ಡಿಸಿಸಿ ಬ್ಯಾಂಕ್‌ಗೆ ಇತಿಹಾಸದಲ್ಲೇ ಅತಿ ಹೆಚ್ಚು ಲಾಭ

2021-22ನೇ ಸಾಲಿಗೆ 23.26 ಕೋಟಿ ರೂ. ನಿವ್ವಳ ಲಾಭ

Team Udayavani, Apr 17, 2022, 4:11 PM IST

dcc

ಶಿವಮೊಗ್ಗ: ಶಿವಮೊಗ್ಗ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್‌ ಬ್ಯಾಂಕಿನ ಇತಿಹಾಸದಲ್ಲೇ ಅತಿ ಹೆಚ್ಚು ಲಾಭ ಗಳಿಸಿದ್ದು, 2021-22ನೇ ಸಾಲಿಗೆ 23.26 ಕೋಟಿ ರೂ. ನಿವ್ವಳ ಲಾಭ ಗಳಿಸಿದೆ ಎಂದು ಬ್ಯಾಂಕ್‌ನ ಅಧ್ಯಕ್ಷ ಎಂ.ಬಿ. ಚನ್ನವೀರಪ್ಪ ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಠೇವಣಿ ಮೊತ್ತ ಕೂಡ ಹೆಚ್ಚಾಗಿದ್ದು, 2022ರ ಮಾರ್ಚ್‌ ಅಂತ್ಯಕ್ಕೆ 1244.36 ಕೋಟಿ ರೂ.ಗಳ ಠೇವಣಿ ಸಂಗ್ರಹವಾಗಿದೆ. ಇದು ಕೂಡ ದಾಖಲೆಯಾಗಿದೆ. ಎನ್‌.ಪಿ.ಎ. ಪ್ರಮಾಣ ಕಡಿಮೆಯಾಗಿರುವುದು ಕೂಡ ಸ್ವಾಗತದ ವಿಷಯ. ಈ ಹಿಂದೆ ಎನ್‌.ಪಿ.ಎ. ಪ್ರಮಾಣ ಶೇ.5ರಷ್ಟು ನಿಗದಿಯಿದೆ. ಅದು ಈಗ 4.21ಕ್ಕೆ ಇಳಿದಿದೆ. ಬ್ಯಾಂಕ್‌ 2517.36 ಕೋಟಿ ವಾರ್ಷಿಕ ವಹಿವಾಟು ನಡೆಸುತ್ತಿದೆ. 89945 ರೈತರಿಗೆ 976.33 ಕೋಟಿ ಬೆಳೆ ಸಾಲ ನೀಡಲಾಗಿದೆ. ಸಾಲ ವಸೂಲಾತಿ ಪ್ರಮಾಣ ಕೂಡ ಶೇ. 99.32ರಷ್ಟಿದೆ. 387 ರೈತರಿಗೆ 40.43 ಕೋಟಿ ಮಧ್ಯಮಾವಧಿ ಸಾಲ ನೀಡಲಾಗಿದೆ ಎಂದರು.

ಬ್ಯಾಂಕಿನಿಂದ 2823 ಸ್ವ-ಸಹಾಯ ಗುಂಪುಗಳಿಗೆ 84.65 ಕೋಟಿ ರೂ. ಸಾಲ ನೀಡಲಾಗಿದೆ. ಸರ್ಕಾರದ ಕಾಯಕ ಯೋಜನೆಯಡಿ 10 ಲಕ್ಷಗಳವರೆಗೆ ಸಾಲ ನೀಡುತ್ತಿದ್ದು, 44 ಮಹಿಳಾ ಗುಂಪುಗಳಿಗೆ 3.21 ಕೋಟಿ ರೂ. ಸಾಲ ನೀಡಲಾಗಿದೆ. 2019-20ರ ಸಾಲಿಗೆ ನಬಾರ್ಡ್‌ ಪರಿವೀಕ್ಷಣೆ ವರದಿಯಲ್ಲಿ ಬ್ಯಾಂಕಿಗೆ ಎ- ದರ್ಜೆ ಪ್ರಮಾಣ ಪತ್ರ ಕೂಡ ನೀಡಿರುವುದು ಬ್ಯಾಂಕಿನ ಹೆಮ್ಮೆಯಾಗಿದೆ ಎಂದರು.

ಬ್ಯಾಂಕ್‌ ಕೃಷಿಯೇತರ ಸಾಲವಾಗಿ 286.12 ಕೋಟಿ ಸಾಲ ನೀಡಲಾಗಿದೆ. ಕೇಂದ್ರ ಸರ್ಕಾರದ ಯೋಜನೆಯಡಿ ಹಾಲು ಉತ್ಪಾದಕರ ಸಹಕಾರ ಸಂಘಗಳಿಗೆ ಶೂನ್ಯ ಬಡ್ಡಿದರದಲ್ಲಿ 1313 ಸದಸ್ಯರಿಗೆ 204.26 ಲಕ್ಷ ಸಾಲ ವಿತರಣೆ ಮಾಡಲಾಗಿದೆ. ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳನ್ನು ಬಹುಸೇವಾ ಕೇಂದ್ರಗಳನ್ನಾಗಿ ಮಾರ್ಪಡಿಸಿ 38 ಸಹಕಾರ ಸಂಘಗಳಿಗೆ 21.45 ಕೋಟಿ ರೂ. ಗಳನ್ನು ಮೂಲ ಸೌಕರ್ಯ ನಿಧಿಗೆ ನೀಡುವಂತೆ ನಬಾರ್ಡ್‌ಗೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದರು.

ಹೀಗೆ ಬ್ಯಾಂಕ್‌ ವರ್ಷದಿಂದ ವರ್ಷಕ್ಕೆ ಪ್ರಗತಿಯಲ್ಲಿದ್ದು, ಮೈಕ್ರೋ ಎಟಿಎಂ ಮಿಷನ್‌ ಸೌಲಭ್ಯ, ಮೊಬೈಲ್‌ ಬ್ಯಾಂಕಿಂಗ್‌, ಬಿಬಿಪಿಎಸ್‌ ಠೇವಣಿ ಸಂಗ್ರಹಕ್ಕೆ ಆದ್ಯತೆ ನೀಡಲಾಗಿದೆ. ಮುಂದಿನ ದಿನಗಳಲ್ಲಿ ಜಿಲ್ಲೆಯ ಎಲ್ಲ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳನ್ನು ಏಕರೂಪ ತಂತ್ರಾಂಶದ ಯೋಜನೆ ಅಡಿಯಲ್ಲಿ ಗಣಕೀಕರಣಗೊಳಿಸಲಾಗುವುದು. ಮುಂದಿನ ವರ್ಷ 30 ಕೋಟಿ ರೂ. ನಿವ್ವಳ ಲಾಭ ಗಳಿಸುವ ಗುರಿಯಿದೆ ಎಂದರು.

ಬ್ಯಾಂಕ್‌ಗಳ ವಿಲೀನಕ್ಕೆ ವಿರೋಧ ವ್ಯಕ್ತಪಡಿಸಿದ ಅವರು, ಡಿಸಿಸಿ ಬ್ಯಾಂಕ್‌ ಅನ್ನು ಅಪೆಕ್ಸ್‌ ಬ್ಯಾಂಕ್‌ನೊಂದಿಗೆ ಯಾವುದೇ ಕಾರಣಕ್ಕೂ ವಿಲೀನಗೊಳಿಸಬಾರದು. ರಾಜ್ಯದಲ್ಲಿ ಸುಮಾರು 5 ಸಾವಿರಕ್ಕೂ ಹೆಚ್ಚು ಸಹಕಾರ ಸಂಘಗಳಿವೆ. ಈ ಎಲ್ಲ ಸಹಕಾರ ಸಂಘಗಳ ಮೇಲ್ವಿಚಾರಣೆಯನ್ನು ಡಿಸಿಸಿ ಬ್ಯಾಂಕ್‌ ನೋಡಿಕೊಳ್ಳುತ್ತದೆ. ಆದರೆ, ಅಪೆಕ್ಸ್‌ ಬ್ಯಾಂಕ್‌ಗೆ ವಿಲೀನ ಮಾಡುವುದರಿಂದ ತೊಂದರೆಯಾಗುತ್ತದೆ. ಅಪೆಕ್ಸ್‌ ಬ್ಯಾಂಕ್‌ ಇರುವುದು ಬೆಂಗಳೂರಿನಲ್ಲಿ ವಿವಿಧ ವಿಷಯಗಳಿಗಾಗಿ ಬೀದರ್‌ನಂತಹ ಜಿಲ್ಲೆಯಿಂದ ಸುಮಾರು 800 ಕಿ.ಮೀ. ದೂರದ ಬೆಂಗಳೂರಿಗೆ ಬರುವುದು ಕೂಡ ಕಷ್ಟವಾಗುತ್ತದೆ. ಆಡಳಿತಾತ್ಮಕ ದೃಷ್ಟಿಯಿಂದಲೂ ಕೂಡ ಇದು ಅವೈಜ್ಞಾನಿಕವಾಗಿದೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಡಿಸಿಸಿ ಬ್ಯಾಂಕ್‌ ಉಪಾಧ್ಯಕ್ಷ ಎಚ್.ಎಲ್. ಷಡಾಕ್ಷರಿ, ನಿರ್ದೇಶಕರಾದ ಕೆ.ಪಿ. ದುಗ್ಗಪ್ಪ ಗೌಡ, ಎಂ.ಎಂ. ಪರಮೇಶ್‌, ಜೆ.ಪಿ. ಯೋಗೀಶ್‌, ಎಚ್‌.ಕೆ. ವೆಂಕಟೇಶ್‌, ಎಸ್‌.ಪಿ. ದಿನೇಶ್‌, ಜಿ.ಎನ್. ಸುಧೀರ್‌, ಬಿ.ಕೆ. ಗುರುರಾಜ್‌, ಬ್ಯಾಂಕ್‌ ನ ವ್ಯವಸ್ಥಾಪಕ ನಿರ್ದೇಶಕ ನಾಗೇಶ್‌ ಡೋಂಗ್ರೆ ಇದ್ದರು.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Shobha, Bharathi Shetty  ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Shobha, Bharathi Shetty ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.