ದೂರು ಕೊಟ್ಟ ಮಾಲಕನೆ ಕಳ್ಳ !;ಶಿವಮೊಗ್ಗ ಕಾರು ಕಳ್ಳತನ ಪ್ರಕರಣಕ್ಕೆ ಟ್ವಿಸ್ಟ್
Team Udayavani, Jan 6, 2023, 7:42 PM IST
ಶಿವಮೊಗ್ಗ: ಕಾರು ಕಳೆದು ಹೋಗಿದೆ ಎಂದು ದೂರು ಕೊಟ್ಟು ಯಾಮಾರಿಸಲು ಹೋದ ಮಾಲಕನೇ ಈಗ ಪೊಲೀಸರ ಅತಿಥಿಯಾಗಿದ್ದಾನೆ.
ವಿದ್ಯಾನಗರದ ಚಂದ್ರುಕುಮಾರ್ (28) ಹಾಗೂ ದಾವಣಗೆರೆ ಸರಸ್ವತಿ ನಗರದ ಪ್ರಶಾಂತ್ (29) ಬಂಧಿತ ಆರೋಪಿಗಳು. ಇಲ್ಲಿನ ಸೂಳೆಬೈಲಿನಲ್ಲಿ ಕಾರನ್ನು ನಿಲ್ಲಿಸಿದ್ದು ಯಾರೋ ಕಳ್ಳರು ಕಳ್ಳತನ ಮಾಡಿರುತ್ತಾರೆಂದು ಚಂದ್ರುಕುಮಾರ್ ದೂರು ನೀಡಿದ್ದ. ಪ್ರಕರಣ ವಿಚಾರಣೆ ನಡೆಸಿದ ಪೊಲೀಸರಿಗೆ ಮಾಲಕನ ಮೇಲೆ ಅನುಮಾನ ಬಂದು ತನಿಖೆಗೆ ಒಳಪಡಿಸಿದಾಗ ಕಾರಿನ ಮೇಲಿದ್ದ ಲೋನ್ ಕಟ್ಟದೇ ಫೈನಾನ್ಸ್ ಗೆ ಮೋಸ ಮಾಡುವ ಹಾಗೂ ಕಾರಿನ ಇನ್ಶೂರೆನ್ಸ್ ಪಡೆಯುವ ಸಲುವಾಗಿ ಕಾರನ್ನು ದಾವಣಗೆರೆ ಪ್ರಶಾಂತ್ಗೆ ನೀಡಿ ನಂಬರ್ ಪ್ಲೇಟ್ ಬದಲಾಯಿಸಿದ್ದರು. ತುಂಗಾ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಕಾರ್ಯಾಚರಣೆಯಲ್ಲಿ ಪಿಐ ಮಂಜುನಾಥ್, ಪಿಎಸ್ಐ ದೂದ್ಯಾನಾಯ್ಕ್, ಎಎಸ್ಐ ಮನೋಹರ್, ಸಿಬಂದಿ ಕಿರಣ್ ಮೋರೆ, ಅರುಣ್ಕುಮಾರ್, ಮೋಹನ್ ಕುಮಾರ್, ನಾಗಪ್ಪ, ಹರೀಶ್ ನಾಯ್ಕ, ಹರಿಹಂತ ಶಿರಹಟ್ಟಿ ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ
Shahapura: ಎರಡು ಕೆಟ್ಟ ಕಾನೂನು ಜಾರಿಗೆ ಕಾಂಗ್ರೆಸ್ ಸಿದ್ಧತೆ: ಯತ್ನಾಳ ಆರೋಪ
ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್
LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ ವ್ಯಂಗ್ಯ
Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ
MUST WATCH
ಹೊಸ ಸೇರ್ಪಡೆ
Hubli; ಖರ್ಗೆ ಬ್ಲಾಕ್ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ
Desi Swara: ದುಬೈ ವರ್ಲ್ಡ್ ಕಪ್ 2024- ಗೆಲ್ಲುವ ಅರಬ್ ಕುದುರೆಗಳ ನಾಗಾಲೋಟ!
Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್
“ನಾನು ಬಟ್ಟೆ ಬದಲಾಯಿಸುವಾಗ ಬಾಗಿಲು..” ನಿರ್ಮಾಪಕರ ಕಿರುಕುಳದ ಬಗ್ಗೆ ಮೌನ ಮುರಿದ ನಟಿ
State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ