ಕೋವಿಡ್ ನಿಯಮ ಗಾಳಿಗೆ ತೂರಿದ ಜೋಗ ಜಲಪಾತದ ಏಳು ಮಂದಿ ಸಿಬ್ಬಂದಿಯ ವಿರುದ್ಧ ಪ್ರಕರಣ ದಾಖಲು
Team Udayavani, Aug 21, 2021, 9:03 AM IST
ಶಿವಮೊಗ್ಗ: ಜಿಲ್ಲಾಧಿಕಾರಿ ಸೂಚನೆ ಮೇರೆಗೆ ಜೋಗ ಜಲಪಾತದ ಅಧಿಕಾರಿಗಳು, ಸಿಬ್ಬಂದಿಯ ಮೇಲೆ ಪೊಲೀಸರ ವಿಶೇಷ ತಂಡ ದಾಳಿ ನಡೆಸಿದೆ. ಕೋವಿಡ್ ನಿಯಮ ಉಲ್ಲಂಘಿಸಿ ಪ್ರವಾಸಿಗರನ್ನು ಜಲಪಾತ ವೀಕ್ಷಣೆಗೆ ಬಿಟ್ಟ ಆರೋಪದಡಿ ಏಳು ಮಂದಿ ವಿರುದ್ಧ ಪ್ರಕರಣ ದಾಖಲು ಮಾಡಲಾಗಿದೆ. ಈ ಪೈಕಿ ಮೂವರು ಹೋಂ ಗಾರ್ಡ್ ಸಿಬ್ಬಂದಿಗಳಿದ್ದಾರೆ.
ಜೋಗ ಜಲಪಾತ ವೀಕ್ಷಣೆಗೆ ಬರುವವರಿಗೆ ಆರ್ ಟಿಪಿಸಿಆರ್ ನೆಗೆಟಿವ್ ವರದಿ ಅಥವಾ ಎರಡನೇ ಡೋಸ್ ಲಸಿಕೆ ಪಡೆದ ವರದಿ ಕಡ್ಡಾಯಗೊಳಿಸಲಾಗಿದೆ. ಈ ಸಂಬಂಧ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅವರು ಆದೇಶ ಹೊರಡಿಸಿದ್ದಾರೆ. ಆದರೆ ಇಲ್ಲಿನ ಸೆಕ್ಯೂರಿಟಿ ಗಾರ್ಡ್ ಗಳು ಈ ಆದೇಶಕ್ಕೆ ಕ್ಯಾರೆ ಅನ್ನದೆ, ಬಂದ ಪ್ರವಾಸಿಗರನ್ನು ಒಳಬಿಡುತ್ತಿದ್ದರು.
ದಿಢೀರ್ ದಾಳಿ ನಡೆಸಿದ ಅಧಿಕಾರಿಗಳು
ಜೋಗ ಗೇಟ್ ನಲ್ಲಿ ಸೆಕ್ಯೂರಿಟಿ ಗಾರ್ಡ್ ಗಳ ನಿರ್ಲಕ್ಷ್ಯದ ಕುರಿತು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅವರಿಗೆ ದೂರು ಬಂದಿತ್ತು. ಈ ಹಿನ್ನಲೆಯಲ್ಲಿ ಪರಿಶೀಲನೆ ನಡೆಸುವಂತೆ ಜಿಲ್ಲಾ ರಕ್ಷಣಾಧಿಕಾರಿ ಅವರಿಗೆ ಸೂಚನೆ ನೀಡಿದ್ದರು. ಅದರಂತೆ ಸಾಗರ ಡಿವೈಎಸ್ ಪಿ ಅವರು ವಿಶೇಷ ತಂಡ ರಚಿಸಿ, ದಾಳಿಗೆ ಸೂಚಿಸಿದ್ದರು. ಪ್ರವಾಸಿಗರ ರೂಪದಲ್ಲಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಇದನ್ನೂ ಓದಿ:ನಂಬಿದ ದೇವರೇ ನನ್ನನ್ನು ಸರಿಯಾದ ಸಮಯಕ್ಕೆ ಊರಿಗೆ ಕಳುಹಿಸಿದ್ದಾರೆ : ಮಲ್ಪೆಯ ಜಾನ್ ಜತ್ತನ್
ಪ್ರವಾಸಿಗರಂತೆ ಒಳಗೆ ಹೋದರು
ಪೊಲೀಸರ ವಿಶೇಷ ತಂಡ ಪ್ರವಾಸಿಗರಂತೆ ಜೋಗ ಜಲಪಾತಕ್ಕೆ ತೆರಳಿದ್ದರು. ಇವರಿಗೆ ಕೋವಿಡ್ ನೆಗೆಟಿವ್ ವರದಿಯಾಗಲಿ, ಲಸಿಕೆ ಪಡೆದ ರಿಪೋರ್ಟಾಗಲಿ ವಿಚಾರಿಸಲಿಲ್ಲ. ನೇರವಾಗಿ ಜೋಗ ಜಲಪಾತ ವೀಕ್ಷಣೆಗೆ ಕಳುಹಿಸಲಾಗಿತ್ತು. ಹಾಗಾಗಿ ಕೂಡಲೇ ಸೆಕ್ಯೂರಿಟಿ ಗಾರ್ಡ್ ಮತ್ತು ಅಂಗಡಿ ಮಾಲೀಕರೊಬ್ಬರ ವಿರುದ್ಧ ದೂರು ದಾಖಲಿಸಿದ್ದಾರೆ.
ಯಾರ ವಿರುದ್ಧ ಪ್ರಕರಣ?
ಜೋಗದ ಸೆಕ್ಯೂರಿಟಿಗೆ ನಿಯೋಜನೆಗೊಂಡಿದ್ದ ಸಿಬ್ಬಂದಿಗಳು, ಗೈಡ್ ಒಬ್ಬರ ವಿರುದ್ಧ ಪ್ರಕರಣ ದಾಖಲಾಗಿದೆ. ಚಂದ್ರಶೇಖರ್, ಹೋಂ ಗಾರ್ಡ್ ಗಳಾದ ಮಂಜುನಾಥ, ಕೃಷ್ಣಪ್ಪ, ಮಂಜುನಾಥ, ಸೆಕ್ಯೂರಿಟಿ ಗಾರ್ಡ್ ಗಳಾದ ರಾಕೇಶ, ಪ್ರಭುದಾಸ, ಅಂಗಡಿ ಮಾಲೀಕ ಸಂಜು ಅಲಿಯಾಸ್ ಮಂಜುನಾಥ್ ಎಂಬುವವರ ವಿರುದ್ಧ ಜೋಗ ಪೊಲೀಸ್ ಠಾಣೆಯಲ್ಲಿ ವಿಶೇಷ ತಂಡ ಪ್ರಕರಣ ದಾಖಲು ಮಾಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮನೆ ರತ್ನಾಕರ್
Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್ರಿಂದ ಪರಿಶೀಲನೆ
Lok Sabha Election: ‘ಬಿವೈಆರ್ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’
Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್
LokSabha Election; ಕಾಂಗ್ರೆಸ್ ಪರ ನಟ ದರ್ಶನ್ ಪ್ರಚಾರಕ್ಕೆ ಕುಮಾರಸ್ವಾಮಿ ಪ್ರತಿಕ್ರಿಯೆ
MUST WATCH
ಹೊಸ ಸೇರ್ಪಡೆ
Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮನೆ ರತ್ನಾಕರ್
BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ
Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!
Bidar; ಬಿರುಗಾಳಿ ಸಹಿತ ಭಾರಿ ಮಳೆ :ಸಿಡಿಲು ಬಡಿದು ರೈತ ಸಾವು
Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್