ಅರ್ಥವಾಗಲ್ಲ. ಅವನಿಗೆ ನಾನು ಉತ್ತರ ಕೊಡುತ್ತಾ ಕೂರಲ್ಲ” ಎಂದಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚುನಾವಣೆ ಸ್ಫರ್ಧೆಗೆ ಬೇರೆ ಕ್ಷೇತ್ರಗಳಿಂದ ಆಹ್ವಾನ ವಿಚಾರಕ್ಕೆ ಪ್ರತಿಕ್ರಿಯೆ ನೀಡಿ, ‘’ಕರೆಯುತ್ತಿದ್ದಾರೆ. ನಾನೂ ಅರ್ಜಿ ಹಾಕಿದ್ದೇನೆ. ಹೈಕಮಾಂಡ್ ಗೆ ಬಿಟ್ಟಿದ್ದೇನೆ. ಅವರೇ ಹೇಳಿದ ಜಾಗದಲ್ಲಿ ಸ್ಪರ್ಧೆ ಮಾಡುತ್ತೇನೆ’’ ಎಂದರು.
ಇದನ್ನೂ ಓದಿ:ಗಂಗಾವತಿ: ಅನಾಹುತ ಸಂಭವಿಸುವ ಮುನ್ನ ಎಚ್ಚತ್ತ ತಾಲೂಕು ಆಡಳಿತ; ಬೃಹತ್ ಮರ ನೆಲಸಮ
ಒಂದೇ ಕ್ಷೇತ್ರಕ್ಕೆ ಹಲವು ಜನರಿಂದ ಅರ್ಜಿ ವಿಚಾರವಾಗಿ ಸಾಮಾಜಿಕ ನ್ಯಾಯದ ಜೊತೆಗೆ ಗೆಲುವುನ್ನು ಪರಿಗಣನೆ ಮಾಡಬೇಕಾಗುತ್ತದೆ. ಕೋಮುವಾದಿ ಪಕ್ಷ, ಮನುವಾದಿ ಪಕ್ಷವನ್ನು ಕಿತ್ತು ಹಾಕಬೇಕು. ಇವರಿಂದ ದೇಶ ಮತ್ತು ರಾಜ್ಯ ಉಳಿಯುವುದಿಲ್ಲ. ಇದು ನಮ್ಮ ಕಾರ್ಯಕರ್ತರ ಅಭಿಪ್ರಾಯವಾಗಿದೆ. ಟಿಕೆಟ್ ಯಾರಿಗೆ ಸಿಗುತ್ತದೆ ಸಿಗುವುದಿಲ್ಲ ಎನ್ನುವುದು ಪ್ರಶ್ನೆ ಅಲ್ಲ. ಎಲ್ಲರೂ ಒಗ್ಗಟ್ಟಿನಿಂದ ಟಿಕೆಟ್ ಕೊಟ್ಟ ಅಭ್ಯರ್ಥಿ ಪರ ಕೆಲಸ ಮಾಡುತ್ತಾರೆ ಎಂದರು.
ಕೊಪ್ಪಳದಲ್ಲಿ ನಾನು ಅಭ್ಯರ್ಥಿ ಘೋಷಣೆ ಮಾಡಿಲ್ಲ. ಮದುವೆ ಸಮಾರಂಭದಲ್ಲಿ ರಾಜಕೀಯ ಮಾತನಾಡಲು ಒತ್ತಾಯಿಸಿದರು. ಈ ಹಿನ್ನೆಲೆಯಲ್ಲಿ ಟಿಕೆಟ್ ಆಕಾಂಕ್ಷಿಗಳ ಹೆಸರು ಹೇಳಿದ್ದೆ ಅಷ್ಟೇ ಎಂದು ಸಿದ್ದರಾಮಯ್ಯ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ವಿಐಎಸ್ಎಲ್ ಉಳಿಸುವಂತೆ ಕಾರ್ಖಾನೆ ಎದುರು ಜೆಡಿಎಸ್ ಪ್ರತಿಭಟನೆ ; ಹೆಚ್ ಡಿಕೆ ಭಾಗಿ
ಕಾಂಕ್ರೀಟ್ ಪೇವ್ ಮೆಂಟ್ ನಿರ್ಮಾಣ : ಬಾಳೆಬರೆ ಘಾಟ್ 2 ತಿಂಗಳು ಬಂದ್
ಸಕ್ರೆಬೈಲಿನಿಂದ 2 ಆನೆಗಳ ಮಧ್ಯಪ್ರದೇಶಕ್ಕೆ ರವಾನೆ
50 ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣಗೊಂಡ ರಸ್ತೆ ಒಂದೇ ವಾರದಲ್ಲಿ ಕಿತ್ತೋಯ್ತು; ಗ್ರಾಮಸ್ಥರ ಆಕ್ರೋಶ
ಮಾತನಾಡುವಾಗ ಕಾಮನ್ ಸೆನ್ಸ್ ಇರಬೇಕು: ಆರಗ ವಿರುದ್ಧ ಮಾಜಿ ಸಚಿವ ಕಿಮ್ಮನೆ ವಾಗ್ದಾಳಿ
MUST WATCH
ತುಳು ,ಕೊಂಕಣಿ ಭಾಷೆ ಕನ್ನಡದ ಸಹೋದರ ಭಾಷೆಗಳು | ಉದಯವಾಣಿ ಜತೆ ಡಾ| ಮಹೇಶ್ ಜೋಷಿ ಸಂವಾ
ಮಿಸ್ಟರ್ ಬೀನ್ ಈಗ ಎಲ್ಲಿದ್ದಾರೆ? ಹೇಗಿದ್ದಾರೆ |ಯಾರು ಈ ಮಿಸ್ಟರ್ ಬೀನ್ ?
ಮಲ್ಪೆ ಮೀನಿನ ಮಾರುಕಟ್ಟೆ ಹೇಗೆದೆ ನೋಡಿ | ಯಾವ ಮೀನಿಗೆ ಎಷ್ಟು ಬೆಲೆ ?
ವಿದ್ಯಾರ್ಥಿ ಭವನ್ ವೈಟರ್ ಸಾಹಸಕ್ಕೆ ಆನಂದ್ ಮಹೀಂದ್ರ ಫುಲ್ ಖುಷ್; ಇಲ್ಲಿದೆ ವಿಡಿಯೋ
ಕಾಫಿನಾಡಲ್ಲಿ ಮುಂದುವರಿದ ಮತದಾನ ಬಹಿಷ್ಕಾರದ ಕೂಗು
ಹೊಸ ಸೇರ್ಪಡೆ
ಪಡುಬಿದ್ರಿ: ಪೋಕ್ಸೋ ಪ್ರಕರಣದ ಆರೋಪಿಗೆ 22 ವರ್ಷಗಳ ಸಜೆ, 22 ಸಾವಿರ ದಂಡ
ಪಠಾಣ್ ನಿಜವಾದ ಕಲೆಕ್ಷನ್ ಎಷ್ಟು?; ನೆಟಿಜನ್ ಗಳಿಗೆ ತಿರುಗೇಟು ಕೊಟ್ಟ ಶಾರುಖ್
ಶಿವಸೇನೆ ಕೋಮುವಾದಿ ಪಕ್ಷ ಅಲ್ಲವೇ: ಡಾ.ಸುಧಾಕರ್ ಪ್ರಶ್ನೆ
ಕಾಂಗ್ರೆಸ್ನಲ್ಲೇ ಅಸಮಾಧಾನ ಭುಗಿಲು: ಸಚಿವ ಬಿ.ಸಿ.ಪಾಟೀಲ್
ಅಮೆರಿಕದ ಈಶಾನ್ಯ ಭಾಗಕ್ಕೆ ಶೀತ ಮಾರುತ ಪ್ರಕೋಪ: – 46 ಡಿಗ್ರಿ ಸೆಲ್ಸಿಯಸ್ಗೆ ಇಳಿದ ತಾಪಮಾನ