ನೋಡಲ್ ಅಧಿಕಾರಿ ಬದಲಾವಣೆಗೆ ಖಂಡನೆ
Team Udayavani, Jun 5, 2021, 2:54 PM IST
ಶಿವಮೊಗ್ಗ: ನಗರದ ಮೆಗ್ಗಾನ್ ಬೋಧನಾ ಆಸ್ಪತ್ರೆ ಕೋವಿಡ್ ಲಸಿಕಾ ಕೇಂದ್ರದಲ್ಲಿ ನಿಷ್ಪಕ್ಷಪಾತ ಹಾಗೂ ಪ್ರಾಮಾಣಿಕವಾಗಿ ಕರ್ತವ್ಯ ನಿರ್ವಹಿಸುತ್ತಿರುವ ನೋಡಲ್ ಅಧಿ ಕಾರಿಯಾದ ಡಾ.ಪ್ರವೀಣಕುಮಾರ್ ಅವರನ್ನು ಏಕಾಏಕಿ ಬದಲಾವಣೆ ಮಾಡಿರುವುದನ್ನು ಖಂಡಿಸಿ ಸಿಮ್ಸ್ ನಿರ್ದೇಶಕರಿಗೆ ಮತ್ತು ಮುಖ್ಯಮಂತ್ರಿಗಳ ಕಾರ್ಯದರ್ಶಿ ಸೆಲ್ವ ಕುಮಾರ್ ಅವರಿಗೆ ಜಿಲ್ಲಾ ಯುವ ಕಾಂಗ್ರೆಸ್ ಮನವಿ ಸಲ್ಲಿಸಿತು.
ನಿತ್ಯ ಕೋವಿಡ್ ಲಸಿಕೆಗಾಗಿ ಜನ ಬೆಳ್ಳಂಬೆಳಗ್ಗೆ ಸರತಿ ಸಾಲಿನಲ್ಲಿಬಂದು ಟೋಕನ್ಗಳನ್ನು ಪಡೆದುಲಸಿಕೆ ಪಡೆಯುತ್ತಿದ್ದರು. ಇಂತಹ ವ್ಯವಸ್ಥೆಯನ್ನು ಅಚ್ಚುಕಟ್ಟಾಗಿಸಾರ್ವಜನಿಕರಿಗೆ ಅನುಕೂಲವಾಗುವರೀತಿಯಲ್ಲಿ ಯಾವುದೇ ಒತ್ತಡಗಳಿಗೆಮಣಿಯದೆ ನಿತ್ಯ ಸಾರ್ವಜನಿಕರಿಗೆ ಲಸಿಕೆ ಕೊಡುವುದರಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದ್ದ ನೋಡಲ್ ಅಧಿಕಾರಿಯನ್ನು ಏಕಾಏಕಿ ಬದಲಾವಣೆಯ ಅವಶ್ಯಕತೆ ಏನಿತ್ತು? ಎಂದು ಪ್ರಶ್ನಿಸಿದೆ.
ಜನಪ್ರತಿನಿಧಿಗಳು ಹಾಗೂ ಸಿಮ್ಸ್ ನ ಕೆಲವು ಅಧಿಕಾರಿಗಳು ತಮ್ಮಬೆಂಬಲಿಗರಿಗೆ ಕುಟುಂಬದವರಿಗೆ ಹಾಗೂ ಆತ್ಮೀಯರಿಗೆ ಟೋಕನ್ ಕೊಡಲಿಲ್ಲ ಎಂಬ ಕಾರಣಕ್ಕೆರಾಜಕೀಯ ಹಾಗೂ ಮೇಲಾಧಿಕಾರಿಗಳ ಪ್ರಭಾವವನ್ನು ಬಳಸಿ ತಮಗೆ ಬೇಕಾದಂತಹ ಅಧಿಕಾರಿಯನ್ನು ನೇಮಿಸಿರುತ್ತಾರೆ. ಮುಂದಿನ ದಿನಗಳಲ್ಲಿ ಬಡವರು ಮಧ್ಯಮ ವರ್ಗದವರು,ವಯೋವೃದ್ಧರು ಬೆಳಗಿನಿಂದಲೇಸರತಿ ಸಾಲಿನಲ್ಲಿ ನಿಂತರೂ ಸಹ ಟೋಕನ್ ಪಡೆಯುವುದು ಅಸಾಧ್ಯವಾಗಿರುತ್ತದೆ. ಪ್ರಭಾವಿಗಳು ಒಬ್ಬೊಬ್ಬರೂ ಹತ್ತರಿಂದ ಹದಿನೈದುಟೋಕನ್ಗಳನ್ನು ಒಳಗಿಂದೊಳಗೆ ಪಡೆದು ಲಸಿಕೆ ಹಾಕಿಸಿಕೊಳ್ಳುವುದರಲ್ಲಿಸಫಲರಾಗುತ್ತಾರೆ. ಇದರಿಂದ ಸರತಿಸಾಲಿನಲ್ಲಿ ನಿಂತವರಿಗೆ ದೈಹಿಕ ಹಾಗೂಮಾನಸಿಕವಾಗಿ ಕುಗ್ಗು ಹೋಗುವಸಂಭವವೇ ಹೆಚ್ಚಾಗಿರುತ್ತದೆ ಎಂದು ತಿಳಿಸಿದ್ದಾರೆ.
ಕೂಡಲೇ ನೋಡಲ್ ಅಧಿಕಾರಿಯ ಬದಲಾವಣೆ ಮಾಡಿರುವಆದೇಶವನ್ನು ಹಿಂಪಡೆದು ಈಗಿರುವ ನೋಡಲ್ ಅಧಿಕಾರಿಯುಯಥಾಸ್ಥಿತಿಯಾಗಿ ಕರ್ತವ್ಯ ನಿರ್ವಹಿಸಲು ಆದೇಶಿಸಬೇಕೆಂದು ಈ ಮೂಲಕ ಯುವ ಕಾಂಗ್ರೆಸ್ಆಗ್ರಹಿಸಿದೆ.
ಯುವ ಕಾಂಗ್ರೆಸ್ ಮನವಿಗೆ ಸ್ಪಂದಿಸಿ ಅಧಿಕಾರಿಯವರ ಬದಲಾವಣೆ ಆದೇಶವನ್ನು ಹಿಂಪಡೆಯದೇ ಇದ್ದಲ್ಲಿ ಹೋರಾಟ ಅನಿವಾರ್ಯ ಎಂದು ಜಿಲ್ಲಾ ಯುವ ಕಾಂಗ್ರೆಸ್ ಈ ಮೂಲಕಎಚ್ಚರಿಸಿದೆ. ಜಿಲ್ಲಾ ಕಾಂಗ್ರೆಸ್ ಪ್ರಧಾನಕಾರ್ಯದರ್ಶಿ ಕೆ.ರಂಗನಾಥ್, ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಎಚ್.ಪಿ. ಗಿರೀಶ್, ಉತ್ತರ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ಬಿ.ಲೋಕೇಶ್ ಗ್ರಾಮಾಂತರ ಅಧ್ಯಕ್ಷಈ.ಟಿ. ನಿತಿನ್, ದಕ್ಷಿಣ ಬ್ಲಾಕ್ ಯುವಕಾಂಗ್ರೆಸ್ ಎಸ್. ಕುಮರೇಶ್, ಪದಾಧಿ ಕಾರಿಗಳಾದ ವೆಂಕಟೇಶ್ ಕಲ್ಲೂರು,ಕೆ.ಎಲ್. ಪವನ್, ರಾಹುಲ್, ಗಗನ್ ಗೌಡ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ
Rameshwaram Cafe blast:ತೀರ್ಥಹಳ್ಳಿಯಲ್ಲಿ ಬೆಳ್ಳಂಬೆಳಗ್ಗೆ ಎನ್ಐಎ ದಾಳಿ
ರಾಜ್ಯ ಬಿಜೆಪಿಯಲ್ಲೀಗ ಕಾಂಗ್ರೆಸ್ ಸಂಸ್ಕೃತಿ ಬಂದಿದೆ: ಕೆ.ಎಸ್. ಈಶ್ವರಪ್ಪ
ಶಿವಮೊಗ್ಗ: ಮಂಗನ ಕಾಯಿಲೆಗೆ ಏಳು ವರ್ಷದ ಬಾಲಕಿ ಸಾವು
Rice: ಅಂಗನವಾಡಿ ಮಕ್ಕಳಿಗಿಲ್ಲ ಅನ್ನ ಭಾಗ್ಯ! ಮೂರು ತಿಂಗಳಿಂದ ಅಕ್ಕಿ ಪೂರೈಕೆ ಸ್ಥಗಿತ
MUST WATCH
ಹೊಸ ಸೇರ್ಪಡೆ
Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ
Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್
Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್’ ಎಂದ ಬಿಜೆಪಿಗರು!
Narayan Gowda: ಹೆಚ್ಚಿನ ಮತಗಳಿಂದ ಎಚ್ಡಿಕೆ ಗೆಲ್ಲಿಸುತ್ತೇವೆ: ನಾರಾಯಣ ಗೌಡ
Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ