ನರೇಗಾ ಕಾಮಗಾರಿಯಲ್ಲಿ ಭ್ರಷ್ಟಾಚಾರ: ಮೇಘರಾಜ್
Team Udayavani, Sep 19, 2020, 8:24 PM IST
ಸಾಂದರ್ಭಿಕ ಚಿತ್ರ
ಶಿವಮೊಗ್ಗ: ಹೊಸನಗರ ತಾಲೂಕು ಹೆದ್ದಾರಿಪುರ ಗ್ರಾಪಂ ವ್ಯಾಪ್ತಿಯ ಕಲ್ಲೂರು ಗ್ರಾಮದ ಕೋಡಿಹಳ್ಳದ ದಂಡೆ ಬಲಪಡಿಸುವ ನರೇಗಾ ಯೋಜನೆಯಡಿಯ 5 ಲಕ್ಷ ರೂ. ವೆಚ್ಚದ ಕಾಮಗಾರಿಯಲ್ಲಿ ಭ್ರಷ್ಟಾಚಾರ ನಡೆದಿದೆ ಎಂದು ಶಾಂತವೇರಿ ಗೋಪಾಲಗೌಡ ಸಮಾಜವಾದಿ ಅಧ್ಯಯನ ಕೇಂದ್ರ ಟ್ರಸ್ಟ್ನ ವ್ಯವಸ್ಥಾಪಕ ಟ್ರಸ್ಟಿ ಕಲ್ಲೂರು ಮೇಘರಾಜ್ ಆರೋಪಿಸಿದರು.
ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳಪೆ ಕಾಮಗಾರಿ ಬಗ್ಗೆ ಉನ್ನತ ಮಟ್ಟದ ತನಿಖೆ ನಡೆಸಿ ಇಂಜಿನಿಯರ್ ವಿನಯ್ ಕುಮಾರ್ ಅವರನ್ನು ಅಮಾನತುಗೊಳಿಸಲು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಪ್ರಧಾನ ಕಾರ್ಯದರ್ಶಿಗೆ ಆದೇಶಿಸಬೇಕೆಂದು ಸಚಿವ ಕೆ.ಎಸ್. ಈಶ್ವರಪ್ಪ ಅವರನ್ನು ಒತ್ತಾಯಿಸಿದರು.
5 ಲಕ್ಷ ರೂ. ವೆಚ್ಚದ ಕಾಮಗಾರಿಯಲ್ಲಿ ಕೇವಲ 1 ಲಕ್ಷ ರೂ.ವೆಚ್ಚ ಮಾಡಿ ಹಣ ಪಾವತಿಸಲಾಗಿದೆ. ಕಾಮಗಾರಿಯಲ್ಲಿ ಯಂತ್ರಗಳನ್ನು ಬಳಸಲಾಗಿದೆ. ಸುಳ್ಳು ಲೆಕ್ಕ ನೀಡಲಾಗಿದೆ. ಆದ್ದರಿಂದ ಇಂಜಿನಿಯರ್ರನ್ನು ಅಮಾನತುಗೊಳಿಸಬೇಕೆಂದು ಒತ್ತಾಯಿಸಿದರು. ಜಿಪಂ ವತಿಯಿಂದ ನರೇಗಾ ಯೋಜನೆಯಡಿ ನಡೆದ ಕಾಮಗಾರಿಗಳಲ್ಲಿ ಜಿಪಂನ ಸಿಇಒ ಎಂ.ಎಲ್. ವೈಶಾಲಿ ಅವರ ಕುಮ್ಮಕ್ಕಿನಿಂದ ಭಾರೀ ಭ್ರಷ್ಟಾಚಾರವಾಗಿದ್ದು, ಇವರ ಅಧಿಕಾರಾವಧಿಯಲ್ಲಿ ಜಿಲ್ಲೆಯಲ್ಲಿ ನಡೆದ ಎಲ್ಲ ನರೆಗಾ ಯೋಜನೆಯ ಕಾಮಗಾರಿಗಳ ಬಗ್ಗೆ ಉನ್ನತ ಮಟ್ಟದ ತಂಡದಿಂದ ತನಿಖೆ ನಡೆಸಬೇಕು ಎಂದು ಒತ್ತಾಯಿಸಿದರು. ಪತ್ರಿಕಾಗೋಷ್ಠಿಯಲ್ಲಿ ಎಚ್.ಎಂ. ಸಂಗಯ್ಯ, ಎಲ್. ಆದಿಶೇಷ, ಸಂಕ್ರಾನಾಯ್ಕ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್
LokSabha Election; ಕಾಂಗ್ರೆಸ್ ಪರ ನಟ ದರ್ಶನ್ ಪ್ರಚಾರಕ್ಕೆ ಕುಮಾರಸ್ವಾಮಿ ಪ್ರತಿಕ್ರಿಯೆ
Shimoga; ವಿರೋಧ ಪಕ್ಷದವರಿಗೆ ಅಪಪ್ರಚಾರವೇ ಕೊನೆಯ ಅಸ್ತ್ರ: ಬಿವೈ ರಾಘವೇಂದ್ರ
Shimoga; ಕೆ.ಎಸ್. ಈಶ್ವರಪ್ಪರನ್ನು ಭೀಷ್ಮರಿಗೆ ಹೋಲಿಸಿದ ಋಷಿಕುಮಾರ ಸ್ವಾಮೀಜಿ
Bhadravathi: ಲಾರಿ ಡಿಕ್ಕಿ, ರೈಲು ಹಳಿಗಳು ಏರುಪೇರು; ಎರಡೂವರೆ ತಾಸು ಪ್ರಯಾಣಿಕರು ಹೈರಾಣು