ವನ್ಯಜೀವಿಗಳಿಂದ ಬೆಳೆ ಹಾನಿ:ಸೋಲಾರ್ ಬೇಲಿ ನಿರ್ಮಿಸಿ
Team Udayavani, Sep 28, 2018, 2:30 PM IST
ತೀರ್ಥಹಳ್ಳಿ: ವನ್ಯ ಜೀವಿಗಳಿಂದ ಸಾಗುವಳಿ ಪ್ರದೇಶ ಬೆಳೆಗಳಿಗೆ ಹಾನಿಯಾಗುತ್ತಿದ್ದು, ನಿಯಂತ್ರಣಕ್ಕಾಗಿ ಸೋಲಾರ್ ಬೇಲಿ ನಿರ್ಮಾಣಕ್ಕೆ ಅಗತ್ಯ ಸಹಕಾರ ನೀಡುವಂತೆ ಆಗ್ರಹಿಸಿ ಆರಗ ಗ್ರಾಪಂ ಅಧ್ಯಕ್ಷ ಜಗದೀಶ್ ನೇತೃತ್ವದಲ್ಲಿ ನೆಕ್ಕರಗೋಡು ಗ್ರಾಮದ ರೈತರ ನಿಯೋಗ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಶಿವಶಂಕರ್ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದರು.
ಕಳೆದ ಕೆಲವು ತಿಂಗಳಿಂದ ಆರಗ ಭಾಗದ ಹಲವೆಡೆ ವನ್ಯಜೀವಿಗಳಿಂದ ಸಾಗುವಳಿ ಪ್ರದೇಶದ ಬೆಳೆಗಳಿಗೆ ಅಪಾರ ಹಾನಿಯಾಗುತ್ತಿದೆ. ಬೆಳೆಗಳನ್ನು ರಕ್ಷಿಸಲು ರೈತರು ಹರಸಾಹಸ ಪಡುವಂತಾಗಿದೆ. ಬೆಳೆ ರಕ್ಷಣೆಗಾಗಿ ಸಾಗುವಳಿ ಪ್ರದೇಶದಲ್ಲಿ ಸೋಲಾರ್ ಬೇಲಿಯನ್ನು ನಿರ್ಮಾಣಗೊಳಿಸುವಂತಾದರೆ ಬೆಳೆಗಳನ್ನು ಸಂರಕ್ಷಿಸಿಕೊಳ್ಳಬಹುದು. ಈ ಭಾಗದಲ್ಲಿ ಕಾಡುಕೋಣಗಳ ವಿಪರೀತ ಹಾವಳಿಯಿಂದ ಬೆಳೆ ನಾಶವಾಗುತ್ತಿದೆ ಎಂದು ರೈತರು ಮನವಿಯಲ್ಲಿ ಆಗ್ರಹಿಸಿದರು.
ಮನವಿ ಸ್ವೀಕರಿಸಿದ ಅರಣ್ಯ ಇಲಾಖೆಯ ಅಧಿಕಾರಿ ಮಾತನಾಡಿ, ಸೋಲಾರ್ ಬೇಲಿ ನಿರ್ಮಾಣಕ್ಕೆ ಅರಣ್ಯ ಇಲಾಖೆಯಲ್ಲಿ ಹಲವು ಷರತ್ತುಗಳಿವೆ. ಇದರ ಅನ್ವಯ ಸಹಾಯಧನದ ಅವಕಾಶವಿದೆ. ಸೋಲಾರ್ ಬೇಲಿ ನಿರ್ಮಾಣಕ್ಕೆ ಅಗತ್ಯ ಅನುದಾನ ಕೋರಿ ಮೇಲಧಿಕಾರಿಗಳಿಗೆ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದರು. ರೈತರಾದ ಕೃಷ್ಣಮೂರ್ತಿ ಮಂಜುನಾಥ್, ಗಿರೀಶ್ ಮತ್ತಿತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shimoga; ಕಾಂಗ್ರೆಸ್ ತುಷ್ಟೀಕರಣದಿಂದ ಪೊಲೀಸರ ಮಾನಸಿಕ ಸ್ಥಿತಿ ಹಾಳಾಗಿದೆ: ಆರಗ ಜ್ಞಾನೇಂದ್ರ
Shimoga; ನನ್ನ ವಿರುದ್ಧ ಷಡ್ಯಂತ್ರ ನಡೆಸಿದ ರಾಘವೇಂದ್ರ ಬಂಧನವಾಗಬೇಕು: ಈಶ್ವರಪ್ಪ ಆಗ್ರಹ
ಚುನಾವಣೆ ವೇಳೆ ಮತದಾರರಲ್ಲಿ ಗೊಂದಲ ಸೃಷ್ಟಿ; ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಈಶ್ವರಪ್ಪ ಮೊರೆ
ಶಿವಮೊಗ್ಗ: ಹಾಡಹಗಲೇ ನಡುರಸ್ತೆಯಲ್ಲಿ ಇಬ್ಬರು ರೌಡಿಶೀಟರ್ ಗಳ ಭೀಕರ ಹತ್ಯೆ, ಬಿಗುವಿನ ವಾತಾವರಣ
Thirthahalli ಕುಪ್ಪಳ್ಳಿ; ಮನೆಗೆ ಆಕಸ್ಮಿಕ ಬೆಂಕಿ: ಅಪಾರ ಹಾನಿ!
MUST WATCH
ಹೊಸ ಸೇರ್ಪಡೆ
Retired; ಟಿ20 ವಿಶ್ವಕಪ್ ನಲ್ಲಿ ಸಿಗದ ಸ್ಥಾನ; ವೃತ್ತಿಜೀವನಕ್ಕೆ ತೆರೆಎಳೆದ ಕಿವೀಸ್ ಬ್ಯಾಟರ್
Rank: ರಾಜ್ಯಕ್ಕೆ 5ನೇ ರ್ಯಾಂಕ್ ಪಡೆದ ಪ್ರತ್ವಿತಾ ಪಿ.ಶೆಟ್ಟಿ; ಐ.ಎ.ಎಸ್ ಅಧಿಕಾರಿಯಾಗುವ ಆಸೆ
Hubli; ಕಾಂಗ್ರೆಸ್ ಅಧಿಕಾರಕ್ಕಾಗಿ ದೇಶವನ್ನು ಒಡೆಯಲೂ ಹೇಸುವುದಿಲ್ಲ: ಪ್ರಹ್ಲಾದ ಜೋಶಿ
Prajwal Case; ಸಿಬಿಐ ತನಿಖೆ ಯಾಕೆ? ನಮ್ಮ ಪೊಲೀಸರ ಮೇಲೆ ನಂಬಿಕೆ ಇರಲಿ: ಸಿಎಂ ಸಿದ್ದರಾಮಯ್ಯ
Dandeli: ಮದುವೆ ಕಾರ್ಯಕ್ರಮಕ್ಕೆ ತೆರಳುತ್ತಿದ್ದ ಕಾರು ಪಲ್ಟಿ.. ಮಕ್ಕಳು ಸೇರಿ 8 ಮಂದಿಗೆ ಗಾಯ