ಗ್ರಾಹಕ ಸ್ನೇಹಿ “ನನ್ನ ಮೆಸ್ಕಾಂ’


Team Udayavani, Mar 5, 2021, 6:31 PM IST

Customer friendly “namma Messcom”

ಶಿವಮೊಗ್ಗ: ನಮ್ಮ ಏರಿಯಾದಲ್ಲಿ ಯಾವಾಗ ಕರೆಂಟ್‌ ಹೋಗುತ್ತೆ? ವಿದ್ಯುತ್‌ ಬಿಲ್‌ ಕಳೆದುಹೋಯ್ತು ಏನು ಮಾಡೋದು? ವಿದ್ಯುತ್‌ ಬಿಲ್‌ ಕಟ್ಟೋಕೆ ಕೆಲಸ ಬಿಟ್ಟು ಹೋಗಿ ಕ್ಯೂ ನಿಲ್ಲಬೇಕು. ಪದೇ ಪದೇ ವಿದ್ಯುತ್‌ ಹೋಗುತ್ತೆ ಯಾರಿಗೆ  ಹೇಳೋದು ?

ಹೀಗೆ ಹತ್ತು ಹಲವು ಸಮಸ್ಯೆಗಳಿಗೆ ಈಗ ಒಂದೇ ವೇದಿಕೆಯಲ್ಲಿ ಪರಿಹಾರ ಸಿಕ್ಕಿದೆ. ಈ ಎಲ್ಲ ಸಮಸ್ಯೆಗಳಿಗೆ ಮೆಸ್ಕಾಂ ರೂಪಿಸಿರುವ ಗ್ರಾಹಕ ಸ್ನೇಹಿ “ನನ್ನ ಮೆಸ್ಕಾಂ’ ಆ್ಯಪ್‌ನಲ್ಲಿ ಪರಿಹಾರ ಕಂಡುಕೊಳ್ಳಬಹುದಾಗಿದೆ. ಪ್ರಸ್ತುತ ಈ ಆ್ಯಪ್‌ ಆ್ಯಂಡ್ರಾಯ್ಡ ಹಾಗೂ ಐಒಎಸ್‌ನಲ್ಲಿ ಲಭ್ಯವಿದೆ. ಶಿವಮೊಗ್ಗ, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳ 24.88 ಲಕ್ಷ ಗ್ರಾಹಕರಿಗೆ ಇದು ಅನುಕೂಲವಾಗಲಿದೆ. ಸಾವಿರಾರು  ಲೋಡ್‌ ಮಾಡಿಕೊಂಡು ಅನುಕೂಲ ಪಡೆಯುತ್ತಿದ್ದಾರೆ. ಗೂಗಲ್‌ ಪ್ಲೇ ಸ್ಟೋರ್‌ ನಲ್ಲಿ ಈ ಆ್ಯಪ್‌ ಲಭ್ಯವಿದ್ದು ಡೌನ್‌ಲೋಡ್‌ ಮಾಡಿದ ನಂತರ ವಿದ್ಯುತ್‌ ಬಿಲ್‌ನಲ್ಲಿರುವ 10 ಸಂಖ್ಯೆಗಳ ಅಕೌಂಟ್‌ ನಂಬರ್‌ ಅನ್ನು ನಮೂದಿಸಬೇಕು. ನಂತರ ನಿಮ್ಮ ವೈಯಕ್ತಿಕ ಮಾಹಿತಿ ಲಭ್ಯವಾಗುತ್ತದೆ. ಒಂದಕ್ಕಿಂತ ಹೆಚ್ಚು ಅಕೌಂಟ್‌ಗಳನ್ನು ಲಿಂಕ್‌ ಮಾಡಲು ಅವಕಾಶ ಕಲ್ಪಿಸಲಾಗಿದೆ.

ಸಿಗಲಿದೆ ಸಂಪೂರ್ಣ ಮಾಹಿತಿ: ಗ್ರಾಹಕರು ತಮ್ಮ ಕನೆಕ್ಷನ್‌ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಇಲ್ಲಿಯೇ ವೀಕ್ಷಿಸಬಹುದಾಗಿದೆ. ಈ ತಿಂಗಳ ಬಿಲ್‌ ಬಂದಿಲ್ಲ ಎಂಬ ಕಾರಣಕ್ಕೆ ಕಚೇರಿಗಳಿಗೆ ಓಡಾಡುವ ಕಿರಿಕಿರಿ ತಪ್ಪಲಿದೆ. ತಮ್ಮ ಹಿಂದಿನ ತಿಂಗಳುಗಳ ಬಿಲ್‌ ಮಾತ್ರವಲ್ಲದೇ ವಿದ್ಯುತ್‌ ಬಳಕೆಯ ಆಧಾರದ ಮೇಲೆ ಮುಂಬರುವ ಬಿಲ್‌ ಅನ್ನು ಲೆಕ್ಕಾಚಾರ ಮಾಡಬಹುದಾಗಿದೆ. ಬಾಕಿ ವಿದ್ಯುತ್‌ ಶುಲ್ಕ, ವಿದ್ಯುತ್‌ ನಿರ್ವಹಣೆ ಮತ್ತಿತರ ಮಾಹಿತಿಗಳನ್ನು ಆ್ಯಪ್‌ ನೀಡುತ್ತದೆ. ಗ್ರಾಹಕರು ಸ್ಮಾರ್ಟ್‌ ಆಗಿ ಸೇವೆ ಬಳಸಿದಲ್ಲಿ ಪ್ರತಿಯೊಂದು ಮಾಹಿತಿಯನ್ನು ಮನೆಯಲ್ಲಿ ಕುಳಿತುಕೊಂಡೇ ಪಡೆಯಬಹುದಾಗಿದೆ.

ಏನೆಲ್ಲ ಇದೆ?: ಹೆಚ್ಚುವರಿ ಭದ್ರತಾ ಠೇವಣಿ ಪಾವತಿಗೆ ಅವಕಾಶ, ಬಿಲ್‌ ಮತ್ತು ಪಾವತಿ ರಸೀದಿಗಳನ್ನು ಪಿಡಿಎಫ್‌ನಲ್ಲಿ ಡೌನ್‌ಲೋಡ್‌ ಮಾಡಿಕೊಳ್ಳಬಹುದು. ಮುಂಬರುವ ಒಂದು ವಾರದ ವಿದ್ಯುತ್‌ ನಿಲುಗಡೆ ಮಾಹಿತಿಯನ್ನೂ ಆ್ಯಪ್‌ನಲ್ಲೇ ಪಡೆಯುಬಹುದಾಗಿದೆ. ಜತೆಗೆ, ಹಿಂದಿನವಿದ್ಯುತ್‌ ಬಳಕೆ, ಪಾವತಿ ಮತ್ತು ಬಾಕಿ ಲೆಕ್ಕಾಚಾರ ಮಾಹಿತಿ ಡ್ಯಾಶ್‌ಬೋರ್ಡ್‌, ದೂರು ನೋಂದಣಿ, ಸ್ಟೇಟಸ್‌ ಟ್ರಾÂಕಿಂಗ್‌, ಟ್ಯಾರಿಫ್‌, ಮೆಸ್ಕಾಂ ಕಚೇರಿಗಳ ಗೂಗಲ್‌ ಮ್ಯಾಪ್‌, ಹೊಸ ವಿದ್ಯುತ್‌ ಸಂಪರ್ಕಕ್ಕೋಸ್ಕರ ಇಲ್ಲಿಯೇ ಪೂರ್ಣ ಮಾಹಿತಿ ಲಭ್ಯವಿದೆ. ವ್ಯಂಗ್ಯಚಿತ್ರಗಳ ಮೂಲಕ ಜಾಗೃತಿ ಮೂಡಿಸಲಾಗಿದೆ. ಮೆಸ್ಕಾಂನ ಸಾಮಾಜಿಕ ಜಾಲತಾಣಗಳ ಲಿಂಕ್‌ ಸಹ ನೀಡಲಾಗಿದೆ.ವಿದ್ಯುತ್‌ ಉಳಿತಾಯದ ಸಲಹೆಗಳು  ಯೋಜನೆಗಳ ಬಗ್ಗೆ ಮಾಹಿತಿ ಹೀಗೆ ಗ್ರಾಹಕರಿಗೆ ಅಗತ್ಯವಾದ ಎಲ್ಲ ಮಾಹಿತಿಗಳನ್ನು ಕಲ್ಪಿಸಲಾಗಿದೆ.

ಇದನ್ನೂ ಓದಿ:ಮಕ್ಕಳೊಂದಿಗೆ ಬಿಇಒ ಸಂವಾದ

ಪ್ರತಿ ತಿಂಗಳು ಕಚೇರಿಗೆ ಹೋಗುವುದು ಕಷ್ಟವಾಗಿತ್ತು. ಅದಕ್ಕಾಗಿ ಆನ್‌ಲೈನ್‌ ಮೂಲಕ ಬಿಲ್‌ ಪಾವತಿ ಮಾಡುತ್ತಿದ್ದೆ. ಆದರೆ ಅದು ಪರಿಪೂರ್ಣವಾಗಿಲ್ಲ. ಒಂದು ತಿಂಗಳು ಬಿಲ್‌ ಕಟ್ಟಿಲ್ಲವಾದರೆ ಅದು ಮುಂದಿನ ಆನ್‌ಲೈನ್‌ ಬಿಲ್‌ನಲ್ಲಿ ಕಾಣಿಸಬೇಕು. ಆದರೆ ಹಾಗಾಗುತ್ತಿರಲಿಲ್ಲ. ವಿದ್ಯುತ್‌ ನಿಲುಗಡೆ ಬಗ್ಗೆ ಪತ್ರಿಕೆಗಳಿಗೆ ಮಾಹಿತಿ ಕೊಡುತ್ತಿದ್ದರೂ ಎಲ್ಲರೂ ಪತ್ರಿಕೆ ಓದುವುದಿಲ್ಲವಾದ್ದರಿಂದ ಅದು ಸಹ ಪರಿಪೂರ್ಣ ಪರಿಹಾರವಲ್ಲ. ಈಗ ಆ್ಯಪ್‌ನಲ್ಲಿ ಸಾಕಷ್ಟು ಅನುಕೂಲಗಳಿದ್ದು ಕಳೆದ ಬಾರಿಯ ಪಾವತಿಯ ಮಾಹಿತಿ ಸಿಗುತ್ತದೆ. ಮುಂದಿನ ಒಂದು ವಾರದ ವಿದ್ಯುತ್‌ ನಿಲುಗಡೆ ಮಾಹಿತಿಯೂ ಸಿಗುತ್ತದೆ. ದೂರು ಕೊಡಲು ಕಚೇರಿಗೆ ಕರೆ ಮಾಡಿದರೆ ಉಡಾಫೆ ಉತ್ತರಗಳು ಸಿಗುತ್ತಿದ್ದವು. ಈಗ ಇದೆಲ್ಲದಕ್ಕೂ ಪರಿಹಾರ ಸಿಗಲಿದೆ.

ಪ್ರವೀಣ್‌, ಭದ್ರಾವತಿ

ಶರತ್‌ ಭದ್ರಾವತಿ

ಟಾಪ್ ನ್ಯೂಸ್

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆKundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

19-sagara

LS Polls: ರಾಜ್ಯದ ಜನರಿಗೆ ಈಶ್ವರಪ್ಪ ಸ್ಪರ್ಧೆ ವಿಷಯ ಈಗ ಖಚಿತ: ಈಶ್ವರಪ್ಪ

1-y-a

Shikaripur; ಸಂಭ್ರಮದ ಹುಚ್ಚರಾಯಸ್ವಾಮಿ ಬ್ರಹ್ಮ ರಥೋತ್ಸವ:ಯಡಿಯೂರಪ್ಪ ಕುಟುಂಬ ಭಾಗಿ

BS ಯಡಿಯೂರಪ್ಪನೇ ನನ್ನನ್ನು ವಾಪಸ್‌ ಬಿಜೆಪಿ ಕರೆಸಿಕೊಳ್ಳುತ್ತಾರೆ: ಈಶ್ವರಪ್ಪ

BS ಯಡಿಯೂರಪ್ಪನೇ ನನ್ನನ್ನು ವಾಪಸ್‌ ಬಿಜೆಪಿ ಕರೆಸಿಕೊಳ್ಳುತ್ತಾರೆ: ಈಶ್ವರಪ್ಪ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆKundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Subramanya ಏನೆಕಲ್ಲು: ಕಾರಿಗೆ ಗೂಡ್ಸ್‌ ಆಟೋ ಢಿಕ್ಕಿ

Subramanya ಏನೆಕಲ್ಲು: ಕಾರಿಗೆ ಗೂಡ್ಸ್‌ ಆಟೋ ಢಿಕ್ಕಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.