Congress; ನಿಗಮ ಮಂಡಳಿ ನಾನು ಕೇಳಿಲ್ಲ, ಅವರು ಕೊಟ್ಟಿಲ್ಲ: ಶಾಸಕ ಬೇಳೂರು


Team Udayavani, Nov 23, 2023, 5:12 PM IST

1-sadasdsd

ಸಾಗರ: ನಾನು ನಿಗಮ ಮಂಡಳಿ ಆಕಾಂಕ್ಷಿಯಲ್ಲ. ನಿಗಮ ಮಂಡಳಿಗಳ ಅಧ್ಯಕ್ಷ ಸ್ಥಾನವನ್ನು ಸಿಎಂ, ಡಿಸಿಎಂ ಅವರ ಬಳಿ ಕೇಳಿಲ್ಲ. ಹಾಗಾಗಿ ನಿರಾಶೆ, ಅಸಮಾಧಾನದ ಮಾತೂ ಇಲ್ಲ ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ಗೋಪಾಲಕೃಷ್ಣ ಸ್ಪಷ್ಟಪಡಿಸಿದರು.

ಮಿನಿ ವಿಧಾನಸೌಧ ಕಾಮಗಾರಿಯನ್ನು ಗುರುವಾರ ಪರಿಶೀಲನೆ ನಡೆಸಿ ಮಾತನಾಡಿ, ಭದ್ರಾವತಿ ಶಾಸಕ ಸಂಗಮೇಶ್ ಬಿ.ಕೆ. ಅವರಿಗೆ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ ನೀಡುವುದನ್ನು ಸ್ವಾಗತಿಸುತ್ತೇನೆ. ಮುಂದಿನ ದಿನಗಳಲ್ಲಿ ನನಗೆ ಒಳ್ಳೆಯ ಸ್ಥಾನ ಸಿಗುವ ನಿರೀಕ್ಷೆ ಇದೆ. ಜಾತಿಗಣತಿ ಸಮೀಕ್ಷೆ ವರದಿ ಅನುಷ್ಠಾನಕ್ಕೆ ಸಂಬಂಧಪಟ್ಟಂತೆ ಮುಖ್ಯಮಂತ್ರಿಗಳು ತೆಗೆದುಕೊಳ್ಳುವ ನಿರ್ಧಾರಕ್ಕೆ ನಾನು ಬದ್ದವಾಗಿದ್ದೇನೆ. ನನ್ನ ಅಭಿವೃದ್ಧಿ ವೇಗಕ್ಕೆ ಅಡ್ಡಿಪಡಿಸಲು ಯಾರಿಂದಲೂ ಸಾಧ್ಯವಿಲ್ಲ ಎಂದರು.

ನೂತನ ಮಿನಿ ವಿಧಾನ ಸೌಧ ಸುಮಾರು 16 ಕೋಟಿ ರೂ. ವೆಚ್ಚದಲ್ಲಿ ಸುಸಜ್ಜಿತವಾಗಿ ನಿರ್ಮಾಣವಾಗುತ್ತಿದ್ದು, ಕಾಮಗಾರಿ ಅಂತಿಮ ಹಂತ ತಲುಪಿದೆ. ನೂತನ ಮಿನಿ ವಿಧಾನಸೌಧವನ್ನು ಉದ್ಘಾಟಿಸಲು ಲೋಕೋಪಯೋಗಿ ಸಚಿವರನ್ನು ಆಹ್ವಾನಿಸಲಾಗುತ್ತದೆ. ವಿಧಾನಸಭೆ ಅಧಿವೇಶನ ನಂತರ ಲೋಕಾರ್ಪಣೆಗೊಳಿಸಲು ಚಿಂತನೆ ನಡೆಸಲಾಗಿದೆ. ಜನವರಿ ಎರಡನೇ ಭಾಗದಲ್ಲಿ ಉದ್ಘಾಟನೆ ನಡೆಯಬಹುದು ಎಂದರು.

ಈಗಾಗಲೇ 8.50 ಕೋಟಿ ರೂ. ಹಣ ಖರ್ಚಾಗಿದ್ದು, 2.15 ಕೋಟಿ ರೂ. ಹೆಚ್ಚುವರಿಯಾಗಿ ಮಂಜೂರಾಗಿದೆ. ಮೂರನೆ ಅಂತಸ್ತು ಮತ್ತು ಮೇಲ್ಚಾವಣಿ ನಿರ್ಮಾಣಕ್ಕೆ 5.20 ಕೋಟಿ ರೂ. ಪ್ರಸ್ತಾವನೆ ಸಲ್ಲಿಸಲಾಗಿದ್ದು ಶೀಘ್ರದಲ್ಲಿಯೆ ಹಣ ಬಿಡುಗಡೆಯಾಗುತ್ತದೆ. ಸಬ್ ರಿಜಿಸ್ಟ್ರಾರ್ ಕಚೇರಿ ಹೊರತುಪಡಿಸಿ ಎಲ್ಲಾ ಕಚೇರಿಗಳು ಒಂದೇ ಸಂಕೀರ್ಣದಲ್ಲಿ ಬರುತ್ತದೆ. ಮಿನಿ ವಿಧಾನಸೌಧ ಪಕ್ಕದಲ್ಲಿಯೇ ಸುಮಾರು ೪ ಕೋಟಿ ರೂ. ವೆಚ್ಚದಲ್ಲಿ ಸಬ್ ರಿಜಿಸ್ಟ್ರಾರ್ ಕಚೇರಿ ನಿರ್ಮಿಸಲಾಗುತ್ತದೆ. ಇದಕ್ಕೆ ಸಂಬಂಧಪಟ್ಟಂತೆ ಹಣ ಸಹ ಕಾಯ್ದಿರಿಸಲಾಗಿದೆ. ಶಾಸಕರ ಕಚೇರಿ ಸಹ ಮಿನಿ ವಿಧಾನಸೌಧದಲ್ಲಿಯೆ ಇರುತ್ತದೆ ಎಂದರು.

ಅಭಿವೃದ್ಧಿ ಕಾಮಗಾರಿಗಳಿಗೆ ಹಣಕಾಸಿನ ಕೊರತೆ ಇಲ್ಲ. ಸಾಗರ ಕ್ಷೇತ್ರದ ಅಭಿವೃದ್ಧಿಗೆ ಬೇಕಾದ ಹಣವನ್ನು ಮಂಜೂರು ಮಾಡಲು ಮುಖ್ಯಮಂತ್ರಿಗಳು ಹಾಗೂ ಉಪ ಮುಖ್ಯಮಂತ್ರಿಗಳಿಗೆ ಪ್ರಸ್ತಾವನೆ ಸಲ್ಲಿಸಿದಾಗ ಅವರು ಹೆಚ್ಚಿನ ಸಹಕಾರ ನೀಡುತ್ತಿದ್ದಾರೆ. ನಗರೋತ್ಥಾನ ಯೋಜನೆಯಡಿ ಅನುದಾನ ಬಂದಿದ್ದು ಅದನ್ನು ಸದ್ಬಳಕೆ ಮಾಡಿಕೊಳ್ಳಲಾಗುತ್ತದೆ. ಸುಸಜ್ಜಿತ ರಂಗಮಂದಿರ ನಿರ್ಮಾಣಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಕ್ಷೇತ್ರದ ಜನರ ನಿರೀಕ್ಷೆಗೆ ಮೀರಿ ಅಭಿವೃದ್ಧಿ ಕೆಲಸಗಳನ್ನು ಮಾಡಲಾಗುತ್ತದೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ತಹಶೀಲ್ದಾರ್ ಚಂದ್ರಶೇಖರ ನಾಯ್ಕ್, ಲೋಕೋಪಯೋಗಿ ಇಲಾಖೆ ಸಹಾಯಕ ಕಾರ್ಯಪಾಲಕ ಅಭಿಯಂತರ ಮಂಜುನಾಥ್, ಉಪ ತಹಶೀಲ್ದಾರ್ ಕಲ್ಲಪ್ಪ ಮೆಣಸಿನಾಳ್, ಪ್ರಮುಖರಾದ ಸೋಮಶೇಖರ ಲ್ಯಾವಿಗೆರೆ, ಚೇತನರಾಜ್ ಕಣ್ಣೂರು, ಅಶೋಕ ಬೇಳೂರು, ಗಣಪತಿ ಮಂಡಗಳಲೆ, ಸುರೇಶಬಾಬು, ಬಸವರಾಜ್ ಕುಗ್ವೆ, ನಾಗರಾಜ ಗುಡ್ಡೆಮನೆ, ರಮೇಶ್ ಇನ್ನಿತರರು ಹಾಜರಿದ್ದರು.

ಟಾಪ್ ನ್ಯೂಸ್

ಹಲ್ಲೆಗೈದು ಮನೆಯಿಂದ ಕಳವು ಪ್ರಕರಣ: 2 ವರ್ಷಗಳ ಬಳಿಕ ಆರೋಪಿಗಳ ಸೆರೆ

ಹಲ್ಲೆಗೈದು ಮನೆಯಿಂದ ಕಳವು ಪ್ರಕರಣ: 2 ವರ್ಷಗಳ ಬಳಿಕ ಆರೋಪಿಗಳ ಸೆರೆ

Somwarpet ಮರ ಬಿದ್ದು ಕಾರ್ಮಿಕ ಸಾವು

Somwarpet ಮರ ಬಿದ್ದು ಕಾರ್ಮಿಕ ಸಾವು

Revanna 2

H.D. Revanna;ಇನ್ನಷ್ಟು ವಿಚಾರಣೆಗೆ 4 ದಿನ ಎಸ್ ಐಟಿ ಕಸ್ಟಡಿಗೆ

1-wqeqwqe

IPL; ಪಂಜಾಬ್ ವಿರುದ್ಧ ಚೆನ್ನೈ ಸೂಪರ್ ಕಿಂಗ್ಸ್ ಗೆ 28 ರನ್‌ಗಳ ಜಯ

voter

Pen Drive ಹಗರಣದ ನಡುವೆ ರಾಜ್ಯದ ಎರಡನೇ ಹಂತದ ಬಹಿರಂಗ ಪ್ರಚಾರ ಅಂತ್ಯ

Arun Shahapur ಸೋಲಿನ ಭೀತಿಯಿಂದ ಜಿಗಜಿಣಗಿ ವಿರುದ್ಧ ಆಲಗೂರ ಅಪಪ್ರಚಾರ

Arun Shahapur ಸೋಲಿನ ಭೀತಿಯಿಂದ ಜಿಗಜಿಣಗಿ ವಿರುದ್ಧ ಆಲಗೂರ ಅಪಪ್ರಚಾರ

ಯತ್ನಾಳ್ ಮಂತ್ರಿ ಮಾಡಲು ಸಲಹೆ ನೀಡಿದ್ದೇ ನಾನು: ರಮೇಶ ಜಿಗಜಿಣಗಿ

Basangouda Patil Yatnal ಮಂತ್ರಿ ಮಾಡಲು ಸಲಹೆ ನೀಡಿದ್ದೇ ನಾನು: ರಮೇಶ ಜಿಗಜಿಣಗಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

B.Y. Raghavendra: ಕಮಲದ ಗುರುತಿಗೆ ಮತ ನೀಡಿ; ಬಿವೈಆರ್‌

B.Y. Raghavendra: ಕಮಲದ ಗುರುತಿಗೆ ಮತ ನೀಡಿ; ಬಿವೈಆರ್‌

ಸಮರ್ಥ ರಾಷ್ಟ್ರ – ಸಮಗ್ರ ಅಭಿವೃದ್ಧಿಗಾಗಿ ಮತ್ತೂಮ್ಮೆ ಸಂಸತ್‌ಗೆ ಕಳುಹಿಸಿ: B.Y. ರಾಘವೇಂದ್ರ

ಸಮರ್ಥ ರಾಷ್ಟ್ರ – ಸಮಗ್ರ ಅಭಿವೃದ್ಧಿಗಾಗಿ ಮತ್ತೂಮ್ಮೆ ಸಂಸತ್‌ಗೆ ಕಳುಹಿಸಿ: B.Y. ರಾಘವೇಂದ್ರ

ಈ ಬಾರಿ ಚುನಾವಣೆಯಲ್ಲಿ ಸಂವಿಧಾನದ ಅಳಿವು ಉಳಿವಿನ ಪ್ರೆಶ್ನೆಯಾಗಿದೆ: ಟಿ.ಬಿ.ಜಯಚಂದ್ರ

ಈ ಬಾರಿ ಚುನಾವಣೆಯಲ್ಲಿ ಸಂವಿಧಾನದ ಅಳಿವು ಉಳಿವಿನ ಪ್ರೆಶ್ನೆಯಾಗಿದೆ: ಟಿ.ಬಿ.ಜಯಚಂದ್ರ

10

Thirthahalli: ಶಿಕ್ಷಕರ ಚುನಾವಣೆಯಲ್ಲಿ ಶಿಕ್ಷಕರೇ ಸ್ಪರ್ಧೆ ಮಾಡಬೇಕು: ಅರುಣ್ ಹೊಸಕೊಪ್ಪ

Lok Sabha Polls: ಕಾಗೆ ಮಾತು ಕಾಂಗ್ರೆಸ್‌ನ ಮನಸ್ಥಿತಿ: ಬಿ.ವೈ.ರಾಘವೇಂದ್ರ

Lok Sabha Polls: ಕಾಗೆ ಮಾತು ಕಾಂಗ್ರೆಸ್‌ನ ಮನಸ್ಥಿತಿ: ಬಿ.ವೈ.ರಾಘವೇಂದ್ರ

MUST WATCH

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

ಹೊಸ ಸೇರ್ಪಡೆ

ಹಲ್ಲೆಗೈದು ಮನೆಯಿಂದ ಕಳವು ಪ್ರಕರಣ: 2 ವರ್ಷಗಳ ಬಳಿಕ ಆರೋಪಿಗಳ ಸೆರೆ

ಹಲ್ಲೆಗೈದು ಮನೆಯಿಂದ ಕಳವು ಪ್ರಕರಣ: 2 ವರ್ಷಗಳ ಬಳಿಕ ಆರೋಪಿಗಳ ಸೆರೆ

Somwarpet ಮರ ಬಿದ್ದು ಕಾರ್ಮಿಕ ಸಾವು

Somwarpet ಮರ ಬಿದ್ದು ಕಾರ್ಮಿಕ ಸಾವು

1-wewwqewq

Bantwal: ನೇತ್ರಾವತಿ ನದಿಯಲ್ಲಿ ಮುಳುಗಿ ಇಬ್ಬರು ಬಾಲಕಿಯರು ಮೃತ್ಯು

Revanna 2

H.D. Revanna;ಇನ್ನಷ್ಟು ವಿಚಾರಣೆಗೆ 4 ದಿನ ಎಸ್ ಐಟಿ ಕಸ್ಟಡಿಗೆ

1-wqeqwqe

IPL; ಪಂಜಾಬ್ ವಿರುದ್ಧ ಚೆನ್ನೈ ಸೂಪರ್ ಕಿಂಗ್ಸ್ ಗೆ 28 ರನ್‌ಗಳ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.