ಒಂದೇ ದಿನ 22 ಮಂದಿಗೆ ಕೋವಿಡ್


Team Udayavani, Jul 1, 2020, 9:45 AM IST

ಒಂದೇ ದಿನ 22 ಮಂದಿಗೆ ಕೋವಿಡ್

ಶಿವಮೊಗ್ಗ: ಜಿಲ್ಲೆಯಲ್ಲಿ ಮಂಗಳವಾರ 22 ಜನರಿಗೆ ಕೋವಿಡ್ ಸೋಂಕು ತಗುಲಿದೆ. ಜಿಲ್ಲೆಯಲ್ಲಿ ಈವರೆಗೆ 173 ಪ್ರಕರಣಗಳು ಪತ್ತೆಯಾಗಿವೆ. ಆ ಪೈಕಿ 109 ಮಂದಿ ಗುಣಮುಖರಾಗಿದ್ದು, 62 ಸಕ್ರಿಯ ಪ್ರಕರಣಗಳಿವೆ.

ಭದ್ರಾವತಿಯಲ್ಲಿ 7 ಮಂದಿಗೆ ಪಾಸಿಟಿವ್‌ ವರದಿ ಬಂದಿದ್ದು, ಶಿಕಾರಿಪುರದಲ್ಲಿ 8, ಹೊಸನಗರ 1, ಸೊರಬ ಹಾಗೂ ತೀರ್ಥಹಳ್ಳಿಯಲ್ಲಿ ತಲಾ ಇಬ್ಬರಿಗೆ ಸೋಂಕು ತಗುಲಿದೆ. ಶಿಕಾರಿಪುರದ ಖವಾಸಪುರ ವೃದ್ಧೆಯ ಸಾವು ಜಿಲ್ಲಾಡಳಿತಕ್ಕೆ ತಲೆನೋವಾಗಿ ಪರಿಣಮಿಸಿದ್ದು, ಅಲ್ಲಿ ಸೋಂಕು ಇನ್ನೂ ಹೆಚ್ಚುವ ಸಾಧ್ಯತೆ ಇದೆ ಎನ್ನಲಾಗಿದೆ.

ಶಿವಮೊಗ್ಗ ನಗರದಲ್ಲಿ ಇಬ್ಬರು ವೈದ್ಯರು ಸೇರಿದಂತೆ ತಾಲೂಕಿನಲ್ಲಿ 8 ಮಂದಿಗೆ ಸೋಂಕು ತಗುಲಿದೆ. ಶಿವಮೊಗ್ಗದ ಗಾಂ ನಗರದ “ಎ’ ಬ್ಲಾಕ್‌ 6ನೇ ತಿರುವು ಹಾಗೂ 1ನೇ ಅಡ್ಡರಸ್ತೆಯಲ್ಲಿ 2 ಹಾಗೂ ಭದ್ರಾವತಿಯ ಗಾಂಧಿ ನಗರ ಸೇರಿದಂತೆ ಹಲವೆಡೆ ಕೋವಿಡ್ ಸೋಂಕಿತರು ವಾಸವಿದ್ದ ಪ್ರದೇಶಗಳನ್ನು ಸೀಲ್‌ಡೌನ್‌ ಮಾಡಲಾಗಿದೆ. ಶಿವಮೊಗ್ಗ ಮಹಾನಗರ ಪಾಲಿಕೆಯಲ್ಲಿ ಸೋಂಕಿತ ವ್ಯಕ್ತಿಯೊಬ್ಬ ಬಂದು ಹೋಗಿದ್ದ ಹಿನ್ನೆಲೆಯಲ್ಲಿ ಪಾಲಿಕೆಯ ಅನೇಕ ವಿಭಾಗಗಳ ಕಚೇರಿಯನ್ನು ಬಂದ್‌ ಮಾಡಿ ಸ್ಯಾನಿಟೈಸ್‌ ಮಾಡಲಾಗಿದೆ. ಪಾಲಿಕೆಗೆ ಭೇಟಿ ನೀಡುವವರ ತಪಾಸಣೆ ನಡೆಸಿ ಒಳಬಿಡಲಾಗಿದೆ.

ಭದ್ರಾವತಿಯ ಗಾಂಧಿ ನಗರದ ಒಂದೇ ಕುಟುಂಬದ ನಾಲ್ವರು, ಹೊಸಮನೆ ಮುಖ್ಯ ರಸ್ತೆ ಎನ್‌ಎಂಸಿ ಎಡಭಾಗದ ಭೋವಿ ಕಾಲನಿಯಲ್ಲಿ ಒಬ್ಬರು ಹಾಗೂ ಹೊಸಮನೆ ಸುಭಾಷ್‌ನಗರದಲ್ಲಿ ಇಬ್ಬರು ವ್ಯಕ್ತಿಗಳು ಸೋಂಕಿಗೆ ತುತ್ತಾದವರಾಗಿದ್ದಾರೆ. ಗಾಂಧಿ ನಗರದ ನಾಲ್ವರಲ್ಲಿ 56 ವರ್ಷದ ಪುರುಷ, 44 ವರ್ಷದ ಮಹಿಳೆ, 26 ವರ್ಷದ ಮಹಿಳೆ ಹಾಗೂ 6 ವರ್ಷದ ಮಗು ಹಾಗೂ ಬೋವಿ ಕಾಲನಿಯ 42 ವರ್ಷದ ಮಹಿಳೆ ಇಲ್ಲಿನ ಹಳೇನಗರದ ಉಪ್ಪಾರಬೀದಿಯ ಸೋಂಕಿತ ಬಸ್‌ ಏಜೆಂಟ್‌ ಸಂಬಂಧಿಗಳಾಗಿದ್ದು, ಇವರೆಲ್ಲರೂ ತುಮಕೂರಿಗೆ ಸೋಂಕಿತನ ಜೊತೆಗೆ ಹೆಣ್ಣು ನೋಡಲು ತೆರಳಿದ್ದರು ಎನ್ನಲಾಗಿದೆ.

ಉಳಿದಂತೆ ಸೋಂಕು ತಗುಲಿರುವ ಸುಭಾಷ್‌ನಗರದ ವಯಸ್ಸಾದ ಗಂಡ (57), ಹೆಂಡತಿ(46) ಇಬ್ಬರಿಗೆ ತಮಿಳುನಾಡಿನ ನಂಟು ಇದೆ. ಸುಭಾಷ್‌ನಗರದ ಪುರುಷ ಹಾಗು ಮಹಿಳೆ ಇತ್ತೀಚೆಗೆ ತಮಿಳುನಾಡಿನಲ್ಲಿರುವ ತನ್ನ ಸೊಸೆಗೆ ಡಿಲೆವರಿಯಾಗಿದ್ದು ಕರೆದುಕೊಂಡು ಬರಲು ಮಗನೊಂದಿಗೆ ಹೋಗಿದ್ದರು ಎಂದು ತಿಳಿದುಬಂದಿದ್ದು, ಅವರಿಬ್ಬರನ್ನು ಹೊರತುಪಡಿಸಿ ಮಗ ಸೊಸೆ ಹಾಗು ಮಗುವಿಗೆ ಸೋಂಕು ತಗುಲಿಲ್ಲ.

ತಪ್ಪು ಮಾಹಿತಿ ನೀಡಿದ್ದ ಸೋಂಕಿತೆ: ಜಿಲ್ಲಾಡಳಿತ ತಾಲೂಕಿನ ಗಾಂಧಿ ನಗರದ 5 ಜನ, ಸುಭಾಷ್‌ ನಗರದ ಇಬ್ಬರಿಗೆ ಪಾಸಿಟಿವ್‌ ಇರುವುದು ದೃಢಪಡಿಸಿದ ಹಿನ್ನೆಲೆಯಲ್ಲಿ ಎರಡೂ ಸ್ಥಳಗಳಿಗೆ ಭೇಟಿ ನೀಡಿದ ನಗರಸಭೆ ಅಧಿಕಾರಿಗಳು ಗಾಂಧಿ ನಗರ ಹಾಗೂ ಹೊಸಮನೆಯ ಸುಭಾಷ್‌ನಗರದಲ್ಲಿ ಬ್ಯಾರಿಕೇಡ್‌ ನಿರ್ಮಿಸಿ ಸುಮ್ಮನಾಗಿದ್ದರು. ನಂತರ ವಾರ್ಡ್‌ ವ್ಯಾಪ್ತಿಯ ಆಶಾ ಕಾರ್ಯಕರ್ತೆಯರು ಗಾಂಧಿ ನಗರದ ಸೋಂಕಿತರಲ್ಲಿ 42 ವರ್ಷದ ಮಹಿಳೆಯೊಬ್ಬರು ಹೊಸಮನೆ ಎನ್‌ ಎಂಸಿಮುಖ್ಯರಸ್ತೆ ಭೋವಿ ಕಾಲೊನಿಯಲ್ಲಿ ಗಂಡನೊಂದಿಗೆ ವಾಸವಿದ್ದು, ಒಂದು ಮಗು ಇರುವ ಮಾಹಿತಿ ನೀಡಿದ್ದಾರೆ. ಆ ಕೂಡಲೇ ಎಚ್ಚೆತ್ತ ಅಧಿಕಾರಿಗಳು ಹೊಸಮನೆ ಎನ್‌ಎಂಸಿ, ಎಡಭಾಗದ ರಸ್ತೆಗೆ ಬ್ಯಾರಿಕೇಡ್‌ ನಿರ್ಮಿಸಿ ಸೀಲ್‌ ಡೌನ್‌ ಮಾಡಿದ್ದಾರೆ. ಸುಭಾಷ್‌ನಗರದ ಮೂವರು ಹಾಗೂ ಎನ್‌ಎಂಸಿ ಎಡಭಾಗದ ಇಬ್ಬರನ್ನು ಹೋಂ ಕ್ವಾರಂಟೈನ್‌ನಲ್ಲಿ ಇರಿಸಲಾಗಿದೆ.

ಟಾಪ್ ನ್ಯೂಸ್

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

LokSabha Election; ಕಾಂಗ್ರೆಸ್ ಪರ ನಟ ದರ್ಶನ್ ಪ್ರಚಾರಕ್ಕೆ ಕುಮಾರಸ್ವಾಮಿ ಪ್ರತಿಕ್ರಿಯೆ

LokSabha Election; ಕಾಂಗ್ರೆಸ್ ಪರ ನಟ ದರ್ಶನ್ ಪ್ರಚಾರಕ್ಕೆ ಕುಮಾರಸ್ವಾಮಿ ಪ್ರತಿಕ್ರಿಯೆ

Shimoga; ವಿರೋಧ ಪಕ್ಷದವರಿಗೆ ಅಪಪ್ರಚಾರವೇ ಕೊನೆಯ ಅಸ್ತ್ರ: ಬಿವೈ ರಾಘವೇಂದ್ರ

Shimoga; ವಿರೋಧ ಪಕ್ಷದವರಿಗೆ ಅಪಪ್ರಚಾರವೇ ಕೊನೆಯ ಅಸ್ತ್ರ: ಬಿವೈ ರಾಘವೇಂದ್ರ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

4-udupi

Udupi: ರಮಾಬಾಯಿ ಕೊಚ್ಚಿಕಾರ್‌ ಪೈ ನಿಧನ

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.