![Chikkamagaluru; ಮಲೆನಾಡು ಭಾಗದಲ್ಲಿ ವಾರದಿಂದ ಕರೆಂಟ್, ನೆಟ್ ವರ್ಕ್ ಇಲ್ಲ! ಜನರ ಪರದಾಟ](https://www.udayavani.com/wp-content/uploads/2024/07/chikka-415x229.jpg)
ಸಿಎಂ ವಿರುದ್ಧ ಪ್ರಕರಣ ದಾಖಲು
Team Udayavani, Nov 3, 2018, 6:00 AM IST
![v-7.jpg](https://www.udayavani.com/wp-content/uploads/2018/11/3/v-7.jpg)
ಶಿವಮೊಗ್ಗ: ಉಪ ಚುನಾವಣೆಯ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಬಹಿರಂಗ ಪ್ರಚಾರ ಸಭೆಯಲ್ಲಿ ಸರ್ಕಾರದಿಂದ ಯೋಜನೆಗಳನ್ನು ಒದಗಿಸುವ ಬಗ್ಗೆ ಮಾತನಾಡಿದ ಆರೋಪದ ಮೇಲೆ ಮುಖ್ಯಮಂತ್ರಿ ಕುಮಾರಸ್ವಾಮಿ ವಿರುದ್ಧ ನೀತಿ ಸಂಹಿತೆ ಉಲ್ಲಂಘನೆ
ಪ್ರಕರಣ ದಾಖಲಾಗಿದೆ. ಜಿಲ್ಲೆಯ ಶಿಕಾರಿಪುರ ತಾಲೂಕಿನ ಶಿರಾಳಕೊಪ್ಪ ಪಟ್ಟಣದ ಇಂದಿರಾ ಗಾಂಧಿ ಸ್ಟೇಡಿಯಂನಲ್ಲಿ ಅ.28ರಂದು ನಡೆದ ಪ್ರಚಾರ ಸಭೆಯಲ್ಲಿ ಮೈತ್ರಿಕೂಟದ ಅಭ್ಯರ್ಥಿ ಪರ ಮತಯಾಚಿಸುವ ವೇಳೆ ಕುಮಾರಸ್ವಾಮಿಯವರ ಭಾಷಣದ ವಿಡಿಯೋ
ಪರಿಶೀಲಿಸಿ ಪ್ರಕರಣ ದಾಖಲಿಸಲಾಗಿದೆ. ಸಭೆಯಲ್ಲಿ ಕುಮಾರಸ್ವಾಮಿ ಅವರು, 26.55 ನಿಮಿಷ ಭಾಷಣ ಮಾಡಿದ್ದಾರೆ. ಅದರಲ್ಲಿ ಏತ ನೀರಾವರಿ ಯೋಜನೆ ಮತ್ತು ಈ ಭಾಗದ ಆನವಟ್ಟಿ, ಉಡುಗಣಿ, ತಾಳಗುಂದ, ಹೊಸೂರು ಹೋಬಳಿಗಳಲ್ಲಿ ನೀರಾವರಿ ಸೌಲಭ್ಯ ಕಲ್ಪಿಸುವ ಸಂಬಂಧ ಸಂಜೆ 5.08ರಿಂದ 6.55ರ ವರೆಗೆ ಮಾತನಾಡಿದ್ದಾರೆ. ಅಲ್ಲದೆ ಭಾಷಣದಲ್ಲಿ 14.22ರಿಂದ 15.55ದ ನಿಮಿಷವರೆಗೆ ಬೀದಿ ಬದಿ ವ್ಯಾಪಾರಿ ಗಳಿಗೆ ಮೊಬೈಲ್ ಬ್ಯಾಂಕಿಂಗ್ ಮೂಲಕ ಬಡ್ಡಿ ರಹಿತ ಸಾಲ ಸೌಲಭ್ಯ ನೀಡುವ ಬಗ್ಗೆ ಮಾತನಾಡಿ ದ್ದರು. ಉಡುಗಣಿ ಹೋಬಳಿಯ ವಿಡಿಯೋ ಸರ್ವೆಲೆನ್ಸ್ ತಂಡದ ಮಿಥುನ್ ಕುಮಾರ್ ಅವರು ಈ ಸಭೆಯ ವಿಡಿಯೋ ಚಿತ್ರೀಕರಣ ಮಾಡಿದ್ದು, ಇದರ ಅಡಕ ಮುದ್ರಿಕೆ ಯನ್ನು ವಿಡಿಯೋ ವಿಂಗ್ ತಂಡದ ಕೆ. ಮಂಜಪ್ಪ ಅವರಿಗೆ ಸಲ್ಲಿಸಿದ್ದರು. ಇದರ ಪರಿಶೀಲನೆ ಬಳಿಕ ನೀತಿ ಸಂಹಿತೆ ಉಲ್ಲಂಘನೆಯಾಗಿದೆ ಎಂದು ಮಾದರಿ ನೀತಿ ಸಂಹಿತೆ ನೋಡೆಲ್ ಅಧಿಕಾರಿಗೆ ವರದಿ ಸಲ್ಲಿಸಲಾಗಿತ್ತು. ಈ ಬಗ್ಗೆ ಶಿಕಾರಿಪುರ ಸಹಾಯಕ ಚುನಾವಣಾ ಅಧಿಕಾರಿ ಅವರು ಕ್ರಮ ಕೈಗೊಳ್ಳುವಂತೆ ಸೂಚಿಸಿರುವ ಹಿನ್ನೆಲೆಯಲ್ಲಿ ಚುನಾವಣೆ ಮಾದರಿ ನೀತಿ ಸಂಹಿತೆ ಉಲ್ಲಂಘನೆ ಬಗ್ಗೆ ಶಿರಾಳಕೊಪ್ಪ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
![Chikkamagaluru; ಮಲೆನಾಡು ಭಾಗದಲ್ಲಿ ವಾರದಿಂದ ಕರೆಂಟ್, ನೆಟ್ ವರ್ಕ್ ಇಲ್ಲ! ಜನರ ಪರದಾಟ](https://www.udayavani.com/wp-content/uploads/2024/07/chikka-415x229.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![gajanur3](https://www.udayavani.com/wp-content/uploads/2024/07/gajanur3-150x84.jpg)
ತುಂಗಾ ಭದ್ರಾ ನದಿಯಲ್ಲಿ ನೀರಿನ ಹರಿವು ಹೆಚ್ಚಳ… ಮತ್ತೆ ಜಲಾವೃತಗೊಂಡ ಪತ್ತೆಪೂರ್ ರಸ್ತೆ
![mudhola](https://www.udayavani.com/wp-content/uploads/2024/07/mudhola-1-150x87.jpg)
ಪ್ರವಾಹದ ನೀರಿನಲ್ಲಿ ಪಂಪ್ ಸೆಟ್ ತರಲು ಹೋದ ರೈತರು… ನೀರಿಗಿಳಿಯದಂತೆ ಮನವಿ ಮಾಡಿದ ಸಚಿವರು
![ರಬಕವಿ-ಬನಹಟ್ಟಿ: ಅಪಾಯ ಮಟ್ಟದಲ್ಲಿ ಹರಿಯುತ್ತಿರುವ ಕೃಷ್ಣಾ ನದಿ](https://www.udayavani.com/wp-content/uploads/2024/07/KRISHNA-NADI-150x84.jpg)
ರಬಕವಿ-ಬನಹಟ್ಟಿ: ಅಪಾಯ ಮಟ್ಟದಲ್ಲಿ ಹರಿಯುತ್ತಿರುವ ಕೃಷ್ಣಾ ನದಿ
![Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ](https://www.udayavani.com/wp-content/uploads/2024/07/shiruru-150x90.jpg)
Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ
![Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು](https://www.udayavani.com/wp-content/uploads/2024/07/BIKE-7-150x86.jpg)
Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು
MUST WATCH
ಹೊಸ ಸೇರ್ಪಡೆ
![Chikkamagaluru; ಮಲೆನಾಡು ಭಾಗದಲ್ಲಿ ವಾರದಿಂದ ಕರೆಂಟ್, ನೆಟ್ ವರ್ಕ್ ಇಲ್ಲ! ಜನರ ಪರದಾಟ](https://www.udayavani.com/wp-content/uploads/2024/07/chikka-150x83.jpg)
Chikkamagaluru; ಮಲೆನಾಡು ಭಾಗದಲ್ಲಿ ವಾರದಿಂದ ಕರೆಂಟ್, ನೆಟ್ ವರ್ಕ್ ಇಲ್ಲ! ಜನರ ಪರದಾಟ
![ವಿದೇಶಿ ಪ್ರವಾಸ ಕಥನ 6: ದುಬೈ, ಶಾರ್ಜಾ, ಅಜ್ಮಾನ್ ಪರ್ಯಟನೆ-ಕರಾವಳಿಗರ ಕಲರವ!](https://www.udayavani.com/wp-content/uploads/2024/07/Dubai1-150x84.jpg)
ವಿದೇಶಿ ಪ್ರವಾಸ ಕಥನ 6: ದುಬೈ, ಶಾರ್ಜಾ, ಅಜ್ಮಾನ್ ಪರ್ಯಟನೆ-ಕರಾವಳಿಗರ ಕಲರವ!
![Screenshot (7) copy](https://www.udayavani.com/wp-content/uploads/2024/07/Screenshot-7-copy-150x83.jpg)
Thekkatte: 5 ಗ್ರಾ.ಪಂ.ಗಳ ಕಸ ವಿಲೇವಾರಿಯೇ ದೊಡ್ಡ ಸವಾಲು!
![ಡೆಂಗ್ಯೂ ಜ್ವರದಿಂದ ಐದು ವರ್ಷದ ಬಾಲಕಿ ಸಾವು](https://www.udayavani.com/wp-content/uploads/2024/07/poorna-150x83.jpg)
Hubli; ಡೆಂಗ್ಯೂ ಜ್ವರದಿಂದ ಐದು ವರ್ಷದ ಬಾಲಕಿ ಸಾವು
![gajanur3](https://www.udayavani.com/wp-content/uploads/2024/07/gajanur3-150x84.jpg)
ತುಂಗಾ ಭದ್ರಾ ನದಿಯಲ್ಲಿ ನೀರಿನ ಹರಿವು ಹೆಚ್ಚಳ… ಮತ್ತೆ ಜಲಾವೃತಗೊಂಡ ಪತ್ತೆಪೂರ್ ರಸ್ತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.