ಡಿಸಿ ವರ್ಗಾವಣೆ ಪ್ರಜಾಪ್ರಭುತ್ವಕ್ಕೆ ಅವಮಾನ
ವರ್ಗಾವಣೆ ಮಾಡಿದವರಿಗೆ ಜಿಲ್ಲಾಧಿಕಾರಿಗಳ ಕಾರ್ಯವೈಖರಿಯೇ ಚಾಟಿಯೇಟು: ಗಂಗಾಧರ್
Team Udayavani, Aug 13, 2019, 3:25 PM IST
ಶಿವಮೊಗ್ಗ: ನಿರ್ಗಮಿತ ಜಿಲ್ಲಾಧಿಕಾರಿ ಕೆ.ಎ. ದಯಾನಂದ್ ಅವರಿಗೆ ಕಾಯಕ ಶ್ರೇಷ್ಠ ಪ್ರಶಸ್ತಿ ನೀಡಲಾಯಿತು.
ಶಿವಮೊಗ್ಗ: ಜಿಲ್ಲಾಧಿಕಾರಿಯಾಗಿ ಜನರ ಸೇವೆ ಮಾಡಿದ ಕೆ.ಎ.ದಯಾನಂದ ಅವರಿಗೆ ಸರ್ಕಾರ ವರ್ಗಾವಣೆ ಎಂಬ ಬಳುವಳಿ ನೀಡಿ, ಅವರನ್ನು ಅಸಹಾಯಕರನ್ನಾಗಿ ಮಾಡಿ ಕಳುಹಿಸುತ್ತಿರುವುದು ಪ್ರಜಾಪ್ರಭುತ್ವಕ್ಕೆ ಮಾಡಿದ ಅವಮಾನ ಎಂದು ರಾಜ್ಯ ರೈತಸಂಘದ ಮುಖಂಡ ಕೆ.ಟಿ. ಗಂಗಾಧರ್ ಅಭಿಪ್ರಾಯ ವ್ಯಕ್ತಪಡಿಸಿದರು.
ನಗರದ ಅಂಬೇಡ್ಕರ್ ಭವನದಲ್ಲಿ ಭಾನುವಾರ ಜಿಲ್ಲೆಯ ಎಲ್ಲ ಸಂಘ- ಸಂಸ್ಥೆಗಳು ಹಾಗೂ ನಾಗರಿಕರ ಪರವಾಗಿ ಹಮ್ಮಿಕೊಂಡಿದ್ದ ವರ್ಗಾವಣೆಗೊಂಡಿರುವ ಕೆ.ಎ. ದಯಾನಂದ ಅವರಿಗೆ ಬೀಳ್ಕೊಡುಗೆ ಸಮಾರಂಭ ಹಾಗೂ ‘ಕಾಯಕ ಶ್ರೇಷ್ಠ’ ಪ್ರಶಸ್ತಿ ಸಮಾರಂಭದಲ್ಲಿ ಅವರು ಮಾತನಾಡಿದರು.
ಮಲೆನಾಡಿನ ಜನ ಮಲೆನಾಡಿನ ಸಂಸೃ್ಕತಿಯಂತೆ ಅವರ ಕಾರ್ಯವೈಖರಿ ಮೆಚ್ಚಿ ಅವರಿಗೆ ಪ್ರಶಸ್ತಿ ನೀಡಿ ಕಳುಹಿಸುತ್ತಿರುವುದು ವರ್ಗಾವಣೆ ಮಾಡಿದವರಿಗೆ ಒಂದು ಚಾಟಿ ಏಟು ನೀಡಿದಂತಾಗಿದೆ. ಅವರಿಗೆ ಇದಕ್ಕಿಂದ ಅವಮಾನಕರವಾದುದು ಯಾವುದೂ ಇಲ್ಲ ಎಂದು ಭಾವಿಸುತ್ತೇನೆ ಎಂದರು.
ಮಾನವೀಯ ಮೌಲ್ಯಗಳನ್ನು ಹೊಂದಿರುವ ವ್ಯಕ್ತಿ, ಕರ್ತವ್ಯ ನೈಪುಣ್ಯ ಹೊಂದಿದ್ದ ಇವರು ಕಾನೂನಿನ ವ್ಯಾಪ್ತಿಯಲ್ಲಿ ಕೆಲಸವಾಗದಿದ್ದರೂ ಮಾನವೀಯತೆ ಮೂಲಕ ಕೆಲಸ ಮಾಡಿದ್ದರು ಎಂದು ಶ್ಲಾಘಿಸಿದರು.
ರಾಜ್ಯ ದಲಿತ ಸಂಘರ್ಷ ಸಮಿತಿ ಸಂಚಾಲಕ ಗುರುಮೂರ್ತಿ ಮಾತನಾಡಿ, ಶರಾವತಿ ಮುಳುಗಡೆ ಸಂತ್ರಸ್ತರಿಗೆ ಭೂಮಿ ನೀಡಲು ಪ್ರಾಮಾಣಿಕ ಪ್ರಯತ್ನ ಮಾಡಿದರು. ಅವರಿಗೆ ಸಾಮಾಜಿಕ ನ್ಯಾಯ ನೀಡಿದ್ದಾರೆ ಎಂದರು.
34 ಗುತ್ತಿಗೆ ಪೌರ ಕಾರ್ಮಿಕರಿಗೆ ಕಾಯಂ ಹುದ್ದೆ ನೀಡಿದ್ದಾರೆ. ಹಕ್ಕಿಪಿಕ್ಕಿ ಕಾಲೋನಿ, ಸಹ್ಯಾದ್ರಿ ಕಾಲೇಜಿನ ಪಕ್ಕದಲ್ಲಿರುವ ಹಕ್ಕಿಪಿಕ್ಕಿ ತಾಂಡಾವನ್ನು ಸ್ಲಂ ಬಡಾವಣೆಯಾಗಿ ಘೋಷಣೆ ಮಾಡಿ, ಅವರಿಗೆ ಮೂಲ ಸೌಕರ್ಯಗಳು ಲಭಿಸುವಂತೆ ಮಾಡಿದರು. ಗ್ರಾಮ ವಾಸ್ತವ್ಯ ಮಾಡುವ ಮೂಲಕ ಆ ಜನರ ಸಮಸ್ಯೆಗಳಿಗೆ ಪರಿಹಾರ ನೀಡುವ ಕೆಲಸವನ್ನು ಮಾಡಿದರು ಎಂದು ಸ್ಮರಿಸಿದರು.
ಹಳೇ ಜೈಲು ಆವರಣವನ್ನು ಮ್ಯೂಸಿಯಂ ಮಾಡುವ ಹಾಗೂ ಬೆಂಗಳೂರಿನ ಸ್ವಾತಂತ್ರ್ಯ ಪಾರ್ಕ್ ಮಾದರಿಯ ಪಾರ್ಕ್ ಮಾಡುವ ಉದ್ದೇಶವನ್ನು ಹೊಂದಿದ್ದರು. ಆದರೆ ಅದು ಈಡೇರಲಿಲ್ಲ. ಅವರನ್ನು ಸೋಮಾರಿಗಳು ಮಾಡುವ ವಿಭಾಗಕ್ಕೆ ವರ್ಗಾವಣೆ ಮಾಡಿರುವುದು ಅವರ ಕಾರ್ಯವೈಖರಿಗೆ ಹಿನ್ನಡೆಯಾಗಿದೆ ಎಂದರು.
ಕಟೀಲು ಅಶೋಕ್ ಪೈ ಕಾಲೇಜಿನ ಪ್ರಾಂಶುಪಾಲೆ ಸಂಧ್ಯಾ ಕಾವೇರಿ, ಯುವಕರಿಗೆ ಮಾದಕ ವ್ಯಸನದ ಬಗ್ಗ ಜಾಗೃತಿ ಮೂಡಿಸಿದರು. ಅವರು ದೂರದೃಷ್ಟಿ ಹೊಂದಿದ್ದ ಅಧಿಕಾರಿಯಾಗಿದ್ದರು ಎಂದು ಹೇಳಿದರು
ರಾಷ್ಟ್ರೀಯ ಶಿಕ್ಷಣ ಸಮಿತಿ ಖಜಾಂಚಿ ಅಶ್ವತ್ಥ್ ನಾರಾಯಣ ಶೆಟ್ಟಿ, ಜಿಲ್ಲಾ ಕೈಗಾರಿಕಾ ಮತ್ತು ವಾಣಿಜ್ಯ ಸಂಘದ ಅಧ್ಯಕ್ಷ ವಾಸುದೇವ, ಉದ್ಯಮಿ ಗೋಪಿನಾಥ್, ವಿಜಯ ಕುಮಾರ್, ರಜನಿ ಪೈ, ಕೆ.ಸಿ. ಬಸವರಾಜ್ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ
Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು
ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ
LS Polls: ರಾಜ್ಯದ ಜನರಿಗೆ ಈಶ್ವರಪ್ಪ ಸ್ಪರ್ಧೆ ವಿಷಯ ಈಗ ಖಚಿತ: ಈಶ್ವರಪ್ಪ
Shikaripur; ಸಂಭ್ರಮದ ಹುಚ್ಚರಾಯಸ್ವಾಮಿ ಬ್ರಹ್ಮ ರಥೋತ್ಸವ:ಯಡಿಯೂರಪ್ಪ ಕುಟುಂಬ ಭಾಗಿ
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ