ಸಚಿವ ರವಿ ಹೇಳಿಕೆ ಖಂಡಿಸಿ ಧರಣಿ
Team Udayavani, Jan 7, 2020, 3:35 PM IST
ಶಿವಮೊಗ್ಗ: ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸಿ.ಟಿ.ರವಿ ಕನ್ನಡಪರ ಸಂಘಟನೆಗಳಿಗೆ ಕೆಟ್ಟ ಪದ ಬಳಸಿದ್ದು, ಇವರ ವಿರುದ್ದ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಜಿಲ್ಲಾಧಿಕಾರಿ ಕಚೇರಿ ಎದುರು ಜಯ ಕರ್ನಾಟಕ ಸಂಘಟನೆ ವತಿಯಿಂದ ಪ್ರತಿಭಟನೆ ನಡೆಸಲಾಯಿತು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸಿ.ಟಿ.ರವಿ ಕಾರ್ಯಕ್ರಮವೊಂದರಲ್ಲಿ ಕನ್ನಡ ಪರ ಸಂಘಟನೆಗಳ ವಿಚಾರವಾಗಿ ಮಾತನಾಡುವ ಸಂದರ್ಭದಲ್ಲಿ ಸಂಘಟನೆಗಳು ತುಕಡೆ ಗ್ಯಾಂಗ್ ಗಳೆಂದು ನಿಂಧಿಸಿ ಕರ್ನಾಟಕದ ನೆಲ, ಜಲ, ಭಾಷೆ, ಸಂಸ್ಕೃತಿಗೋಸ್ಕರ ಹೋರಾಟ ಮಾಡುವ ಎಲ್ಲ ಕನ್ನಡಪರ ಹೋರಾಟಗಾರರಿಗೆ ಅವಮಾನ ಮಾಡಲಾಗಿದೆ ಎಂದು ಆರೋಪಿಸಿದರು.
ಕಳೆದ ನವೆಂಬರ್ 1 ರಂದು ರಾಜ್ಯಾದ್ಯಂತ ಕನ್ನಡ ರಾಜ್ಯೋತ್ಸವ ಆಚರಿಸುತ್ತಿದ್ದ ಆ ದಿನವೇ ಸಚಿವ ಸಿ.ಟಿ.ರವಿಯವರು ಕನ್ನಡ ಧ್ವಜಾರೋಹಣ ಕಾರ್ಯಕ್ರಮಕ್ಕೆ ಭಾಗವಹಿಸದೇ ಕನ್ನಡ ಧ್ವಜಕ್ಕೆ , ಕನ್ನಡಾಂಬೆಗೆ ಅವಮಾನ ಮಾಡಿದ್ದಾರೆ. ಇವರ ವಿರುದ್ಧ ಕಪ್ಪು ಬಾವುಟ ತೋರಿಸಿದ ಕೆಲವರ ವಿರುದ್ಧ ಯಾವುದೇ ಹೇಳಿಕೆ ನೀಡದೇ ಪರೋಕ್ಷವಾಗಿ ಬೆಂಬಲಿಸಿರುವುದು ಇದರಿಂದ ತಿಳಿಯುತ್ತದೆ ಎಂದು ಪ್ರತಿಭಟನಾರರು ಮನವಿಯಲ್ಲಿ ತಿಳಿಸಿದ್ದಾರೆ.
ಈ ಕೂಡಲೇ ಸಚಿವರು ತಮ್ಮ ತಪ್ಪನ್ನು ಒಪ್ಪಿಕೊಂಡು ಕನ್ನಡಿಗರ ಕ್ಷಮೆ ಕೋರಬೇಕು. ಮುಂದೆ ಈ ರೀತಿಯ ತಪ್ಪುಗಳನ್ನು ಮಾಡಬಾರದು. ಇದೇ ಧೋರಣೆ ಮುಂದುವರಿದಲ್ಲಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಲು ಒತ್ತಾಯಿಸಲಾಗುವುದು ಎಂದು ಎಚ್ಚರಿಸಿದರು. ಮಂಜುನಾಥ ಶೆಟ್ಟಿ, ಸುರೇಶ್ ಶೆಟ್ಟಿ ಸೇರಿದಂತೆ ಹಲವರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ
Shobha, Bharathi Shetty ಹೊರತು ಬಿಎಸ್ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ
Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮನೆ ರತ್ನಾಕರ್
Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್ರಿಂದ ಪರಿಶೀಲನೆ
Lok Sabha Election: ‘ಬಿವೈಆರ್ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’
MUST WATCH
ಹೊಸ ಸೇರ್ಪಡೆ
EC ಚುನಾವಣ ಆಯೋಗ ಅಲ್ಲ, ಬಿಜೆಪಿ ಆಯೋಗ: ಮಮತಾ ಬ್ಯಾನರ್ಜಿ ಟೀಕಾಸ್ತ್ರ
Kasaragod ವಿವಿಪ್ಯಾಟ್ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ
ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್ ಭಾಟಿಯಾ ವ್ಯಂಗ್ಯ
ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್
ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್ಗೆ ಕೇಜ್ರಿವಾಲ್ ಮಾಹಿತಿ