ಹುಣಸೋಡು ಸ್ಫೋಟ: ತನಿಖೆ ಚುರುಕು
ಲಾರಿಯಿಂದ ಬೊಲೆರೊಕ್ಕೆ ಸ್ಫೋಟಕ ಶಿಫ್ಟ್ ಮಾಡುವಾಗ ಸಿಡಿದ ಶಂಕೆ
Team Udayavani, Jan 24, 2021, 5:41 PM IST
ಶಿವಮೊಗ್ಗ: ಹುಣಸೋಡು ಬಳಿಯ ಕಲ್ಲು ಕ್ವಾರಿಯಲ್ಲಿ ಸಂಭವಿಸಿದ ಸ್ಫೋಟ ಪ್ರಕರಣದ ತನಿಖೆ ಹಲವು ಆಯಾಮಗಳಲ್ಲಿ ನಡೆಯುತ್ತಿದ್ದು; ಜೀವಂತ ಡಿಟೋನೇಟರ್, ಅಮೋನಿಯಂ ನೈಟ್ರೇಟ್ ಜೆಲ್ (ಬೂಸ್ಟರ್) ಹಾಗೂ ಜಿಲೆಟಿನ್ ಸ್ಟಿಕ್ಗಳಿಂದಲೇ ಸ್ಫೋಟದ ತೀವ್ರತೆ ಹೆಚ್ಚಾಗಿದೆ ಎನ್ನಲಾಗಿದೆ.
ದೊಡ್ಡ ಮಟ್ಟದ ಸ್ಫೋಟ ಸಂಭವಿಸುವ ಮೊದಲು ಮಧ್ಯಮ ಪ್ರಮಾಣದ ಶಬ್ದ ಕೇಳಿ ಬಂದಿದ್ದು ಅದರ ಹಿನ್ನೆಲೆಯಲ್ಲಿ ತನಿಖೆ ಸಾಗಿದೆ. ಸ್ಫೋಟಕ ತುಂಬಿದ್ದ ಲಾರಿಯಿಂದ ಜಿಲೆಟಿನ್, ಅಮೋನಿಯಂ ನೈಟ್ರೇಟ್, ಡಿಟೋನೇಟರ್ಗಳನ್ನು ಬೊಲೆರೋ ವಾಹನಕ್ಕೆ ಸಾಗಿಸುವಾಗ ಕಾರ್ಮಿಕರ ನಿರ್ಲಕ್ಷéದಿಂದ ಈ ಘಟನೆ ಸಂಭವಿಸಿರಬಹುದು. ಅಮೋನಿಯಂ ನೈಟ್ರೇಟ್ ಬ್ಯಾಗ್ಗಳನ್ನು ಇಡುವ ಬದಲು ಎತ್ತಿ ಜೋರಾಗಿ ಒಗೆದರೆ ಎಂಬ ಶಂಕೆ ವ್ಯಕ್ತಪಡಿಸಲಾಗಿದೆ.
ಈ ವೇಳೆ ಒತ್ತಡದಿಂದ ಬೊಲೆರೋ ವಾಹನದಲ್ಲಿದ್ದ ಸ್ಪೋಟಕಗಳು ಸಿಡಿದು ನಂತರ ಲಾರಿಯಲಿದ್ದ ವಸ್ತುಗಳು ಸ್ಫೋಟಗೊಂಡಿವೆ. ಇದರಿಂದ ಎರಡು ಬಾರಿ ಶಬ್ದ ಬಂದಿದೆ ಎಂದು ಅಂದಾಜಿಸಲಾಗಿದೆ. ಅದೇ ರೀತಿ ಇನ್ನೊಂದು ಎಳೆಯಲ್ಲೂ ತನಿಖೆ ನಡೆಸಲಾಗುತ್ತಿದೆ. ಎಸ್.ಎಸ್. ಕ್ರಷರ್ಗೆ ಬಂದಿದ್ದ ಸ್ಪೋಟಕ ತುಂಬಿದ್ದ ಲಾರಿಯನ್ನು ರಿವರ್ಸ್ ತೆಗೆಯುವಾಗ ಅಲ್ಲಿದ್ದ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ತಂತಿ ಸ್ಫೋಟಕವಿದ್ದ ವಾಹನದ ಮೇಲೆ ಬಿದ್ದು ಸ್ಫೋಟ ಸಂಭವಿಸಿರಬಹುದು ಎಂದು ಸಹ ಶಂಕಿಸಲಾಗಿದೆ.
ಓದಿ : ರೈತರ ಹೋರಾಟ ಹತ್ತಿಕ್ಕುವ ತಂತ್ರ ಕೈಬಿಡಿ
ಗೊಂದಲಮಯ ಹೇಳಿಕೆ: ಹುಣಸೋಡು ಸ್ಫೋಟದಿಂದ ಬೆಚ್ಚಿಬಿದ್ದ ಜನ ಕಲ್ಲು ಕ್ವಾರಿಗಳು, ಕ್ರಷರ್ಗಳನ್ನು ಬಂದ್ ಮಾಡಿಸುವಂತೆ ಒತ್ತಾಯಿಸುತ್ತಿದ್ದಾರೆ. ಆದರೆ ಕ್ವಾರಿಯಲ್ಲಿ ಸಂಭವಿಸಿದ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಯಡಿಯೂರಪ್ಪ ಮತ್ತು ಸಚಿವ ಕೆ.ಎಸ್. ಈಶ್ವರಪ್ಪ ಅವರ ಹೇಳಿಕೆಗಳು ಗ್ರಾಮಸ್ಥರಲ್ಲಿ ಗೊಂದಲ ಹೆಚ್ಚಿಸಿವೆ.
ನ್ಪೋಟದ ಸ್ಥಳಕ್ಕೆ ಶನಿವಾರ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಭೇಟಿ ನೀಡಿದ್ದರು. ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಲ್ಲಿ ಕಲ್ಲು ಗಣಿಗಾರಿಕೆಗೆ ಅನುಮತಿ ಇಲ್ಲ. ಇದು ಪರಿಸರ ಸೂಕ್ಷ್ಮ ವಲಯ. ಕ್ರಷರ್ಗಳಿಗೆ ಮಾತ್ರ ಅನುಮತಿ ನೀಡಲಾಗಿದೆ ಎಂದು ಹೇಳಿದ್ದಾರೆ.š
ಇನ್ನು, ಶುಕ್ರವಾರ ಬೆಳಗ್ಗೆ ಕಲ್ಲಗಂಗೂರಿನ ಕ್ವಾರಿಗೆ ಭೇಟಿ ನೀಡಿದ್ದ ಸಚಿವ ಕೆ.ಎಸ್. ಈಶ್ವರಪ್ಪ, ಇಲ್ಲಿ ನಡೆಯುತ್ತಿರುವ ಕಲ್ಲು ಕ್ವಾರಿ ಅಕ್ರಮವಲ್ಲ, ಸಕ್ರಮ. ಆದರೆ ಇದು ಅಕ್ರಮವೋ, ಸಕ್ರಮವೋ ಪ್ರಶ್ನೆ ಬೇರೆ. ಸ್ಪೊಟ ಆಗಬೇಕಾ ಎಂದು ಪ್ರಶ್ನಿಸಿದ್ದರು. ಸಿಎಂ ಮತ್ತು ಸಚಿವರ ಹೇಳಿಕೆಯಲ್ಲಿನ ಭಿನ್ನತೆ ಜನರನ್ನು ಗೊಂದಲಕ್ಕೀಡು ಮಾಡಿದೆ. ಜಲ್ಲಿ ಕ್ರಷರ್ ಹೆಸರಿನಲ್ಲಿ ಲೈಸೆನ್ಸ್ ಪಡೆದು ಕ್ವಾರಿ ನಡೆಸುತ್ತಿರುವುದು ಈಗ ಬಹಿರಂಗವಾಗಿದೆ. ಈ ಭಾಗದಲ್ಲಿ ನೂರಾರು ಅಡಿ ಆಳದ ಕ್ವಾರಿಗಳಿದ್ದು ದನಕರುಗಳು, ಮನುಷ್ಯರು ಬಿದ್ದು ಮೃತಪಟ್ಟಿದ್ದಾರೆ. ಪರಿಸರ ಸೂಕ್ಷ್ಮ ವಲಯದಲ್ಲಿ ಗಣಿಗಾರಿಕೆ ನಡೆಸಲು ಅನುಮತಿ ಕೊಟ್ಟವರು ಯಾರು? ಅಧಿಕಾರಿಗಳಿಗೆ ಎಲ್ಲ ತಿಳಿದೂ ಸುಮ್ಮನಿದ್ದರೆಎಂಬುದು ಈಗ ಯಕ್ಷ ಪ್ರಶ್ನೆಯಾಗಿದೆ.
ಓದಿ : ಗರ್ಭಧರಿಸಿದ್ದ ಹಸುವಿನ ಜೀವ ಉಳಿಸಿದ ವೈದ್ಯರಿಗೆ ಗ್ರಾಮಸ್ಥರಿಂದ ಮೆಚ್ಚುಗೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು
Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್
MUST WATCH
ಹೊಸ ಸೇರ್ಪಡೆ
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ