ಪ್ಲಾಸ್ಟಿಕ್ ತ್ಯಾಜ್ಯ ಸಂಗ್ರಹಿಸಿ ಜನ್ಮದಿನ ಸಂಭ್ರಮಿಸಿದ ಯುವಕ!
Team Udayavani, Apr 6, 2021, 8:17 PM IST
ಸಾಗರ: ಇಲ್ಲಿನ ತಿಲಕ್ ರಸ್ತೆಯಲ್ಲಿನ ಬಂಗಾರದಂಗಡಿಯಲ್ಲಿ ಕೆಲಸ ಮಾಡುವ ಸೊರಬ ರಸ್ತೆಯ ವಾಸಿ ಸಂತೋಷ್ ಶೇಟ್ ತಮ್ಮ 28ನೇ ಹುಟ್ಟುಹಬ್ಬದ ಸಂದರ್ಭದಲ್ಲಿ 5 ದಿನಗಳ ಕಾಲ ಪ್ಲಾಸ್ಟಿಕ್ ತ್ಯಾಜ್ಯ ಸಂಗ್ರಹಿಸುವ ಸಂಕಲ್ಪ ಮಾಡಿದ್ದಾರೆ.
ಸಂತೋಷ್ ಕಳೆದ ವರ್ಷ ತಮ್ಮ ಹುಟ್ಟುಹಬ್ಬದ ಸಂದರ್ಭದಲ್ಲಿ ಆಸ್ಪತ್ರೆಯಲ್ಲಿನ ರೋಗಿಗಳಿಗೆ ಬ್ರೆಡ್ ಹಂಚಿದ್ದರು. ಈ ವರ್ಷ ಸೊರಬ ರಸ್ತೆ, ಗೋಪಾಲಗೌಡ ನಗರ ಇನ್ನಿತರ ಭಾಗಗಳಲ್ಲಿ ಪ್ಲಾಸ್ಟಿಕ್ ತ್ಯಾಜ್ಯ ಸಂಗ್ರಹಿಸಿದ್ದಾರೆ. ಸಂಗ್ರಹಿಸಿದ ತ್ಯಾಜ್ಯವನ್ನು ನಗರಸಭೆ ಕಸ ಸಂಗ್ರಹಣೆ ಕಾರ್ಮಿಕರಿಗೆ ಒಪ್ಪಿಸಿದ್ದಾರೆ.
ಈ ಬಗ್ಗೆ ಪತ್ರಿಕೆಯೊಂದಿಗೆ ಮಾತನಾಡಿದ ಅವರು, ಮಾ. 28ರಿಂದ ಪ್ರತಿದಿನ ಬೆಳಗ್ಗೆ 6ರಿಂದ 9 ಗಂಟೆಯವರೆಗೆ ಪ್ಲಾಸ್ಟಿಕ್ ತ್ಯಾಜ್ಯ ಸಂಗ್ರಹಿಸಿದ್ದೇನೆ. ಪ್ರತಿದಿನ 2-3 ಚೀಲದಲ್ಲಿ ಪ್ಲಾಸ್ಟಿಕ್ ತ್ಯಾಜ್ಯ ಸಂಗ್ರಹಿಸಿದ್ದೇನೆ. ನನ್ನ ಆರ್ಥಿಕ ಪರಿಸ್ಥಿತಿಯಲ್ಲಿ, ನನ್ನ ದೈಹಿಕ ಶ್ರಮ ಬಳಸಿ ಏನಾದರೂ ಒಳಿತನ್ನು ಮಾಡಬೇಕು ಎಂಬುದು ಮಾತ್ರ ನನ್ನ ಆಸೆ. ಪ್ರಚಾರ, ಜನಮನ್ನಣೆ ಸಹ ನನ್ನ ಉದ್ದೇಶವಲ್ಲ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kerala ವಯನಾಡಲ್ಲಿ ರಾಹುಲ್ ಅಡಗಿ ಕುಳಿತಿದ್ದಾರೆ: ಬಿ.ವೈ. ವಿಜಯೇಂದ್ರ
Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ
Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು
Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ
Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್
MUST WATCH
ಹೊಸ ಸೇರ್ಪಡೆ
Kerala ವಯನಾಡಲ್ಲಿ ರಾಹುಲ್ ಅಡಗಿ ಕುಳಿತಿದ್ದಾರೆ: ಬಿ.ವೈ. ವಿಜಯೇಂದ್ರ
ಸಂಸದ ಶ್ರೀನಿವಾಸ್ ಪ್ರಸಾದ್ ಆರೋಗ್ಯ ಗಂಭೀರ; ಆಸ್ಪತ್ರೆಗೆ ದಾಖಲು
Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ
Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು
Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ