ವಿನ್ಯಾಸಕಾರರು-ನೇಕಾರರ ಮಧ್ಯೆ ಸಮನ್ವಯ ಅಗತ್ಯ  

ಚರಕ ಉತ್ಸವದಲ್ಲಿ ಕೊಡು- ಕೊಳ್ಳುವವರ ಸಮಾವೇಶಕ್ಕೆ ಚಾಲನೆ ನೀಡಿ ಪವಿತ್ರ ಮುದ್ದಯ್ಯ ಪ್ರತಿಪಾದನೆ

Team Udayavani, Mar 28, 2022, 5:13 PM IST

sagara

ಸಾಗರ: ಕೈಮಗ್ಗ ಸೇರಿದಂತೆ ಎಲ್ಲ ಕರಕುಶಲಕರ್ಮಿಗಳು ಮಾರುಕಟ್ಟೆಯ ಸಮಸ್ಯೆ ಅನುಭವಿಸುತ್ತಿದ್ದಾರೆ. ಕೋವಿಡ್‌ ಕಾರಣದಿಂದ ಸವಾಲುಗಳು ಹೆಚ್ಚಾಗಿವೆ. ಗ್ರಾಮೀಣ ಕೈಗಾರಿಕೆಯಾಗಿರುವ ಕೈಮಗ್ಗ ನೇಕಾರಿಕೆ ಉತ್ಪನ್ನಗಳ ಮಾರುಕಟ್ಟೆ ವಿಸ್ತರಣೆಯಾ ಗಬೇಕಾದರೆ ಈ ಕ್ಷೇತ್ರದಲ್ಲಿಯ ವಿನ್ಯಾಸಕಾರರು ಹಾಗೂ ನೇಕಾರರು ಒಟ್ಟಿಗೆ ಸೇರಿ ಕೆಲಸ ಮಾಡುವ ಸಮನ್ವಯದ ಅಗತ್ಯವಿದೆ ಎಂದು ಬೆಂಗಳೂರಿನ ವಸ್ತ್ರ ವಿನ್ಯಾಸಕರಾದ ಪವಿತ್ರ ಮುದ್ದಯ್ಯ ಪ್ರತಿಪಾದಿಸಿದರು.

ತಾಲೂಕಿನ ಹೊನ್ನೇಸರದ ಶ್ರಮಜೀವಿ ಆಶ್ರಯದಲ್ಲಿ ಭೀಮನಕೋಣೆ ಕವಿಕಾವ್ಯ ಟ್ರಸ್ಟ್‌ ಹಾಗೂ ಬೆಂಗಳೂರಿನ ಕನ್ನಡ ಮತ್ತು ಸಂಸ್ಕೃತಿ ನಿರ್ದೇಶನಾಲಯದ ಸಹಯೋಗದೊಂದಿಗೆ ನಡೆದ ಎರಡು ದಿನಗಳ ಚರಕ ಉತ್ಸವ ಕಾರ್ಯಕ್ರಮದ ಅಂಗವಾಗಿ ಹಮ್ಮಿಕೊಳ್ಳಲಾಗಿದ್ದ ಕೊಡು- ಕೊಳ್ಳುವವರ ಸಮಾವೇಶಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಕೈಮಗ್ಗ ಕ್ಷೇತ್ರದಲ್ಲಿಯ ನಮ್ಮ ನಡುವಿನ ಬಹುತೇಕ ವಿನ್ಯಾಸಕಾರರು ಸಾಂಪ್ರದಾಯಿಕ ನೇಕಾರರಿಂದಲೇ ವಿನ್ಯಾಸದ ವಿವಿಧ ಬಗೆಗಳನ್ನು ಕಲಿತಿರುತ್ತಾರೆ. ವಿನ್ಯಾಸ ಎಂಬುದು ಕೇವಲ ನಮ್ಮ ತೃಪ್ತಿಗೆ ಎನ್ನುವಂತಾಗಬಾರದು. ಬದಲಿಗೆ ಆಯಾ ಕಾಲದ ಮಾರುಕಟ್ಟೆಯ ಅಗತ್ಯಗಳನ್ನು ಪೂರೈಸುವ ಜೊತೆಗೆ ಆರ್ಥಿಕ ಸುಸ್ಥಿರತೆ ಕಾಪಾಡಿಕೊಳ್ಳುವ ಮಾದರಿಯನ್ನು ಅನುಸರಿಸಬೇಕು ಎಂದರು.

ಕೋವಿಡ್‌ನಿಂದಾಗಿ ನೇಕಾರಿಕೆ ಉದ್ಯಮ ತೀವ್ರ ಸಂಕಷ್ಟಕ್ಕೆ ಸಿಲುಕಿದೆ. ಅದರಲ್ಲೂ ನೇಕಾರರ ಬದುಕು ದುಸ್ತರವಾಗಿದೆ. ಇಂತಹ ಸಂದರ್ಭದಲ್ಲಿ ಸರ್ಕಾರ ಹೊಸ ಯೋಜನೆಯ ಮೂಲಕ ಅವರ ನೆರವಿಗೆ ನಿಲ್ಲಬೇಕಿತ್ತು. ಆದರೆ ಕೋವಿಡ್‌ ಪರಿಹಾರ ರೂಪದಲ್ಲಿ ಒಬ್ಬ ನೇಕಾರನಿಗೆ ವರ್ಷಕ್ಕೆ ಕೇವಲ 2 ಸಾವಿರ ರೂ. ಪರಿಹಾರ ನೀಡಿರುವುದು ಸರಿಯಲ್ಲ ಎಂದು ಅವರು ಅಭಿಪ್ರಾಯಪಟ್ಟರು.

ಸಾಂಪ್ರದಾಯಿಕ ವಿಧಾನದಲ್ಲಿ ವಸ್ತುಗಳನ್ನು ತಯಾರಿಸುವ ಗ್ರಾಮೀಣ ಶ್ರಮಿಕರನ್ನು ತರಬೇತುಗೊಳಿಸುವ ಕಾರ್ಯ ಆಗಬೇಕು. ಆಧುನಿಕ ತಾಂತ್ರಿಕ ಮಾಹಿತಿ ಇರುವವರು ಗ್ರಾಮೀಣ ಕರಕುಶಲಕರ್ಮಿಗಳ ಜತೆ ಬೆರೆತು ಕೆಲಸ ಮಾಡಬೇಕು. ಚರಕ ಅಂತಹ ಅವಕಾಶ ಸೃಷ್ಟಿಸುತ್ತಿದೆ. ಕೊಡು- ಕೊಳ್ಳುವವರ ಸಮಾವೇಶದ ಮೂಲಕ ಅದು ಸಾಧ್ಯವಾಗುತ್ತದೆ ಎಂದರು.

ವಿಜಯಪುರದ ಬಂಜಾರ ಕಸೂತಿ ಒಕ್ಕೂಟದ ನಿರ್ದೇಶಕಿ ಆಶಾ ಪಾಟೀಲ್‌ ಮಾತನಾಡಿ, ಕೈಮಗ್ಗ ನಮ್ಮ ನಡುವಿನ ಪ್ರಮುಖ ಕರಕುಶಲ ಕಲೆ ಆಗಿದೆ. ಸಾಂಪ್ರದಾಯಿಕತೆಯನ್ನು ಉಳಿಸಿಕೊಂಡಿರುವ ಅಪ್ಪಟ ದೇಸಿತನದ ಈ ಕಲೆಗೆ ಅಗತ್ಯವಿರುವಷ್ಟು ಆಧುನಿಕತೆಯ ಸ್ಪರ್ಶ ನೀಡುವ ಮೂಲಕ ಮಾರುಕಟ್ಟೆಯಲ್ಲಿ ಎದುರಾಗುವ ಸವಾಲನ್ನು ಸಮರ್ಥವಾಗಿ ಎದುರಿಸಬೇಕಿದೆ ಎಂದರು.

ನಮ್ಮ ಯೋಚನಾ ಲಹರಿಯಲ್ಲಿ ಆಧುನಿಕತೆ ಇರಬೇಕು. ಆದರೆ ಕೇವಲ ಉಡುಗೆ ತೊಡುಗೆ, ಭಾಷೆ, ಆಹಾರ ಸೇವನೆಯಲ್ಲಿ ಆಧುನಿಕತೆಯನ್ನು ಅನುಸರಿಸಿದರೆ ಸಾಲದು. ಇಂತಹ ಸಂಸ್ಕೃತಿ ನಮ್ಮ ಮಾನವೀಯ ಸಂಬಂಧಗಳನ್ನು ದೂರ ಮಾಡುತ್ತದೆ. ಕೈಮಗ್ಗ ನೇಕಾರಿಕೆಯಂತಹ ಈ ನೆಲದ ಕಲೆಗೆ ಸಂಬಂಧಗಳನ್ನು ಒಗ್ಗೂಡಿಸುವ ಶಕ್ತಿ ಇದೆ ಎಂದು ಹೇಳಿದರು.

ಸ್ವಾತಂತ್ರ್ಯ ಹೋರಾಟಗಾರ ಹಾಗೂ ಹಿರಿಯ ನೇಕಾರರಾದ ಸಂಗಪ್ಪ ಮಂಟೆ ಮಾತನಾಡಿ, ನೇಕಾರರು ಉಳಿದರೆ ಮಾತ್ರ ಕೈಮಗ್ಗ ಕ್ಷೇತ್ರ ಜೀವಂತವಾಗಿರಲು ಸಾಧ್ಯ. ಒಂದು ಮಗು ಮೃತಪಟ್ಟರೆ ಮತ್ತೂಂದು ಮಗು ಪಡೆಯಬಹುದು. ಆದರೆ ತಾಯಿಯೇ ಮೃತಪಟ್ಟರೆ ಮಗುವನ್ನು ಪಡೆಯುವುದು ಹೇಗೆ ಎಂದು ಪ್ರಶ್ನಿಸಿದರು. ಬಂಜಾರ ಕಸೂತಿ ಒಕ್ಕೂಟದ ಸೀಮಾ, ತುಲಾ ಸಂಸ್ಥೆಯ ಸುಷ್ಮಿತಾ, ಗುಜರಾತ್‌ನ ವಾರ್ಧಾದ ಮಗನ್‌ ಸಂಗ್ರಹಾಲಯದ ಸೋನು ತಮ್ಮ ಅನುಭವಗಳನ್ನು ಹಂಚಿಕೊಂಡರು.

ವಿಧಾನ ಪರಿಷತ್ತಿನ ಮಾಜಿ ಸದಸ್ಯೆ ಪ್ರಫುಲ್ಲಾ ಮಧುಕರ್‌, ಚರಕ ಸಂಸ್ಥೆಯ ಅಧ್ಯಕ್ಷೆ ಗೌರಮ್ಮ, ಕಾರ್ಯದರ್ಶಿ ರಮೇಶ್‌, ಇಂಧುಕುಮಾರ್‌, ಮಹಾಲಕ್ಷ್ಮಿ, ಪ್ರಸನ್ನ ಇದ್ದರು. ಪದ್ಮಶ್ರೀ ನಿರೂಪಿಸಿದರು. ಚರಕ ಸಂಸ್ಥೆಯ ಉಡುಪುಗಳನ್ನು ಧರಿಸಿದವರಿಂದ ಆಕರ್ಷಕ ಪ್ರದರ್ಶನ ನಡೆಯಿತು. ನಿರಾಮಯ ಕಲಾತಂಡದ ರಾಮಚಂದ್ರ ಹೆಗಡೆ ಕೊಂಡದಕುಳಿ, ರಾಮಕೃಷ್ಣ ಹಿಲ್ಲೂರು, ಪ್ರಸನ್ನ ಶೆಟ್ಟಿಗಾರ್‌, ಅಶ್ವಿ‌ನಿ ಮುಂತಾದ ಕಲಾವಿದರಿಂದ ‘ ದಕ್ಷ ಯಜ್ಞ’ ಯಕ್ಷಗಾನ ಪ್ರದರ್ಶನ ನಡೆಯಿತು.

ಟಾಪ್ ನ್ಯೂಸ್

Lok Sabha Polls ರಬಕವಿ-ಬನಹಟ್ಟಿ: ವಿಶೇಷ ಮತಗಟ್ಟೆಯ ರೂವಾರಿಗಳು ಚಿತ್ರಕಲಾ ಶಿಕ್ಷಕರು

Lok Sabha Polls ರಬಕವಿ-ಬನಹಟ್ಟಿ: ವಿಶೇಷ ಮತಗಟ್ಟೆಯ ರೂವಾರಿಗಳು ಚಿತ್ರಕಲಾ ಶಿಕ್ಷಕರು

India’s first-ever ‘hybrid pitch’ was unveiled at the HPCA stadium

HPCA; ಧರ್ಮಶಾಲಾದಲ್ಲಿ ಭಾರತದ ಮೊದಲ ಹೈಬ್ರಿಡ್ ಪಿಚ್ ಅನಾವರಣ; ಏನಿದು ಹೊಸ ಆವಿಷ್ಕಾರ?

Delhi police Station: ಪೊಲೀಸ್‌ ಠಾಣೆ ಬಾತ್‌ ರೂಂ ಕಿಟಕಿ ಹಾರಿ ಕೊಲೆ ಆರೋಪಿ ಪರಾರಿ!

Delhi police Station: ಪೊಲೀಸ್‌ ಠಾಣೆ ಬಾತ್‌ ರೂಂ ಕಿಟಕಿ ಹಾರಿ ಕೊಲೆ ಆರೋಪಿ ಪರಾರಿ!

1-qweqwqwe

Kerala ಕರಾವಳಿಯಲ್ಲಿ 6 ಮೀನುಗಾರರ ಸಹಿತ ಇರಾನ್ ಹಡಗು ಕೋಸ್ಟ್ ಗಾರ್ಡ್ ವಶಕ್ಕೆ

Bantwala; ಬಾವಿಗೆ ಬಿದ್ದ ನಾಯಿಯನ್ನು ರಕ್ಷಿಸಿದ ಅಗ್ನಿಶಾಮಕ ತಂಡ

Bantwala; ಬಾವಿಗೆ ಬಿದ್ದ ನಾಯಿಯನ್ನು ರಕ್ಷಿಸಿದ ಅಗ್ನಿಶಾಮಕ ತಂಡ

foeticide

Mandya: ಮತ್ತೆ ಹೆಣ್ಣುಭ್ರೂಣ ಹತ್ಯೆ ಜಾಲ ಪತ್ತೆ; ನಾಲ್ವರ ಬಂಧನ

Kanniyakumari: ಮದುವೆಗೆಂದು ಆಗಮಿಸಿ ಸಮುದ್ರ ಪಾಲಾದ ಐವರು ವೈದ್ಯಕೀಯ ವಿದ್ಯಾರ್ಥಿಗಳು

Kanniyakumari: ಮದುವೆಗೆಂದು ಆಗಮಿಸಿ ಸಮುದ್ರ ಪಾಲಾದ ಐವರು ವೈದ್ಯಕೀಯ ವಿದ್ಯಾರ್ಥಿಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BY Raghavendra: ಕಾಡಾನೆ ದಾಳಿಗೆ ಬಲಿಯಾದ ರೈತನ ಮನೆಗೆ ಸಂಸದ ಬಿ.ವೈ.ರಾಘವೇಂದ್ರ ಭೇಟಿ

BY Raghavendra: ಕಾಡಾನೆ ದಾಳಿಗೆ ಬಲಿಯಾದ ರೈತನ ಮನೆಗೆ ಸಂಸದ ಬಿ.ವೈ.ರಾಘವೇಂದ್ರ ಭೇಟಿ

JDS ಜತೆ ಮೈತ್ರಿ ಮುರಿದುಕೊಳ್ಳುವುದಿಲ್ಲ: ಯಡಿಯೂರಪ್ಪ

JDS ಜತೆ ಮೈತ್ರಿ ಮುರಿದುಕೊಳ್ಳುವುದಿಲ್ಲ: ಯಡಿಯೂರಪ್ಪ

Prajwal Revanna ಪರ ನಿಲ್ಲುವುದಿಲ್ಲ: ವಿಜಯೇಂದ್ರ

Prajwal Revanna ಪರ ನಿಲ್ಲುವುದಿಲ್ಲ: ವಿಜಯೇಂದ್ರ

ದೇವೇಗೌಡರಿಗೆ ನೋವಾಗಿದ್ದರೆ ಏನೂ ಮಾಡಲಾಗದು: ಚೆಲುವರಾಯಸ್ವಾಮಿ

ದೇವೇಗೌಡರಿಗೆ ನೋವಾಗಿದ್ದರೆ ಏನೂ ಮಾಡಲಾಗದು: ಚೆಲುವರಾಯಸ್ವಾಮಿ

B.Y. Raghavendra: ಕಮಲದ ಗುರುತಿಗೆ ಮತ ನೀಡಿ; ಬಿವೈಆರ್‌

B.Y. Raghavendra: ಕಮಲದ ಗುರುತಿಗೆ ಮತ ನೀಡಿ; ಬಿವೈಆರ್‌

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

1-wwwewqwq

Koratagere: ಸಾಲ ಬಾಧೆ ತಾಳಲಾರದೆ ರೈತ ಆತ್ಮಹತ್ಯೆಗೆ ಶರಣು

Lok Sabha Polls ರಬಕವಿ-ಬನಹಟ್ಟಿ: ವಿಶೇಷ ಮತಗಟ್ಟೆಯ ರೂವಾರಿಗಳು ಚಿತ್ರಕಲಾ ಶಿಕ್ಷಕರು

Lok Sabha Polls ರಬಕವಿ-ಬನಹಟ್ಟಿ: ವಿಶೇಷ ಮತಗಟ್ಟೆಯ ರೂವಾರಿಗಳು ಚಿತ್ರಕಲಾ ಶಿಕ್ಷಕರು

1—wewqeqw

Maharashtra ;120 ಅಡಿ ಜಲಪಾತದಿಂದ ಹಾರಿದ ಯುವಕ ಮೃತ್ಯು: ವಿಡಿಯೋ ವೈರಲ್

India’s first-ever ‘hybrid pitch’ was unveiled at the HPCA stadium

HPCA; ಧರ್ಮಶಾಲಾದಲ್ಲಿ ಭಾರತದ ಮೊದಲ ಹೈಬ್ರಿಡ್ ಪಿಚ್ ಅನಾವರಣ; ಏನಿದು ಹೊಸ ಆವಿಷ್ಕಾರ?

65 ವರ್ಷದಿಂದ ದೇಶಕ್ಕೆ ಚೊಂಬು ಹಿಡಿಸಿದ್ದೆ ಕಾಂಗ್ರೆಸ್‌ ಸಾಧನೆ: ಹರಿಪ್ರಕಾಶ ಕೋಣೆಮನೆ

65 ವರ್ಷದಿಂದ ದೇಶಕ್ಕೆ ಚೊಂಬು ಹಿಡಿಸಿದ್ದೆ ಕಾಂಗ್ರೆಸ್‌ ಸಾಧನೆ: ಹರಿಪ್ರಕಾಶ ಕೋಣೆಮನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.