ವಿಧಾನ ಮಂಡಲದ ಅಧಿವೇಶನದಲ್ಲಿ ಸಂವಿಧಾನ ಕುರಿತು ಚರ್ಚಿಸುವುದು ತಪ್ಪಲ್ಲ : ಸಿ.ಟಿ.ರವಿ
Team Udayavani, Feb 16, 2020, 9:40 PM IST
ಶಿವಮೊಗ್ಗ: ವಿಧಾನ ಮಂಡಲದ ಅಧಿವೇಶನದಲ್ಲಿ ಸಂವಿಧಾನ ಕುರಿತು ಚರ್ಚಿಸುವುದು ತಪ್ಪಲ್ಲ ಎಂದು ಸಚಿವ ಸಿ.ಟಿ.ರವಿ ಅಭಿಪ್ರಾಯಪಟ್ಟಿದ್ದಾರೆ.
ಭಾನುವಾರ ಸುದ್ದಿಗಾರರ ಜೊತೆ ಮಾತನಾಡಿ, ಮುಂಬರುವ ವಿಧಾನ ಮಂಡಲ ಅಧಿವೇಶನದ ಆರಂಭದ ಎರಡು ದಿನ ಸಂವಿಧಾನ ಕುರಿತು ಚರ್ಚೆ, ವಿಚಾರ ವಿನಿಮಯ ಹಮ್ಮಿಕೊಂಡಿರುವ ನಿರ್ಧಾರ ಸರಿಯಾಗಿದೆ. ಅತಿವೃಷ್ಟಿ, ರೈತರ ಸಮಸ್ಯೆ, ರಾಜ್ಯದ ಜ್ವಲಂತ ಸಮಸ್ಯೆ ಬಗ್ಗೆ ಚರ್ಚಿಸಲು ಅಧಿವೇಶನದಲ್ಲಿ ಸಾಕಷ್ಟು ಕಾಲಾವಕಾಶ ಸಿಗಲಿದೆ. ಸಂವಿಧಾನದ ಕುರಿತು ಚರ್ಚೆ ನಡೆಸುವುದರಿಂದ ಉಳಿದ ಸಮಸ್ಯೆಗಳ ಬಗ್ಗೆ ಚರ್ಚೆಗೆ ತೊಂದರೆಯಾಗಲಿದೆ ಎಂಬ ಅನಿಸಿಕೆ ಸರಿಯಲ್ಲ. ಎಲ್ಲ ಜನಪ್ರತಿನಿಧಿಗಳಿಗೂ ಸಂವಿಧಾನದ ಕಾರ್ಯವೈಖರಿ, ಕಾರ್ಯವ್ಯಾಪ್ತಿ ಬಗ್ಗೆ ಸಂಪೂರ್ಣ ಅರಿವು ಇರುವುದಿಲ್ಲ. ಹೀಗಾಗಿ, ಅನೇಕ ವೇಳೆ ಸಂವಿಧಾನವನ್ನು ತಪ್ಪಾಗಿ ಅರ್ಥೈಸುವ ಅಪಾಯವಿರುತ್ತದೆ. ಈಗ ಸಿಎಎ ವಿರುದ್ಧ ಕೇಳಿ ಬರುತ್ತಿರುವ ಸುಳ್ಳು ಸುದ್ದಿಗಳಿಗೂ ಇದೇ ಕಾರಣ. ಸಂಸದ ಅನಂತಕುಮಾರ ಹೆಗಡೆ ಸಂವಿಧಾನ ಬದಲಾಯಿಸುತ್ತೇವೆ ಎಂದಿದ್ದನ್ನು ಅನೇಕರು ತಪ್ಪಾಗಿ ಗ್ರಹಿಸಿದ್ದಾರೆ. ಇದುವರೆಗೆ ಸಂವಿಧಾನ ಎಷ್ಟು ಬಾರಿ ತಿದ್ದುಪಡಿಯಾಗಿಲ್ಲ ಎಂದು ಪ್ರಶ್ನಿಸಿದರು.
ಬಂಜಾರಾ ಅಕಾಡೆಮಿ:
ಈ ಬಾರಿಯ ಬಜೆಟ್ನಲ್ಲಿ ಬಂಜಾರಾ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿ ಘೋಷಣೆ ಮಾಡಲಾಗುವುದು. ಸೂರಗೊಂಡನಕೊಪ್ಪದಲ್ಲಿ ಸೇವಾಲಾಲ್ ಜಯಂತ್ಯುತ್ಸವದಲ್ಲಿ ಬಂಜಾರಾ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿ ರಚನೆಗೆ ಆ ಸಮುದಾಯದವರಿಂದ ಮನವಿ ಮಾಡಲಾಗಿತ್ತು. ಈ ಬಗ್ಗೆ ಸಿಎಂ ಜತೆ ಚರ್ಚಿಸಿದ್ದೇನೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
MUST WATCH
ಹೊಸ ಸೇರ್ಪಡೆ
ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’
Kollywood: ಅಜಿತ್ ಹುಟ್ಟುಹಬ್ಬಕ್ಕೆ ಸೂಪರ್ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್ ಖುಷ್
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ