ಒಂದೇ ದಿನದಲ್ಲಿ ಬದಲಾವಣೆ; ಬಿಎಸ್ವೈಗೆ ಕೊಕ್-ಬೊಮ್ಮಾಯಿಗೆ ಸ್ಥಾನ!
Team Udayavani, Apr 6, 2022, 4:51 PM IST
ಸಾಗರ: ಬಿ.ಎಸ್.ಯಡಿಯೂರಪ್ಪ ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿದು ಸರಿಸುಮಾರು ಒಂಬತ್ತು ತಿಂಗಳು ಕಳೆದಿದ್ದರೂ ಸಾಗರದ ನಗರಸಭೆ ಮಾತ್ರ ಈಗಲೂ ಅವರನ್ನೇ ಮುಖ್ಯಮಂತ್ರಿ ಸ್ಥಾನದಲ್ಲಿ ಇರಿಸಿ ಗೌರವಿಸುತ್ತಿದೆ ಎಂದು ‘ಉದಯವಾಣಿ’ ಸುದ್ದಿ ಮಾಡಿದ 24 ಗಂಟೆಯೊಳಗೆ ಸಾಗರ ನಗರಸಭೆಯ ಅಧ್ಯಕ್ಷರ ಕೊಠಡಿಯಲ್ಲಿ ಬಿಎಸ್ವೈ ಫೋಟೋಗೆ ಕೊಕ್ ಕೊಟ್ಟು ಮಂಗಳವಾರ ಸಿಎಂ ಬಸವರಾಜ ಬೊಮ್ಮಾಯಿ ಅವರ ಫೋಟೋವನ್ನೂ ಅಳವಡಿಸಲಾಗಿದೆ.
ನಗರಸಭೆಯ ಅಧ್ಯಕ್ಷ ಉಪಾಧ್ಯಕ್ಷರ ಕೊಠಡಿಯಲ್ಲಿ ಒಂದೆಡೆ ಹಾಲಿ ಶಾಸಕ ಹಾಲಪ್ಪ ಹಾಗೂ ಸಂಸದ ಬಿ.ವೈ.ರಾಘವೇಂದ್ರ ಅವರ ಫೋಟೋಗಳನ್ನು ಹಾಕಲಾಗಿದೆ. ಇನ್ನೊಂದೆಡೆ ಭಾರತದ ಪ್ರಧಾನ ನರೇಂದ್ರ ಮೋದಿ, ದೇಶದ ರಾಷ್ಟ್ರಪತಿ ರಾಮನಾಥ್ ಕೋವಿದ್ರ ಫೋಟೋಗಳಿದ್ದು, ಅವರ ಜೊತೆ ಮುಖ್ಯಮಂತ್ರಿಗಳ ಫೋಟೋ ಇರುವಲ್ಲಿ ಬಿ.ಎಸ್.ಯಡಿಯೂರಪ್ಪ ಅವರ ಫೋಟೋ ರಾರಾಜಿಸುತ್ತಿದೆಯೇ ವಿನಃ ಇಡೀ ಹಾಲ್ನಲ್ಲಿ ಎಲ್ಲಿಯೂ ರಾಜ್ಯದ ಇಂದಿನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಫೋಟೋ ಕಂಡುಬರುತ್ತಿರಲಿಲ್ಲ.
ಇದು ಉದಯವಾಣಿ ಆನ್ ಲೈನ್ನಲ್ಲೂ ಸುದ್ದಿಯಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ದೇವೇಗೌಡರಿಗೆ ನೋವಾಗಿದ್ದರೆ ಏನೂ ಮಾಡಲಾಗದು: ಚೆಲುವರಾಯಸ್ವಾಮಿ
B.Y. Raghavendra: ಕಮಲದ ಗುರುತಿಗೆ ಮತ ನೀಡಿ; ಬಿವೈಆರ್
ಸಮರ್ಥ ರಾಷ್ಟ್ರ – ಸಮಗ್ರ ಅಭಿವೃದ್ಧಿಗಾಗಿ ಮತ್ತೂಮ್ಮೆ ಸಂಸತ್ಗೆ ಕಳುಹಿಸಿ: B.Y. ರಾಘವೇಂದ್ರ
ಈ ಬಾರಿ ಚುನಾವಣೆಯಲ್ಲಿ ಸಂವಿಧಾನದ ಅಳಿವು ಉಳಿವಿನ ಪ್ರೆಶ್ನೆಯಾಗಿದೆ: ಟಿ.ಬಿ.ಜಯಚಂದ್ರ
Thirthahalli: ಶಿಕ್ಷಕರ ಚುನಾವಣೆಯಲ್ಲಿ ಶಿಕ್ಷಕರೇ ಸ್ಪರ್ಧೆ ಮಾಡಬೇಕು: ಅರುಣ್ ಹೊಸಕೊಪ್ಪ