ನದಿಯಲ್ಲಿ ಕೊಚ್ಚಿ ಹೋಗಿದ್ದ ವ್ಯಕ್ತಿಯ ಶವ ಎರಡು ತಿಂಗಳ ಬಳಿಕ ಪತ್ತೆ
Team Udayavani, Oct 14, 2019, 12:27 PM IST
ಶಿವಮೊಗ್ಗ: ಸುಮಾರು ಎರಡು ತಿಂಗಳ ಹಿಂದೆ ಕುಮದ್ವತಿ ನದಿ ಪ್ರವಾಹದಲ್ಲಿ ಕೊಚ್ಚಿ ಹೋಗಿದ್ದ ವ್ಯಕ್ತಿಯೊಬ್ಬರ ಶವ ಸೋಮವಾರ ಪತ್ತೆಯಾಗಿದೆ.
ಪ್ರವಾಹದಲ್ಲಿ ಕೊಚ್ಚಿಹೋಗಿದ್ದ ಕುಂಸಿಯ ಅಮರನಾಥ್ ಮೃತ ದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ.
ಕಳೆದ ಆಗಸ್ಟ್ ತಿಂಗಳಲ್ಲಿ ಸುರಿದ ಮಹಾಮಳೆಯ ಪ್ರವಾಹದ ವೇಳೆ ಚೊರಡಿ ಕುಮದ್ವತಿ ನದಿ ಸೇತುವೆ ಮೇಲೆ ನಿಂತು ನದಿಯನ್ನು ನೋಡುತ್ತಿದ್ದಾಗ ಬೋಲೇರೋ ಡಿಕ್ಕಿ ಹೊಡೆದು ಮೂವರು ನದಿಗೆ ಬಿದ್ದಿದ್ದರು. ನದಿಗೆ ಬಿದ್ದ ಮರುದಿನವೇ ರಾಮಪ್ಪ ಎಂಬುವರ ಶವಪತ್ತೆಯಾಗಿತ್ತು. ಹರೀಶ್ ಶವ ಇನ್ನೂ ಪತ್ತೆಯಾಗಿಲ್ಲ.
ಹರೀಶ್ ಹಾಗೂ ಅಮರನಾಥ್ ಶವಕ್ಕಾಗಿ ಎನ್ ಡಿಆರ್ ಎಫ್ ಹದಿನೈದು ದಿನ ಕಾರ್ಯಾಚರಣೆ ನಡೆಸಿದರೂ ಶವ ಪತ್ತೆಯಾಗಿರಲಿಲ್ಲ. ಇದರಿಂದಾಗಿ ಎನ್ ಡಿಆರ್ ಎಫ್ ಸಿಬ್ಬಂಧಿಗಳು ಕಾರ್ಯಾಚರಣೆ ನಿಲ್ಲಿಸಿದ್ದರು.
ಸೋಮವಾರ ಚೊರಡಿ ಸಮೀಪದ ದೊಡ್ಡಿಮಟ್ಟಿ ಬಳಿ ಕುಮದ್ವತಿ ನದಿಪಾತ್ರದಲ್ಲಿ ಸ್ಥಳೀಯ ರೈತರು ಕೊಳೆತ ಶವವಿರುವುದನ್ನು ಗಮನಿಸಿ ಪೊಲೀಸರ ಗಮನಕ್ಕೆ ತಂದಿದ್ದಾರೆ. ಸ್ಥಳಕ್ಕಾಗಮಿಸಿದ ಪೊಲೀಸರು ಶವದ ಮೇಲಿರುವ ಜರ್ಕಿನ್, ಬಟ್ಟೆಗಳ ಆಧಾರದ ಮೇಲೆ ಅಮರನಾಥ್ ಶವ ಎಂದು ಗುರುತಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು
Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್
MUST WATCH
ಹೊಸ ಸೇರ್ಪಡೆ
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ