ನಿಷೇಧಾಜ್ಷೆ ಹಿನ್ನಲೆ ಕಾಂಗ್ರೆಸ್ ಕರೆ ನೀಡಿದ್ದ ಪ್ರತಿಭಟನೆ ರದ್ದು
Team Udayavani, Dec 19, 2019, 12:54 PM IST
ಸಾಂದರ್ಭಿಕ ಚಿತ್ರ ಬಳಸಲಾಗಿದೆ
ಶಿವಮೊಗ್ಗ: ಪೌರತ್ವ ತಿದ್ದುಪಡಿ ಕಾಯ್ದೆಯನ್ನು ವಿರೋಧಿಸಿ ರಾಜ್ಯದಾದ್ಯಂತ ಪ್ರತಿಭಟನೆ ನಡೆಯುತ್ತಿದ್ದು ಶಿವಮೊಗ್ಗದಲ್ಲಿ ಕಾಂಗ್ರೆಸ್ ನಡೆಸಲು ಉದ್ದೇಶಿಸಿದ್ದ ಪ್ರತಿಭಟನೆಯನ್ನು ರದ್ದು ಮಾಡಲು ನಿರ್ಧರಿಸಿದೆ.
ಶಿವಮೊಗ್ಗ ಜಿಲ್ಲೆಯಾದ್ಯಂತ 144 ಸೆಕ್ಷನ್ ಜಾರಿಯಾದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಕರೆ ನೀಡಿದ್ದ ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಪ್ರತಿಭಟನೆಯನ್ನು ಕೈ ಬಿಡಲು ನಿರ್ಧರಿಸಿದೆ.
ಪ್ರತಿಭಟನೆಗೆ ಅನುಮತಿ ನೀಡಲು ಪೊಲೀಸ್ ಇಲಾಖೆ ಹಾಗೂ ಜಿಲ್ಲಾಡಳಿತ ನಿರಾಕರಿಸಿದ ಹಿನ್ನಲೆಯಲ್ಲಿ ಕಾಂಗ್ರೆಸ್ ಕಚೇರಿಗೆ ಪ್ರತಿಭಟನೆಗಾಗಿ ಆಗಮಿಸಿದ ಮುಖಂಡರು ಹಾಗೂ ಕಾರ್ಯಕರ್ತರು ವಾಪಸಾದರು.
ಪೊಲೀಸರು ಬಂಧಿಸಿದರೂ ಪರವಾಗಿಲ್ಲ ಪ್ರತಿಭಟನೆ ನಡೆಸೋಣ ಎಂದು ಕಾರ್ಯಕರ್ತರು ಪಕ್ಷದ ಮುಖಂಡರ ಬಳಿ ದುಂಬಾಲು ಬಿದ್ದ ಪ್ರಸಂಗವೂ ನಡೆಯಿತು. ನಂತರ ಮುಖಂಡರು ಕಾರ್ಯಕರ್ತರನ್ನು ಸಮಾಧಾನಪಡಿಸಿದರು.
ಜಿಲ್ಲೆಯ ವಿವಿಧ ಭಾಗದಿಂದ ಪ್ರತಿಭಟನೆಗೆ ಆಗಮಿಸಿದ್ದ ಕಾರ್ಯಕರ್ತರು ಪಕ್ಷದ ಕಚೇರಿಯಲ್ಲೇ ಬಿಜೆಪಿ ವಿರುದ್ಧ ಘೋಷಣೆ ಕೂಗಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು
BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ