ಸ್ಮಾರ್ಟ್‌ಸಿಟಿ ಕಾಮಗಾರಿ ಚುರುಕುಗೊಳಿಸಿ: ಬಸವರಾಜು


Team Udayavani, Jun 3, 2020, 7:04 AM IST

ಸ್ಮಾರ್ಟ್‌ಸಿಟಿ ಕಾಮಗಾರಿ ಚುರುಕುಗೊಳಿಸಿ: ಬಸವರಾಜು

ಶಿವಮೊಗ್ಗ: ನಗರದಲ್ಲಿ ಸ್ಮಾರ್ಟ್‌ ಸಿಟಿ ಕಾಮಗಾರಿಗಳನ್ನು ಚುರುಕುಗೊಳಿಸಲು ಕ್ರಮ ಕೈಗೊಳ್ಳಲಾಗಿದ್ದು, ನಿಗದಿತ ಅವಧಿಯ ಒಳಗಾಗಿ ಗುಣಮಟ್ಟದ ಕಾಮಗಾರಿ ನಡೆಸಲು ಸ್ಪಷ್ಟ ಸೂಚನೆ ನೀಡಲಾಗಿದೆ ಎಂದು ನಗರಾಭಿವೃದ್ಧಿ ಸಚಿವ ಬಿ.ಎ. ಬಸವರಾಜು ತಿಳಿಸಿದರು.

ಮಂಗಳವಾರ ಸ್ಮಾರ್ಟ್‌ ಸಿಟಿ ಕಾಮಗಾರಿಗಳ ಸ್ಥಳ ಪರಿಶೀಲನೆ ನಡೆಸಿದ ಬಳಿಕ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು. ಶಿವಮೊಗ್ಗ ಮಾದರಿ ನಗರವಾಗಿ ಅಭಿವೃದ್ಧಿಗೊಳ್ಳುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗಿದೆ. ನಗರದಲ್ಲಿರುವ ಎಲ್ಲಾ ಬೀದಿದೀಪಗಳನ್ನು ಬದಲಾಯಿಸಿ ಎಲ್‌ಇಡಿ ದೀಪಗಳನ್ನು ಅಳವಡಿಸಲಾಗುವುದು. ಇದಕ್ಕಾಗಿ ಪ್ರಥಮ ಹಂತದಲ್ಲಿ 22 ಸಾವಿರ ಎಲ್‌ಇಡಿ ದೀಪಗಳನ್ನು ಅಳವಡಿಸಲಾಗುತ್ತಿದ್ದು, ಟೆಂಡರ್‌ ಪ್ರಕ್ರಿಯೆ ಪೂರ್ಣಗೊಂಡಿದೆ. ಪಿಪಿಪಿ ಮಾದರಿಯ ಈ ಯೋಜನೆಯಿಂದಾಗಿ ವಿದ್ಯುತ್‌ ಗಣನೀಯ ಪ್ರಮಾಣದಲ್ಲಿ ಉಳಿತಾಯವಾಗಲಿದ್ದು, 7ವರ್ಷಗಳ ಉಚಿತ ನಿರ್ವಹಣೆ ಇರಲಿದೆ ಎಂದರು.

ಅಕ್ರಮ- ಸಕ್ರಮ: ರಾಜ್ಯದ ಎಲ್ಲಾ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಅಕ್ರಮ ಕಟ್ಟಡಗಳ ಸಕ್ರಮಗೊಳಿಸುವ ಪ್ರಸ್ತಾವನೆಯನ್ನು ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಮಂಡಿಸಲಾಗುವುದು. ಸಕ್ರಮಗೊಳಿಸುವ ಕುರಿತು ಸ್ಪಷ್ಟವಾದ ಮಾರ್ಗಸೂಚಿಯನ್ನು ಸಿದ್ಧಪಡಿಸಲಾಗಿದ್ದು, ಸಂಪುಟದ ಅನುಮೋದನೆಯೊಂದಿಗೆ ಇದನ್ನು ಅನುಷ್ಠಾನಗೊಳಿಸಲಾಗುವುದು. ಅಕ್ರಮ ನಿರ್ಮಾಣಗಳ ಪಟ್ಟಿಯನ್ನು ಸಿದ್ಧಪಡಿಸಲುಸಮೀಕ್ಷೆ ನಡೆಸಲು ಸೂಚಿಸಲಾಗಿದ್ದು, ನಿಗದಿತ ಸಮಯದ ಒಳಗಾಗಿ ಸಕ್ರಮೀಕರಣ ಪ್ರಕ್ರಿಯೆ ಪೂರ್ಣಗೊಳ್ಳಲಿದೆ ಎಂದರು.

ವಾಜಪೇಯಿ ಬಡಾವಣೆ ಸಮಸ್ಯೆ: ಹಲವು ವರ್ಷಗಳಿಂದ ನೆನೆಗುದಿಗೆ ಬಿದ್ದಿರುವ ವಾಜಪೇಯಿ ಬಡಾವಣೆ ಸಮಸ್ಯೆಗೆ ಮುಕ್ತಿ ದೊರಕಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗಿದೆ. ಈ ಕುರಿತು ಈಗಾಗಲೇ ಅಡ್ವೋಕೇಟ್‌ ಜನರಲ್‌ ಅವರೊಂದಿಗೆ ಸಮಾಲೋಚನೆ ನಡೆಸಲಾಗಿದ್ದು, ಪ್ರಕರಣ ಹಿಂತೆಗೆದುಕೊಳ್ಳಲು ಮನವಿ ಮಾಡಲಾಗಿದೆ ಎಂದರು.

ಸ್ಥಳ ಪರಿಶೀಲನೆ: ಸಚಿವರು ಶಿವಮೊಗ್ಗ ನಗರದ ಬಸ್‌ ನಿಲ್ದಾಣದಿಂದ ಆಲ್ಕೋಳ ವೃತ್ತದವರೆಗೆ ನಡೆಯುತ್ತಿರುವ ಮಾದರಿ ರಸ್ತೆ ಕಾಮಗಾರಿ, ವಿನೋಬಾ ನಗರದ ರಸ್ತೆ ಬದಿ ಪಾದಚಾರಿ ರಸ್ತೆ ಕಾಮಗಾರಿ, ಪುರಲೆ ಒಳಚರಂಡಿ ಕಾಮಗಾರಿ, ಲಕ್ಷ್ಮೀ ಥಿಯೇಟರ್‌ ವೃತ್ತ ಅಭಿವೃದ್ಧಿ ಕಾಮಗಾರಿ, ರಾಜೇಂದ್ರ ನಗರದಲ್ಲಿ ನಡೆಯುತ್ತಿರುವ ಉದ್ಯಾನವನ, ಒಳಾಂಗಣ ಕ್ರೀಡಾಂಗಣ ಸಮುತ್ಛಯ, ಜಿಪಂ ಮುಂಭಾಗ ನೀರಿನ ಟ್ಯಾಂಕ್‌ ನಿರ್ಮಾಣ, ಬೊಮ್ಮನಕಟ್ಟೆ ಕೆರೆ ಅಭಿವೃದ್ಧಿ, ಆದಿಚುಂಚನಗಿರಿ ಬಳಿ ಸಮುತ್ಛಯ ನಿರ್ಮಾಣ ಕಾಮಗಾರಿಗಳನ್ನು ವೀಕ್ಷಿಸಿದರು.

ಜನರ ಸಹಭಾಗಿತ್ವ ಅತಿ ಅಗತ್ಯ: ಜನರ ಸಹಭಾಗಿತ್ವ ಇದ್ದರೆ ಮಾತ್ರ ಯಾವುದೇ ಕಾಮಗಾರಿ ಯಶಸ್ವಿಯಾಗಲು ಸಾಧ್ಯವಿದೆ. ಬಹುತೇಕ ಎಲ್ಲಾ ಬಡಾವಣೆಗಳಲ್ಲಿ ಸುಂದರವಾದ ಉದ್ಯಾನವನಗಳನ್ನು ನಿರ್ಮಿಸಲಾಗುತ್ತಿದ್ದು, ಸ್ಥಳೀಯ ನಿವಾಸಿಗಳು ಸಂಘ ರಚಿಸಿ ಅವುಗಳ ಮೇಲುಸ್ತುವಾರಿ ನೋಡಿಕೊಳ್ಳಬೇಕು. ರಾಜೇಂದ್ರ ನಗರದಲ್ಲಿ ನೀರಿನ ಕಾಲುವೆಗೆ ತ್ಯಾಜ್ಯ ವಸ್ತುಗಳನ್ನು ಹಾಕದಂತೆ ಸ್ಥಳೀಯರೇ ಕ್ರಮ ಕೈಗೊಳ್ಳಬೇಕು. ಇಲ್ಲಿರುವ ಮನೆಗಳ ತ್ಯಾಜ್ಯ ನೀರು ನೇರವಾಗಿ ಕಾಲುವೆ ಸೇರುವಂತೆ ಸಂಪರ್ಕ ಕಲ್ಪಿಸಿದ್ದರೆ ಅದನ್ನು ತೆರವುಗೊಳಿಸಿ ನಿವಾಸಿಗಳಿಗೆ ಎಚ್ಚರಿಕೆ ನೀಡಬೇಕು ಎಂದು ಸಚಿವರು ತಿಳಿಸಿದರು.

ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್‌. ಈಶ್ವರಪ್ಪ, ಲೋಕಸಭಾ ಸದಸ್ಯ ಬಿ.ವೈ.ರಾಘವೇಂದ್ರ, ಮೇಯರ್‌ ಸುವರ್ಣಾ ಶಂಕರ್‌, ಮಹಾನಗರ ಪಾಲಿಕೆ ಆಯುಕ್ತ ಚಿದಾನಂದ ವಟಾರೆ ಮತ್ತಿತರರು ಇದ್ದರು.

ಟಾಪ್ ನ್ಯೂಸ್

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

1-sasdas

ಮುನ್ನೂರಿಗೆ ಹೋಗುವ ರಸ್ತೆಯ ಧರೆ ಕುಸಿತ: ಸಂಪರ್ಕ ಕಡಿತಗೊಳ್ಳುವ ಆತಂಕ…!

1-sffdsfsd

Arasalu; ರೈಲು ಹಳಿ ಮೇಲೆ ಮರ ಬಿದ್ದು ರೈಲು ಸಂಚಾರ ಸ್ಥಗಿತ

rain

ನಿರಂತರ ಬಿರುಗಾಳಿ ಮಳೆ: ತೀರ್ಥಹಳ್ಳಿ,ಸಾಗರ ತಾಲೂಕಿನ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

1-tir-a

NH 169A ತೀರ್ಥಹಳ್ಳಿ; ಬೈಪಾಸ್ ರಸ್ತೆಯಲ್ಲಿ ಮಣ್ಣು ಜರಿತ: ವಾಹನ ಸಂಚಾರ ಬಂದ್!

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

2-chithapura

Chittapur: ಪಟ್ಟಣದ ಹೊರವಲಯದಲ್ಲಿ ಯುವಕನ ಶವ ಪತ್ತೆ: ಕೊಲೆ ಶಂಕೆ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.