ಸಮ್ಮಿಶ್ರ ಸರ್ಕಾರದಿಂದ ರಾಜ್ಯದಲ್ಲಿ ಅರಾಜಕತೆ ಸೃಷಿ
Team Udayavani, Feb 15, 2019, 9:41 AM IST
ತೀರ್ಥಹಳ್ಳಿ: ವಿಧಾನಸಭಾ ಕಲಾಪದಲ್ಲಿ ಪಾಲ್ಗೊಂಡಿದ್ದ ವೇಳೆಯಲ್ಲಿ ಹಾಸನ ಕ್ಷೇತ್ರದ ಬಿಜೆಪಿ ಶಾಸಕ ಪ್ರೀತಮ್ ಗೌಡ ಅವರ ಸ್ವಗೃಹದ ಮೇಲೆ ಜೆಡಿಎಸ್ ಕಾರ್ಯಕರ್ತರು ದಾಂಧಲೆ ಮಾಡಿ ಕಲ್ಲು ತೂರಾಟ ನಡೆಸಿದ ಘಟನೆ ಖಂಡಿಸಿ ನಗರದಲ್ಲಿ ತಾಲೂಕು ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಜಿಪಂ ಸದಸ್ಯ ಕೆ. ಶ್ರೀನಿವಾಸ್, ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರ ಅರಾಜಕತೆ ಸೃಷ್ಟಿಸುತ್ತಿದೆ. ಶಾಸಕರ ಮನೆ ಮೇಲೆ ದೌರ್ಜನ್ಯ ನಡೆಸುವ ಜೆಡಿಎಸ್ ಕಾರ್ಯಕರ್ತರ ಗೂಂಡಾಗಿರಿಯನ್ನು ಬಿಜೆಪಿ ಖಂಡಿಸುತ್ತದೆ. ಸರ್ಕಾರದ ಆಡಳಿತ ಚುಕ್ಕಾಣಿ ಹಿಡಿದ ಮುಖ್ಯಮಂತ್ರಿಗಳು ಹಾಗೂ ಮಾಜಿ ಪ್ರಧಾನಿ ದೇವೇಗೌಡರು ದಾಂಧಲೆಗೆ ಕುಮ್ಮಕ್ಕು ನೀಡಿದ್ದಾರೆ. ಅಭಿವ್ಯಕ್ತಿ ಸ್ವಾತಂತ್ರ್ಯಾವನ್ನು ಹರಣಗೊಳಿಸುತ್ತಿರುವುದಕ್ಕೆ ಈ ಘಟನೆ
ಸಾಕ್ಷಿಯಾಗಿದೆ ಎಂದರು.
ಪಪಂ ಸದಸ್ಯ ಸಂದೇಶ್ ಜವಳಿ ಮಾತನಾಡಿ, ರಾಜ್ಯದಲ್ಲಿನ ಜೆಡಿಎಸ್ ಕಾಂಗ್ರೆಸ್ ಸಮ್ಮಿಶ್ರ ಸರ್ಕಾರ ಆಡಳಿತವನ್ನೇ ಮರೆತು ವಾಮ ಮಾರ್ಗದಲ್ಲಿ ರಾಜಕಾರಣ ನಡೆಸುತ್ತಿದೆ. ರಾಜ್ಯದ ಜನಸಾಮಾನ್ಯರ ಸಮಸ್ಯೆಯನ್ನು ಸರ್ಕಾರ ಮರೆತಂತಿದೆ ಎಂದರು. ಉಪತಹಶೀಲ್ದಾರ್ ರಾಕೇಶ್
ಮೂಲಕ ಪ್ರತಿಭಟನಾಕಾರರು ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು. ತಾಪಂ ಸದಸ್ಯ ಸಾಲೇಕೊಪ್ಪ ರಾಮಚಂದ್ರ, ಸೋಮಶೇಖರ್, ಟಿ. ಮಂಜುನಾಥ್, ಮುಖಂಡರಾದ ವೆಂಕಟೇಶ್ ಪಟವರ್ಧನ್, ಸಂದೀಪ್, ರಕ್ಷಿತ್ ಮೇಗರವಳ್ಳಿ, ಸಂತೋಶ್ ಕುಮಾರ್ ಶೆಟ್ಟಿ ಇತರರು ಪ್ರತಿಭಟನೆಯಲ್ಲಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ
Rameshwaram Cafe blast:ತೀರ್ಥಹಳ್ಳಿಯಲ್ಲಿ ಬೆಳ್ಳಂಬೆಳಗ್ಗೆ ಎನ್ಐಎ ದಾಳಿ
ರಾಜ್ಯ ಬಿಜೆಪಿಯಲ್ಲೀಗ ಕಾಂಗ್ರೆಸ್ ಸಂಸ್ಕೃತಿ ಬಂದಿದೆ: ಕೆ.ಎಸ್. ಈಶ್ವರಪ್ಪ
ಶಿವಮೊಗ್ಗ: ಮಂಗನ ಕಾಯಿಲೆಗೆ ಏಳು ವರ್ಷದ ಬಾಲಕಿ ಸಾವು
Rice: ಅಂಗನವಾಡಿ ಮಕ್ಕಳಿಗಿಲ್ಲ ಅನ್ನ ಭಾಗ್ಯ! ಮೂರು ತಿಂಗಳಿಂದ ಅಕ್ಕಿ ಪೂರೈಕೆ ಸ್ಥಗಿತ
MUST WATCH
ಹೊಸ ಸೇರ್ಪಡೆ
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ
Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು
Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್
PSI re-examination: ಪಿಎಸ್ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ