ಡಿಕೆಶಿ ಮತ್ತು ಸಿದ್ಧರಾಮಯ್ಯ ಮಾನಸಿಕ ಸ್ಥಿಮಿತ ಕಳೆದುಕೊಂಡಿದ್ದಾರೆ: ನಳಿನ್ ಕಟೀಲ್
Team Udayavani, Jan 2, 2021, 1:01 PM IST
ಶಿವಮೊಗ್ಗ: ಗ್ರಾ.ಪಂ. ಚುನಾವಣೆಯಲ್ಲಿ ಬಿಜೆಪಿ ಅಭೂತಪೂರ್ವ ಜಯಗಳಿಸಿದೆ. ಡಿ.ಕೆ.ಶಿವಕುಮಾರ್ ಮತ್ತು ಸಿದ್ಧರಾಮಯ್ಯ ಮಾನಸಿಕ ಸ್ಥಿಮಿತ ಕಳೆದುಕೊಂಡಿದ್ದಾರೆ. ಮುಂದಿನ ವರ್ಷಗಳಲ್ಲಿ ಅಧಿಕಾರಕ್ಕೆ ಬರುವುದಿಲ್ಲ ಎಂಬುದು ಮನಗಂಡಿದ್ದಾರೆ. ಅವರು ಭಯದಲ್ಲಿ ಅತಂತ್ರ ಸ್ಥಿತಿಯಲ್ಲಿ ಮಾತನಾಡುತ್ತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದರು.
ಬಿಜೆಪಿ ಕಾರ್ಯಕಾರಣಿ ಹಾಗೂ ವಿಶೇಷ ಸಭೆ ಇರುವ ಹಿನ್ನೆಲೆಯಲ್ಲಿ ಶಿವಮೊಗ್ಗ ನಗರಕ್ಕೆ ಆಗಮಿಸಿದ ಅವರು ಸುದ್ದಿಗಾರರೊಂದಿಗೆ ಮಾತನಾಡಿ, ಯಡಿಯೂರಪ್ಪ ಅವರು ರಾಜಿನಾಮೆ ನೀಡುವುದು ಒಳ್ಳೆಯದು ಎಂದು, ಡಿ.ಕೆ. ಶಿವಕುಮಾರ್ ಮತ್ತು ಸಿದ್ಧರಾಮಯ್ಯ ಹೇಳಿಕೆಗೆ ತಿರುಗೇಟು ನೀಡಿದರು.
ಇದನ್ನೂ ಓದಿ:ಗ್ರಾಮ ಪಂಚಾಯತಿ ಚುನಾವಣೆ ಸಿಟ್ಟಿನಿಂದ ಜಾನುವಾರುಗಳ ಸಜೀವ ದಹನ ಮಾಡಿದ ದುಷ್ಕರ್ಮಿಗಳು!
ಇಂದಿನ ಕಾರ್ಯಕಾರಿಣಿ ಸಭೆಯಲ್ಲಿ ಲವ್ ಜಿಹಾದ್ ಬಗ್ಗೆ ಚರ್ಚಿಸಲಾಗುವುದು. ನಾಳಿನ ವಿಶೇಷ ಸಭೆಯಲ್ಲೂ ಚರ್ಚೆ ನಡೆಸಲಾಗುವುದು. ಮುಂದಿನ ಅಧಿವೇಶನದಲ್ಲಿ ಲವ್ ಜಿಹಾದ್ ಕಾಯ್ದೆ ಜಾರಿಯಾಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಶಿವಮೊಗ್ಗಕ್ಕೆ ಆಗಮಿಸಿದ ನಳಿನ್ ಕುಮಾರ್ ಕಟೀಲ್ ಅವರಿಗೆ ಸಕ್ರೆಬೈಲು ಆನೆ ಬಿಡಾರದ ಬಳಿ ಭವ್ಯ ಸ್ವಾಗತ ಕೋರಲಾಯಿತು. ಆನೆಯ ಮೂಲಕ ನಳಿನ್ ಕುಮಾರ್ ಕಟೀಲ್ ಅವರಿಗೆ ಹೂವಿನ ಹಾರ ಹಾಕಿ ಸ್ವಾಗತ ಕೋರಲಾಯಿತು. ಸಚಿವ ಈಶ್ವರಪ್ಪ, ಸಂಸದ ರಾಘವೇಂದ್ರ, ಶಾಸಕ ಆರಗ ಜ್ಞಾನೇಂದ್ರ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
MUST WATCH
ಹೊಸ ಸೇರ್ಪಡೆ
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ
ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ