ದೇಶದ ಪ್ರಗತಿಗೆ ಸಹಕರಿಸಿ


Team Udayavani, Sep 17, 2018, 5:34 PM IST

shiv-1.jpg

ಶಿವಮೊಗ್ಗ: ಸುಸ್ಥಿರ ಬೆಳವಣಿಗೆಯಿಂದ ದೇಶದ ಅಭಿವೃದ್ಧಿ ಸಾಧ್ಯ. ವಿಜ್ಞಾನಿಗಳು, ಕೈಗಾರಿಕಾ ಉದ್ಯಮಿಗಳು ಹಾಗೂ ಸಂಶೋಧಕರು ಹೊಸ ರೀತಿ ಆಲೋಚನೆಗಳಿಂದ ಯೋಜನೆ ರೂಪಿಸಬೇಕಿದೆ. ದೇಶದ ಸಮಗ್ರ ಅಭಿವೃದ್ಧಿಯಲ್ಲಿ ಮುಖ್ಯ ಪಾತ್ರ ವಹಿಸಬೇಕೆಂದು ಗ್ರಾಸಿಮ್‌ ಇಂಡಸ್ಟ್ರೀಸ್‌ ಅಧ್ಯಕ್ಷ ಅಜಯ್‌ಕುಮಾರ್‌ ಗುಪ್ತ ತಿಳಿಸಿದರು.

ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಭಾಂಗಣದಲ್ಲಿ ಆಯೋಜಿಸಿದ್ದ ಡಾ| ಸರ್‌.ಎಂ. ವಿಶ್ವೇಶ್ವರಯ್ಯ ಜನ್ಮ
ದಿನಾಚರಣೆ ಹಾಗೂ ಎಂಜಿನಿಯರ್ಡೇ  ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಸಂಶೋಧನೆ ಹಾಗೂ ತಂತ್ರಜ್ಞಾನ  ಕ್ಷೇತ್ರದಲ್ಲಿ ಪ್ರಗತಿ ಸಾಧಿಸುವ ಮೂಲಕ ಸದೃಢ ದೇಶ ನಿರ್ಮಾಣ ಮಾಡಬೇಕಿದೆ ಎಂದರು.

 ಎಫ್‌ಪಿಎಐ ರಾಷ್ಟ್ರೀಯ ಅಧ್ಯಕ್ಷ ಎಚ್‌. ಆರ್‌. ಉಮೇಶ್‌ ಆರಾಧ್ಯ ಮಾತನಾಡಿ, ದೇಶದ ಯುವಜನತೆ ಶಕ್ತಿಯನ್ನು
ಸಮರ್ಪಕವಾಗಿ ಬಳಸಿಕೊಳ್ಳುವಲ್ಲಿ ವಿಫಲವಾಗಿರುವುದು ಬೇಸರದ ಸಂಗತಿ. ಮಾಜಿ ರಾಷ್ಟ್ರಪತಿ ಅಬ್ದುಲ್‌ ಕಲಾಂ ಕನಸಿನಂತೆ ಸದೃಢ ರಾಷ್ಟ್ರ ನಿರ್ಮಾಣ ಆಗಬೇಕಾದರೆ ಯುವಜನತೆಯ ಶಕ್ತಿ ಸದ್ಬಳಕೆಯಾಗಬೇಕು ಎಂದರು.

ಜೆಎನ್‌ಸಿಸಿಇ ಪ್ರಾಚಾರ್ಯ ಡಾ| ಎನ್‌. ಆರ್‌.ಮಹಾದೇವ ಸ್ವಾಮಿ ಮಾತನಾಡಿ, ಡಿಜಿಟಲ್‌ ಇಂಡಿಯಾ ನಿರ್ಮಾಣ
ಮಾಡುವಲ್ಲಿ ಎಂಜಿನಿಯರ್ ಕೊಡುಗೆ ಅಪಾರ. ದೇಶದಲ್ಲಿ ಡಿಜಿಟಲ್‌ ಕ್ರಾಂತಿ ಆಗುವ ಮೂಲಕ ಮಹತ್ತರ ಬದಲಾವಣೆ ಕಾಡುತ್ತಿದೆ. ಬ್ಯಾಂಕ್‌, ಶಿಕ್ಷಣ, ಹಾಸ್ಪಿಟಾಲಿಟಿ, ಇ- ವೈದ್ಯಕೀಯ ಸೇವೆ ಸೇರಿ ತಂತ್ರಜ್ಞಾನದಿಂದ ಕೂಡಿದ ಹೊಸ ಭಾರತದ ನಿರ್ಮಾಣ ಆಗುತ್ತಿದೆ. ನವ ದೇಶ ರೂಪಿಸುವಲ್ಲಿ ತಂತ್ರಜ್ಞರ ಪಾತ್ರ ಬಹಳ ಮುಖ್ಯ. ಹೊಸ ರೀತಿ ಆಲೋಚನೆಗಳು ಒಂದುಗೂಡಿದಾಗ ಅದ್ಭುತ ದೇಶ ಕಟ್ಟಲು ಸಾಧ್ಯ ಎಂದರು.

 ವಿಶ್ವೇಶ್ವರಯ್ಯ ಅವರದ್ದು ಶಿಸ್ತಿಗೆ ಹೆಸರಾದ ವ್ಯಕ್ತಿತ್ವ. ಅವರು ಜೀವನದಲ್ಲಿ ಪಾಲಿಸಿದ ತತ್ವ ಹಾಗೂ ಆದರ್ಶಗಳು ಎಲ್ಲರಿಗೂ ಮಾದರಿ. ಅವರ ಆಲೋಚನೆ ಶೈಲಿ ಎಲ್ಲರಿಗೂ ಅನುಕರಣೀಯ ಎಂದರು. ಜಿಲ್ಲಾ ವಾಣಿಜ್ಯ ಹಾಗೂ ಕೈಗಾರಿಕಾ ಸಂಘದ ಅಧ್ಯಕ್ಷ ಡಿ.ಎಂ. ಶಂಕರಪ್ಪ ಅಧ್ಯಕ್ಷತೆ ವಹಿಸಿದ್ದರು. ಕನ್ನಡ ಪ್ರಾಧ್ಯಾಪಕ ಡಾ| ಎಚ್‌.ಟಿ. ಕೃಷ್ಣಮೂರ್ತಿ ಉಪನ್ಯಾಸ ನೀಡಿದರು. ನಾನಾ ಸ್ಪರ್ಧೆ ವಿಜೇತ ಮಕ್ಕಳಿಗೆ ಬಹುಮಾನ ವಿತರಿಸಲಾಯಿತು.

ಮಾಚೇನಹಳ್ಳಿಯ ಧನುಷ್‌ ಕಮರ್ಷಿಯಲ್‌ ಕಾರ್ಪೊರೇಷನ್‌ ಅಧ್ಯಕ್ಷೆ ಎಚ್‌.ವಿ. ನಂದಾಗೆ ಮಹಿಳಾ ಉದ್ಯಮಿ ವಿಶೇಷ ಪುರಸ್ಕಾರ ನೀಡಲಾಯಿತು. ಈಶ್ವರ್‌ ಸ್ಟೀಲ್‌ಟೆಕ್‌ ಪ್ರೈವೇಟ್‌ ಲಿಮಿಟೆಡ್‌ನ‌ ಕಾರ್ಮಿಕ ಎಂ. ದಿನೇಶ್‌, ಸಿಂಧು ಇಂಡಸ್ಟ್ರಿಸ್‌
ನ ಡಿ.ಎನ್‌. ಲೋಕೇಶ್‌ ಕುಮಾರ್‌ ಅವರನ್ನು ಸನ್ಮಾನಿಸಲಾಯಿತು. ಸಂಘದ ಮಾಜಿ ಅಧ್ಯಕ್ಷ ಡಿ.ಎಸ್‌. ಅರುಣ್‌, ಉಪಾಧ್ಯಕ್ಷ ಜೆ.ಆರ್‌. ವಾಸುದೇವ, ಎಂ. ರಾಜು, ಬಿ.ಆರ್‌. ಸಂತೋಷ್‌, ಬಿ. ಗೋಪಿನಾಥ್‌, ಪಿ. ರುದ್ರೇಶ್‌, ಡಿ.ಎಸ್‌. ನಟರಾಜ್‌, ಬಿ. ವಿಜಯ್‌ಕುಮಾರ್‌ ಇತರರಿದ್ದರು.

ಟಾಪ್ ನ್ಯೂಸ್

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Mollywood: ಸೂಪರ್‌ ಹಿಟ್ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿ ರಿಲೀಸ್‌ ಗೆ ಡೇಟ್‌ ಫಿಕ್ಸ್

Mollywood: ಸೂಪರ್‌ ಹಿಟ್ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿ ರಿಲೀಸ್‌ ಗೆ ಡೇಟ್‌ ಫಿಕ್ಸ್

Mamata Banerjee: ಹೆಲಿಕಾಪ್ಟರ್ ಹತ್ತುವಾಗ ಬಿದ್ದು ಮತ್ತೆ ಗಾಯ ಮಾಡಿಕೊಂಡ ಮಮತಾ ಬ್ಯಾನರ್ಜಿ

Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ

siddaramaiah

Kalaburagi; ಪ್ರಧಾನಿ ಮೋದಿ ಸುಳ್ಳು ಮಾರಾಟ ಮಾಡುವ ವ್ಯಾಪಾರಿ: ಸಿಎಂ ಸಿದ್ದರಾಮಯ್ಯ

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

13-bk-hariprasad

ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್

Hubli; ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡ ಶಕ್ತಿ: ದಿಂಗಾಲೇಶ್ವರ ಸ್ವಾಮೀಜಿ

ಪ್ರಹ್ಲಾದ ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡವರು: ದಿಂಗಾಲೇಶ್ವರ ಸ್ವಾಮೀಜಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11-

Holehonnur: ರಾಜ್ಯದಲ್ಲಿ ಹೆಣ್ಣು ಮಕ್ಕಳಿಗೆ ಸುರಕ್ಷತೆಯಿಲ್ಲ: ಬಿ.ವೈ. ವಿಜಯೇಂದ್ರ

b y vijayendra

LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ‌ ವ್ಯಂಗ್ಯ

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ

BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

18-

UV Fusion: ತೇರು ಬೀದಿಗೆ ಬಂದಿದೆ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

Moksha Kushal

Moksha Kushal; ಕೊಡಗಿನ ಬೆಡಗಿಯ ಕಣ್ತುಂಬ ಕನಸು

Mollywood: ಸೂಪರ್‌ ಹಿಟ್ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿ ರಿಲೀಸ್‌ ಗೆ ಡೇಟ್‌ ಫಿಕ್ಸ್

Mollywood: ಸೂಪರ್‌ ಹಿಟ್ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿ ರಿಲೀಸ್‌ ಗೆ ಡೇಟ್‌ ಫಿಕ್ಸ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.