ಕಾಂಗ್ರೆಸ್ ಕಾರ್ಯಕರ್ತನ ಮೇಲೆ ಹಲ್ಲೆ -ಪ್ರತಿಭಟನೆ
Team Udayavani, Feb 10, 2021, 4:41 PM IST
ಸಾಗರ: ಪಡವಗೋಡು ಗ್ರಾಮದಲ್ಲಿ ಗ್ರಾಪಂ ಚುನಾವಣೆಯ ಕಾರಣ ಕಾಂಗ್ರೆಸ್ ಕಾರ್ಯಕರ್ತ ಮೋಹನ ಎಂಬವರ ಮೇಲೆ ಬಿಜೆಪಿ ಕಾರ್ಯಕರ್ತರು ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿ ಇಲ್ಲಿಯ ಕಾಂಗ್ರೆಸ್ ಪಕ್ಷದ ಪ್ರಮುಖರು ಸೋಮವಾರ ಡಿವೈಎಸ್ಪಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
ಪಡವಗೋಡು ಗ್ರಾಮದಲ್ಲಿ ಮೋಹನ ಅವರ ಮನೆಗೆ ನುಗ್ಗಿ ಭಾನುವಾರ ಬಿಜೆಪಿ ಕಾರ್ಯಕರ್ತರು ಹಲ್ಲೆ ನಡೆಸಿದ್ದಾರೆ. ಈ ಸಂಬಂಧ ಅವರ ಮೇಲೆ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ಕೂಡ ದಾಖಲಾಗಿದೆ. ಆದರೆ ಇದೇ ಆರೋಪಿಗಳು ಸೋಮವಾರ ಪುನಃ ಮೋಹನ್ ಅವರ ಮೇಲೆ ಹಲ್ಲೆಗೆ ಮುಂದಾಗಿದ್ದಾರೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.
ತಾಲೂಕಿನ ಕೆಲವೆಡೆ ಬಿಜೆಪಿ ಕಾರ್ಯಕರ್ತರು ಗ್ರಾಪಂ ಚುನಾವಣೆಯ ನಂತರ ಗೂಂಡಾ ವರ್ತನೆ ತೋರುತ್ತಿದ್ದಾರೆ. ಹಾಡಹಗಲೇ ಹಲ್ಲೆ ನಡೆಸುವ ಮೂಲಕ ಕಾನೂನು ವ್ಯವಸ್ಥೆ ಬಗ್ಗೆ ಅಗೌರವ ತೋರಿಸಿರುವ ಪುಂಡರ ಕ್ರಮ ಖಂಡನೀಯ. ಪೊಲೀಸ್ ಇಲಾಖೆ ಪದೇಪದೇ ಗೂಂಡಾಗಿರಿ ಮಾಡುತ್ತಿರುವ ಇಂತಹವರನ್ನು ಮಟ್ಟ ಹಾಕಬೇಕು. ತಕ್ಷಣ ಹಲ್ಲೆ ಮಾಡಿದವರನ್ನು ಬಂಧಿಸಿ ಕಾನೂನು ಕ್ರಮ ಜರುಗಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.
ಇದನ್ನೂ ಓದಿ :ಹಳ್ಳಿ ಪ್ರತಿ ಮನೆಗೂ ಶುದ್ಧ ಜಲ
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಿ.ಆರ್. ಜಯಂತ್, ಕಾರ್ಯದರ್ಶಿ ಮಹಾಬಲ ಕೌತಿ, ಯುವ ಕಾಂಗ್ರೆಸ್ ಅಧ್ಯಕ್ಷ ಅಶೋಕ ಬೇಳೂರು, ಜಿಪಂ ಸದಸ್ಯೆ ಅನಿತಾಕುಮಾರಿ, ತಾಪಂ ಅಧ್ಯಕ್ಷ ಮಲ್ಲಿಕಾರ್ಜುನ ಹಕ್ರೆ, ನಗರಸಭೆ ವಿಪಕ್ಷ ನಾಯಕ ಗಣಪತಿ ಮಂಡಗಳಲೆ, ಪ್ರಮುಖರಾದ ಸುಧಾಕರ ಕುಗ್ವೆ, ಆನಂದ ಭೀಮನೇರಿ, ನಾಗರಾಜಸ್ವಾಮಿ, ಕೆ. ಹೊಳೆಯಪ, ಮನೋಜ್ ಕುಗ್ವೆ, ಅಣ್ಣಪ್ಪ ಭೀಮನೇರಿ, ತುಕಾರಾಮ್ ಶಿರವಾಳ ಇನ್ನಿತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಸಿದ್ದರಾಮಯ್ಯ ಬಳಿ ಏನೂ ಇಲ್ಲ ಬರೀ ಬೂಟಾಟಿಕೆ ಮಾಡ್ತಾರೆ: ಡಿ.ವಿ. ಸದಾನಂದ ಗೌಡ
ಖ್ಯಾತ ಕವಿ ಎನ್.ಎಸ್.ಲಕ್ಷ್ಮೀನಾರಾಯಣ ಭಟ್ಟರುಇನ್ನಿಲ್ಲ | Udayavani News Bulletin 6-3-21
ಮುಂಬೈನಲ್ಲೇನೂ ನಡೆದಿಲ್ಲ, ನಮ್ಮ ಕೈ, ಬಾಯಿ ಶುದ್ಧವಿದೆ: ಸಚಿವ ಭೈರತಿ ಬಸವರಾಜ್
ಗ್ರಾಹಕನ ಸೋಗಿನಲ್ಲಿ ಬಂದು ಚಿನ್ನ ಕಳ್ಳತನ; ಸಿನೀಮಿಯ ಶೈಲಿಯಲ್ಲಿ ಬೆನ್ನಟ್ಟಿ ಹಿಡಿದ ಮಾಲೀಕ
ಜೂನಿಯರ್ ಮೇಲೆ ರ್ಯಾಗಿಂಗ್ : ಆರೋಪಿ ವಿದ್ಯಾರ್ಥಿಗಳ ಅಮಾನತು
ಹೊಸ ಸೇರ್ಪಡೆ
ದೆಹಲಿಯಲ್ಲಿ ನೇಣಿಗೆ ಶರಣಾದ ವಿಜಯಪುರ ಜಿಲ್ಲೆಯ ಯೋಧ
ಕ್ರಿಪ್ಟೋಕರೆನ್ಸಿಗಳನ್ನು ಮೌಲ್ಯಮಾಪನ ಮಾಡಲು ಸರ್ಕಾರ ಮುಕ್ತವಾಗಿದೆ : ಅನುರಾಗ್ ಠಾಕೂರ್
ದಕ್ಷಿಣೆ ಸ್ವೀಕಾರ ವಿಚಾರದಲ್ಲಿ ಗಲಾಟೆ: ದಾಸಯ್ಯನ ಮೇಲೆ ಮಚ್ಚಿನಿಂದ ಹಲ್ಲೆ ನಡೆಸಿದ ಪೂಜಾರಿ!
ಶಾಹೀದ್ ಅಫ್ರಿದಿ ಮಗಳ ಜೊತೆ ಪಾಕ್ ಬೌಲರ್ ಶಹೀನ್ ಅಫ್ರಿದಿ ವಿವಾಹ ನಿಶ್ಚಿತಾರ್ಥ
ಮತ ನೀಡದಿದ್ದರೆ ನೀರು, ವಿದ್ಯುತ್ ಏನೂ ಕೊಡಲ್ಲ.. ಮತದಾರರಿಗೆ ಸಚಿವರ ಬೆದರಿಕೆ