ಕಾಡಾನೆ ದಾಳಿಯಿಂದ ಸಾವು: ಪರಿಹಾರ ದುಪ್ಪಟ್ಟು; ಅಡಿಕೆ ಹವಾಮಾನ ಆಧಾರಿತ ಬೆಳೆ ವಿಮೆಗೆ ಸೇರ್ಪಡೆ
7.5 ಲಕ್ಷ ರೂ.ಗಳಿಂದ 15 ಲಕ್ಷ ರೂ.ಗಳಿಗೆ ಏರಿಕೆ: ಸಿಎಂ
Team Udayavani, Nov 28, 2022, 6:50 AM IST
ತೀರ್ಥಹಳ್ಳಿ/ಕೊಪ್ಪ: ಮಲೆನಾಡು, ಕರಾವಳಿ ಭಾಗದ ರೈತರ ನಿದ್ದೆಗೆಡಿಸಿ ರುವ ಕಾಡಾನೆ ದಾಳಿ ಶಮನಕ್ಕೆ ರಾಜ್ಯ ಸರಕಾರವು ಆನೆ ನಿಗ್ರಹ ಕಾರ್ಯಪಡೆ ರಚಿಸಿದ ಬೆನ್ನಲ್ಲೇ ಕಾಡಾನೆ ದಾಳಿಯಿಂದ ಮೃತಪಟ್ಟವರ ಕುಟುಂಬಕ್ಕೆ ನೀಡುವ ಪರಿಹಾರ ಹಣವನ್ನು ದ್ವಿಗುಣಗೊಳಿಸಿದೆ.
ಕೊಪ್ಪದಲ್ಲಿ ನಡೆದ ಜನಸಂಕಲ್ಪ ಸಮಾವೇಶ ಹಾಗೂ ತೀರ್ಥಹಳ್ಳಿಯಲ್ಲಿ ಮಾತನಾ ಡಿದ ಸಿಎಂ ಬಸವರಾಜ ಬೊಮ್ಮಾಯಿ, ಕಾಡಾನೆ – ಮಾನವ ಸಂಘರ್ಷವನ್ನು ತಡೆ ಗಟ್ಟುವ ನಿಟ್ಟಿನಲ್ಲಿ ರಾಜ್ಯ ಸರಕಾರ ಈಗಾಗಲೇ ಆನೆ ನಿಗ್ರಹ ಕಾರ್ಯಪಡೆ ರಚಿಸಿದೆ. ಕಾಡಾನೆ ದಾಳಿಯಿಂದ ಮೃತ ಪಟ್ಟರೆ ಸರಕಾರದಿಂದ ನೀಡಲಾಗುವ 7.5 ಲಕ್ಷ ರೂ. ಪರಿಹಾರವನ್ನು 15 ಲಕ್ಷ ರೂ.ಗಳಿಗೆ ಏರಿಸಲಾಗುವುದು ಎಂದು ಹೇಳಿದರು.
ಅಡಿಕೆ ಎಲೆಚುಕ್ಕಿ : ಸಮಗ್ರ ನಿರ್ವಹಣೆ
ಅಡಿಕೆ ಎಲೆಚುಕ್ಕಿ ರೋಗದ ನಿರ್ವಹಣೆ ಹೊಣೆಯನ್ನು ಸರಕಾರವೇ ಹೊರಲಿದ್ದು, ಹವಾಮಾನ ಆಧಾರಿತ ಬೆಳೆವಿಮೆ ವ್ಯಾಪ್ತಿಗೆ ತರಲಾಗುವುದು. ವಿಜ್ಞಾನಿಗಳ ಪ್ರಕಾರ ಇದಕ್ಕೆ ಶಾಶ್ವತ ಪರಿಹಾರ ಕಂಡುಕೊಳ್ಳಲು ಸಮಗ್ರ ನಿರ್ವಹಣೆ ಮಾಡಬೇಕು. ಈ ರೋಗದ ವಿರುದ್ಧ ಹೋರಾಡಲು ಬೇಕಾದ ಪೋಷಕಾಂಶಗಳನ್ನು ಅಡಿಕೆ ಗಿಡಗಳು ತೆಗೆದುಕೊಳ್ಳುತ್ತಿಲ್ಲ. 42 ಸಾವಿರ ಹೆಕ್ಟೇರ್ ಪ್ರದೇಶಕ್ಕೆ ಯೋಜನೆ ರೂಪಿಸಿ ಕೊಡಲು ತಿಳಿಸಿದ್ದೇನೆ. ವರದಿ ಬಂದ ಕೂಡಲೇ ಕ್ರಮ ಕೈಗೊಳ್ಳಲಾಗುವುದು. ಔಷಧ ಸಿಂಪಡಣೆಗೆ 10 ಕೋ.ರೂ. ನೀಡಲಾಗಿದೆ. ಸಮಗ್ರ ನಿರ್ವಹಣೆಗೆ ಎಷ್ಟೇ ಖರ್ಚಾದರೂ ಅದನ್ನು ಸರಕಾರದಿಂದ ಭರಿಸಲಾಗುವುದು ಎಂದು ಸಿಎಂ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ