ಕಾಫಿರ್ ರನ್ನು ಕೊಂದರೆ ಸ್ವರ್ಗ ಪ್ರಾಪ್ತಿ?: ಮುಸ್ಲಿಂ ವಿದ್ವಾಂಸರಿಗೆ ಸಿ.ಟಿ.ರವಿ ಪ್ರಶ್ನೆ

ಯೋಜನಾಬದ್ಧವಾಗಿ ಲವ್ ಜಿಹಾದ್ ಮತ್ತು ಹಿಂದೂ ಕಾರ್ಯಕರ್ತರ ಹತ್ಯೆ, ಧರ್ಮ ಗ್ರಂಥಗಳ ಬಗ್ಗೆ ಚರ್ಚೆ ಮಾಡೋಣ

Team Udayavani, Feb 28, 2022, 6:53 PM IST

1-fds

ಶಿವಮೊಗ್ಗ : ಹತ್ಯೆಗೀಡಾದ ಬಜರಂಗದಳ ಕಾರ್ಯಕರ್ತ ಹರ್ಷ ಮನೆಗೆ ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿ ಸಿ.ಟಿ.ರವಿ ಸೋಮವಾರ ಭೇಟಿ ನೀಡಿ ಕುಟುಂಬದವರಿಗೆ ಸಾಂತ್ವನ ಹೇಳಿದರು. ಅವರೊಂದಿಗೆ ಅಪೆಕ್ಸ್ ಬ್ಯಾಂಕ್ ಅಧ್ಯಕ್ಷ ಬೆಳ್ಳಿ ಪ್ರಕಾಶ್ ಮತ್ತಿತರ ಮುಖಂಡರು ಹಾಜರಿದ್ದರು.

ಸುದ್ದಿಗಾರರೊಂದಿ ಮಾತನಾಡಿದ ಅವರು, ಸರ್ಕಾರ ಕ್ರಮದ ಮೂಲಕ 24 ಗಂಟೆ ಒಳಗೆ ಕೊಲೆ ಆರೋಪಿಗಳನ್ನು ಬಂಧಿಸಲಾಗಿದೆ. ಈಗಾಗಲೇ ಹತ್ತು ಜನ ಆರೋಪಿಗಳನ್ನು ಬಂಧಿಸಲಾಗಿದೆ.ಆರೋಪಿಗಳಿಗೆ ಕುಮ್ಮಕ್ಕು ನೀಡಿದವರು ಯಾರು, ಯಾವ ಸಂಘಟನೆ ಈ ಘಟನೆ ಹಿಂದೆ ಇದೆ ಎಂದು ಮೂಲಕ್ಕೆ ಕೈಹಾಕಿ ಪೊಲೀಸರು ತನಿಖೆ ನಡೆಸುತಿದ್ದಾರೆ ಎಂದರು.

ಹರ್ಷ ಕೊಲೆ ಆರೋಪಿಗಳಿಗೆ ಕಠಿಣ ಶಿಕ್ಷೆಯಾದಾಗ ಮಾತ್ರ ನ್ಯಾಯ ಸಿಕ್ಕಂತಾಗುತ್ತದೆ.ಹರ್ಷ ಕೊಲೆ ಮಾತ್ರವಲ್ಲ, ರಾಜ್ಯದಲ್ಲಿ ಸಾಲು ಸಾಲು ಕೊಲೆಗಳು ನಡೆಯುತ್ತಿದೆ. ಯೋಜನಾಬದ್ಧವಾಗಿ ಹೇಗೆ ಲವ್ ಜಿಹಾದ್ ನಡೆಸುತ್ತಾರೆಯೋ ಹಾಗೆಯೇ ಯೋಜನಾ ಬದ್ಧವಾಗಿ ಹಿಂದು ಧರ್ಮದ ಕೆಲಸದಲ್ಲಿ ತೊಡಗಿದವರನ್ನು ಹತ್ಯೆ ಮಾಡಲಾಗುತ್ತಿದೆ.

ಕೇರಳದಲ್ಲಿ ಟಾರ್ಗೆಟ್ ಮಾಡಿ ಕೊಲೆ ಮಾಡುತ್ತಿರುವಂತೆ ಕರ್ನಾಟಕದಲ್ಲೂ ಹತ್ಯೆ ನಡೆಯುತ್ತಿದೆ. ನಮ್ಮಲ್ಲಿ ಪರೋಪಕಾರ ಮಾಡಿದರೆ ಸ್ವರ್ಗಕ್ಕೆ ಹೋಗುತ್ತಾರೆ ನಂಬಿಕೆ ಇದೆ.ಆದರೆ ಇಸ್ಲಾಂ ನಲ್ಲಿ ಖಾಫೀರ್ ರನ್ನು ಕೊಲೆ ಮಾಡಿದರೆ ಸ್ವರ್ಗ ಪ್ರಾಪ್ತಿಯಾಗುತ್ತದೆ ಎಂಬ ನಂಬಿಕೆಯಿದೆ.ಇದರಿಂದ ಪ್ರಚೋದನೆ ಸಿಗುತ್ತದೆ. ಈ ಬಗ್ಗೆ ಯಾಕೆ ಚರ್ಚೆಯಾಗುತ್ತಿಲ್ಲ‌, ಇದನ್ನು ಪ್ರಶ್ನಿಸಿದರೆ ಕೊಲೆ ಮಾಡಲಾಗುತ್ತಿದೆ.ಭಯದ ಮೂಲಕವೇ ಇಡೀ ಪ್ರಪಂಚವನ್ನು ವಶಪಡಿಸಿಕೊಳ್ಳಲು ನೋಡುತ್ತಾರೆ.ಮತಾಂದತೆಯೇ ಹರ್ಷ ಕೊಲೆಗೆ ಪ್ರಮುಖ ಕಾರಣ ಎಂದರು.

ಇದನ್ನೂ ಓದಿ : ಕಣ್ಣೆತ್ತಿ ನೋಡಿದವರ ಕಣ್ಣುಗಳನ್ನು ಕೀಳುವ ಕೆಲಸ ಮಾಡಬೇಕಾಗಿದೆ : ರೂಪಾಲಿ ನಾಯ್ಕ

ಎಲ್ಲ ಧರ್ಮಗ್ರಂಥಗಳನ್ನು ಚರ್ಚೆಗೊಳಪಡಿಸಬೇಕಿದೆ. ಕೊಲ್ಲುವುದು ಧರ್ಮವೇ ಅಲ್ಲ, ಕಾಯುವುದು ಧರ್ಮ. ಕೊಲ್ಲುವುದು ಮತಾಂಧತೆ, ಮತಾಂಧತೆ ಧರ್ಮಕ್ಕಿರುವ ವ್ಯತ್ಯಾಸ ಗುರುತಿಸದಿರುವುದು ದುರಂತ.ಯಾವ ಧರ್ಮದಲ್ಲಿ ಒಳ್ಳೆಯದಿದೆಯೋ ಅದನ್ನು ನಾವೂ ಅನುಸರಿಸೋಣ. ಎಲ್ಲ ಧರ್ಮ ಗ್ರಂಥಗಳ ಬಗ್ಗೆ ಚರ್ಚೆ ಮಾಡೋಣ. ಯಾವುದರಲ್ಲಿ ಒಳ್ಳೆಯದಿದೆಯೋ ಅದನ್ನು ಅನುಸರಿಸೋಣ. ಯಾವುದರಲ್ಲಿ ಮನುಕುಲಕ್ಕೆ ಒಳ್ಳೆಯದಾಗದ ವಿಷಯಗಳಿವೆಯೋ ಅವುಗಳನ್ನು ಜಗತ್ತಿನಿಂದಲೇ ಹೊರಹಾಕೋಣ. ಭಾರತದ ಮೂಲ ನಿವಾಸಿಗಳು ಮುಂದೆ ಅಸಾಹಯಕರಾಗುವ ಸ್ಥಿತಿ ಬರಲಿದೆ ಎಂದರು.

ದಾರುಲ್ ಇಸ್ಲಾಂ, ದಾರುಲ್ ಅರಬ್ ಎಂದರೇನು? ನಿಮ್ಮಲ್ಲಿ ಸ್ವರ್ಗಕ್ಕೆ‌ ಹೋಗವ ದಾರಿ ಯಾವುದು.ಕಾಫಿರ್ ರನ್ನು ಕೊಂದರೆ ಸ್ವರ್ಗಪ್ರಾಪ್ತಿಯಂತೆ ನಿಮ್ಮ ಧರ್ಮದಲ್ಲಿ ನಿಜವೇ? ಈ ವಿಷಯಗಳ ಬಗ್ಗೆ ಸಾರ್ವಜನಿಕವಾಗಿ ಮಾತನಾಡಿ ನೋಡೋಣ ಎಂದು ಮುಸ್ಲಿಂ ವಿದ್ವಾಂಸರಿಗೆ ಸಿ.ಟಿ.ರವಿ ಪ್ರಶ್ನೆ ಮುಂದಿಟ್ಟರು.

ಟಾಪ್ ನ್ಯೂಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.