ಅತ್ಯಾಚಾರದ ದೂರು ಆರೋಪ ಹಾಲಪ್ಪನವರದೇ ಸೃಷ್ಟಿ: ಬೇಳೂರು ವ್ಯಂಗ್ಯ
Team Udayavani, Jul 16, 2022, 5:37 PM IST
ಸಾಗರ: ಶಾಸಕರು ತಮ್ಮ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಿಸಲು ಪ್ರಯತ್ನ ನಡೆದಿತ್ತು. ಅದಕ್ಕೆ ನಾನು ಕುಮ್ಮಕ್ಕು ನೀಡಿದ್ದೇನೆಂದು ಸುಳ್ಳು ಆರೋಪ ಮಾಡಿದ್ದಾರೆ. ಅಂತಹ ನೀಚ ಕೆಲಸಕ್ಕೆ ನಾನು ಇಳಿಯುವುದಿಲ್ಲ. ಅವರು ಹತಾಶರಾಗಿ ಪ್ರತಿಕ್ರಿಯಿಸುತ್ತಿದ್ದು ನನ್ನ ವಿರುದ್ಧ ಏನೇನೋ ಹೇಳುತ್ತಿದ್ದಾರೆ ಎಂದು ಎಂದು ಮಾಜಿ ಶಾಸಕ ಹಾಗೂ ಕೆಪಿಸಿಸಿ ವಕ್ತಾರ ಗೋಪಾಲಕೃಷ್ಣ ಬೇಳೂರು ಪ್ರತಿಪಾದಿಸಿದರು.
ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹಿಂದೆ ತಮ್ಮ ವಿರುದ್ಧ ಇಂತಹ ಆರೋಪ ಬಂದಾಗ ಶಾಸಕ ಹಾಲಪ್ಪ ಅವರು ವೆಂಕಟೇಶ್ಮೂರ್ತಿ ಎಂಬುವವರ ವಿರುದ್ಧ ಇಂತಹುದೇ ಸುಳ್ಳು ಅತ್ಯಾಚಾರ ಪ್ರಕರಣ ದಾಖಲಿಸಲು ಪ್ರಚೋದಿಸಿದಂತಹ ಪ್ರಕರಣ ನಡೆದಿತ್ತು. ನಾನು ಈವರೆಗೂ ಬೇರೆಯವರ ವಿರುದ್ಧ ಎಫ್ಐಆರ್ ಮಾಡಲು ಪೊಲೀಸ್ ಸ್ಟೇಷನ್ ಮೆಟ್ಟಿಲು ಹತ್ತಿಲ್ಲ. ಶಾಸಕರು ಹೇಳೀಕೊಳ್ಳುವಂತೆ ಮೊನ್ನೆ ಕೂಡ ನಾನು ಹೋಗಿಲ್ಲ ಎಂದರು.
ನನ್ನ ಕಾಲದಲ್ಲಿ ಹೆಚ್ಚು ಎಫ್ಐಆರ್ ಆಗುತ್ತಿತ್ತು ಎಂದು ಶಾಸಕರು ಆರೋಪಿಸಿದ್ದಾರೆ. ನನ್ನ ಅವಧಿಯಲ್ಲಿ ಕಾನೂನು ಪ್ರಕಾರ ಎಫ್ಐಆರ್ ಆಗುವ ಪ್ರಕರಣದಲ್ಲಿ ಹಸ್ತಕ್ಷೇಪ ನಡೆಯುತ್ತಿರಲಿಲ್ಲ. ಈಗ ಶಾಸಕರು ಕೇಸು ದಾಖಲಾಗಲು ಬಿಡುತ್ತಿಲ್ಲವಾದುದರಿಂದ ಈ ತರಹದ ಕಡಿಮೆ ಸಾಧನೆ ಸಾಧ್ಯವಾಗಿದೆ ಎಂದು ಬೇಳೂರು ವ್ಯಂಗ್ಯವಾಡಿದರು.
ಎಂಡಿಎಫ್ ಸರ್ವಸದಸ್ಯರ ಸಭೆಯಲ್ಲಿ ಶ್ರೀಪಾದ ಹೆಗಡೆ ನಿಸ್ರಾಣಿ ಮತ್ತು ಜಗದೀಶ್ ಗೌಡ ಅವರ ಮೇಲೆ ಹಲ್ಲೆ ನಡೆಸಿದ 27 ಆರೋಪಿಗಳ ವಿರುದ್ಧ ನಾಲ್ಕು ತಿಂಗಳ ನಂತರ ಎಫ್ಐಆರ್ ದಾಖಲಾಗಿದೆ. ನಮ್ಮ ನಿರಂತರ ಹೋರಾಟಕ್ಕೆ ಸಿಕ್ಕ ಮೊದಲ ಜಯ. ನಿಂತು ಹಲ್ಲೆ ಮಾಡಿಸಿದ ಶಾಸಕ ಹಾಲಪ್ಪ ವಿರುದ್ಧ ಎಫ್ಐಆರ್ ದಾಖಲು ಮಾಡಿಲ್ಲ. ವಿಡಿಯೋ ಸಾಕ್ಷಿ ಇದ್ದರೂ ಸಾಗರದ ಪೊಲೀಸರಲ್ಲಿ ಭಯ ಇದೆ. ಪೊಲೀಸರು ಯಾವುದೋ ಒತ್ತಡಕ್ಕೆ ಮಣಿದು ಪ್ರಕರಣ ದಾಖಲು ಮಾಡಿಲ್ಲ. ಇಷ್ಟಾಗಿಯೂ ಎಂಡಿಎಫ್ ಹಲ್ಲೆ ಪ್ರಕರಣ ಹೊರಗಡೆ ನಡೆದಿದ್ದು, ನನಗೆ ಸಂಬಂಧ ಇಲ್ಲ ಎಂದು ಶಾಸಕರು ಹೇಳುತ್ತಿರುವುದು ಹಾಸ್ಯಾಸ್ಪದ ಎಂದು ಪ್ರತಿಕ್ರಿಯಿಸಿದರು.
ಎಂಡಿಎಫ್ ಆಡಳಿತದ ವಿಚಾರದಲ್ಲಿ ನಾನು ಯಾರ ಪರವೂ ಇಲ್ಲ. ಹರನಾಥರಾವ್ ಅಧ್ಯಕ್ಷರಾದರೂ ಸರಿ, ಸ್ವತಃ ಶಾಸಕ ಹಾಲಪ್ಪ ಆದರೂ ಆಕ್ಷೇಪಿಸುವುದಿಲ್ಲ. ಆದರೆ ಹಲ್ಲೆ ನಡೆಸಿದವರಿಗೆ ಶಿಕ್ಷೆಯಾಗಬೇಕು, ಮುಂದೆ ಇಂತಹ ಘಟನೆ ನಡೆಯಬಾರದು ಎನ್ನುವ ಉದ್ದೇಶದಿಂದ ಪ್ರತಿಭಟನೆ ನಡೆಸಿದ್ದೇನೆ. ನಮ್ಮೂರಿನ ವಿದ್ಯಾಸಂಸ್ಥೆ ಸುಲಲಿತವಾಗಿ ನಡೆಯಬೇಕು. ಅಂತಹ ವಿದ್ಯಾಸಂಸ್ಥೆಯ ನಿರ್ವಹಣೆಯ ವಿಚಾರದಲ್ಲಿ ನಾನು ವ್ಯತಿರಿಕ್ತವಾಗಿ ನಡೆದುಕೊಳ್ಳುವುದಿಲ್ಲ ಎಂದು ಸ್ಪಷ್ಟಪಡಿಸಿದರು.
ಸಾಗರ, ಹೊಸನಗರದಲ್ಲಿ ವಿಪರೀತ ಮಳೆಯಿಂದ ದೊಡ್ಡ ಪ್ರಮಾಣದಲ್ಲಿ ಹಾನಿಯಾಗಿದೆ. ಬ್ಯಾಕೋಡಿನಲ್ಲಿ ತೋಟದ ಮೇಲೆ ಧರೆ ಕುಸಿದು ಹದಿನೈದು ದಿನ ಆಗಿದೆ. ಈತನಕ ಶಾಸಕರಾಗಲಿ, ಅಧಿಕಾರಿಗಳಾಗಲಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿಲ್ಲ. ತಾಲೂಕಿನಲ್ಲಿ ಶೇ. ೪೦ಕ್ಕೂ ಹೆಚ್ಚು ಶಾಲೆಗಳು ತೀರ ದುಸ್ಥಿತಿಯಲ್ಲಿದ್ದು, ವಿದ್ಯಾರ್ಥಿಗಳು ಆತಂಕದಿಂದಲೇ ಕುಳಿತು ಪಾಠ ಕೇಳುವಂತಾಗಿದೆ. ಲ್ಯಾವಿಗೆರೆ ಶಾಲೆಯೊಳಗೆ ನೀರು ನುಗ್ಗಿದೆ. . ಕಳೆದ ವರ್ಷ ಮಳೆಯಿಂದ ಬಿದ್ದು ಹೋದ ಮನೆಗಳಿಗೆ ಈತನಕ ಪರಿಹಾರ ಕೊಟ್ಟಿಲ್ಲ. ಬಿಜೆಪಿ ಸರ್ಕಾರದ ಅವಧಿಯಲ್ಲಿ ಜನರಿಗೆ ಕಷ್ಟ ಬಿಟ್ಟರೆ ಇನ್ನೇನು ಸಿಕ್ಕಿಲ್ಲ ಎಂದು ದೂರಿದರು.
ನಗರ ಕಾಂಗ್ರೆಸ್ ಅಧ್ಯಕ್ಷ ಐ.ಎನ್.ಸುರೇಶಬಾಬು ಮಾತನಾಡಿ, ಸರ್ಕಾರಿ ಆಸ್ಪತ್ರೆ, ತಾಯಿಮಗು ಆಸ್ಪತ್ರೆಯಲ್ಲಿ ಪಥ್ಯಾಹಾರದ ಗುತ್ತಿಗೆ ಪಡೆದವರ ಕುರಿತು ನಾವು ಮಾತನಾಡುತ್ತಿಲ್ಲ. ಕಾನೂನಿನ ಪ್ರಕಾರ ಆಸ್ಪತ್ರೆಯಲ್ಲಿ ಅಡುಗೆ ಮನೆ ಸುಸ್ಥಿತಿಯಲ್ಲಿರುವಾಗ, ಅಡುಗೆಯವರಿರುವಾಗ, ಡಿ ದರ್ಜೆ ನೌಕರರನ್ನು ಕೊಟ್ಟಿರುವಾಗ, ನೀರು ಸರಬರಾಜು ಸರಿಯಿರುವಾಗ ಆಹಾರವನ್ನು ಇಲ್ಲಿಯೇ ತಯಾರಿಸುವುದರ ಬದಲು ಗುತ್ತಿಗೆ ಕೊಡುವಂತೆ ಯಾವ ಕಾರಣಕ್ಕಾಗಿ ಮಾಡಲಾಗಿದೆ ಎಂಬ ಪ್ರಶ್ನೆ ವೈದ್ಯಾಧಿಕಾರಿಗಳ ಕುರಿತು ಮೂಡುತ್ತದೆ. ಈ ವಿಷಯದಲ್ಲಿ ತಾರ್ಕಿಕ ಅಂತ್ಯ ಕಂಡುಕೊಳ್ಳುವವರೆಗೆ ಹೋರಾಟ ನಡೆಸಲಿದ್ದೇವೆ ಎಂದರು.
ಗೋಷ್ಠಿಯಲ್ಲಿ ಯುವ ಕಾಂಗ್ರೆಸ್ ಅಧ್ಯಕ್ಷ ಅಶೋಕ ಬೇಳೂರು, ಪ್ರಮುಖರಾದ ಮಹಾಬಲ ಕೌತಿ, ತಾರಾಮೂರ್ತಿ, ಸೋಮಶೇಖರ ಲ್ಯಾವಿಗೆರೆ, ಎಲ್.ಚಂದ್ರಪ್ಪ, ಆನಂದ್ ಭೀಮನೇರಿ, ರಾಘವೇಂದ್ರ, ಶ್ರೀನಾಥ್ ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ
LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ
Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ
Kerala ವಯನಾಡಲ್ಲಿ ರಾಹುಲ್ ಅಡಗಿ ಕುಳಿತಿದ್ದಾರೆ: ಬಿ.ವೈ. ವಿಜಯೇಂದ್ರ
Holehonnur: ರಾಜ್ಯದಲ್ಲಿ ಹೆಣ್ಣು ಮಕ್ಕಳಿಗೆ ಸುರಕ್ಷತೆಯಿಲ್ಲ: ಬಿ.ವೈ. ವಿಜಯೇಂದ್ರ
MUST WATCH
ಹೊಸ ಸೇರ್ಪಡೆ
Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ
Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ
Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !
Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು
RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ