ಕಣ್ಣೀರ “ಹನಿ’ ಹರಿಸಿದ ನೀರಾವರಿ ಸಬ್ಸಿಡಿ


Team Udayavani, Sep 15, 2020, 5:50 PM IST

ಕಣ್ಣೀರ “ಹನಿ’ ಹರಿಸಿದ ನೀರಾವರಿ ಸಬ್ಸಿಡಿ

ಹೊಸನಗರ: ಕೋವಿಡ್ ವೈರಸ್‌ನಿಂದಾಗಿ ಸಮಸ್ಯೆಗಳು ದಿನೇ ದಿನೇ ಉಲ್ಬಣವಾಗುತ್ತಿವೆ. ಈ ನಡುವೆ ಸರ್ಕಾರಿ ಯೋಜನೆಗಳನ್ನು ನಂಬಿಕೊಂಡ ರೈತರ ಪಾಡುದೇವರಿಗೇ ಪ್ರೀತಿ ಎಂಬಂತಾಗಿದೆ. ಇದೀಗ ಹನಿ ನೀರಾವರಿ ಸಬ್ಸಿಡಿ ಬಾರದೇ ರೈತರ ಕಣ್ಣಲ್ಲಿ ನೀರ ಹನಿ ಉದುರುವಂತಾಗಿದೆ.

ತೋಟಗಾರಿಕೆ ಬೆಳೆಗೆ ಉತ್ತೇಜನ ನೀಡುವ ಸಲುವಾಗಿ ಮತ್ತು ನೀರಿನ ಉಳಿತಾಯದ ಹಿನ್ನೆಲೆಯಲ್ಲಿಹನಿ ನೀರಾವರಿಗೆ ಸರ್ಕಾರ ಸಬ್ಸಿಡಿ ಯೋಜನೆಯನ್ನು ಕಾರ್ಯಗತಗೊಳಿಸಿದೆ. ಎಕರೆಗೆ ಇಂತಿಷ್ಟು ಎಂಬ ದರವನ್ನು ನಿಗದಿಪಡಿಸಿ ಜಿಜಿಆರ್‌ಸಿ ನಿಯಮಾವಳಿ ಪ್ರಕಾರ ಶೇ.90 ರಷ್ಟು ಸಬ್ಸಿಡಿಯನ್ನು ಸರ್ಕಾರ ನೀಡುತ್ತಿದೆ. ಆದರೆ ಕಳೆದ ಎರಡು ವರ್ಷದಿಂದ ಸಬ್ಸಿಡಿ ಬಾರದೇ ರೈತರು ಪರದಾಡುವಂತಾಗಿದೆ.

ಏನಿದು ಸಬ್ಸಿಡಿ ಯೋಜನೆ: ತೋಟಗಾರಿಕಾ ಬೆಳೆ ಬೆಳೆಯುವ ರೈತರು ಹನಿ ನೀರಾವರಿ ಯೋಜನೆಯನ್ನು ಅಳವಡಿಸಿಕೊಳ್ಳಬಹುದಾಗಿದೆ. ಅಡಕೆ, ತೆಂಗು ಸೇರಿದಂತೆ ತೋಟಗಾರಿಕಾ ಬೆಳೆ ಬೆಳೆಯುವ ರೈತರು ತಮ್ಮ ಆರ್‌ಟಿಸಿ, ಕೊಟೇಷನ್‌ ಮತ್ತು ಅರ್ಜಿಯನ್ನು ತೋಟಗಾರಿಕಾ ಇಲಾಖೆಗೆ ಸಲ್ಲಿಸಬೇಕು. ರೈತರಿಗೆ ಅವರ ಜಮೀನು ಆಧರಿಸಿ ಇಲಾಖೆ, ವರ್ಕ್‌ ಆರ್ಡರ್‌ ನೀಡುತ್ತದೆ. ನಂತರ ರೈತರು ಸೂಕ್ತ ಕಂಪನಿಗಳಿಂದ ಹನಿ ನೀರಾವರಿಯನ್ನು ಅಳವಡಿಸಿಕೊಂಡು ಸೂಕ್ತ ದಾಖಲೆಯನ್ನು ಇಲಾಖೆಗೆ ಸಲ್ಲಿಸಬೇಕು. ರೈತನಿಂದ ಬಂದ ಕಡತವನ್ನು ಜಿಜಿಆರ್‌ಸಿ ನಿಯಮಾವಳಿ ಪ್ರಕಾರ ಶೇ.90 ಸಬ್ಸಿಡಿ ಅನ್ವಯ ಮಾಡಿಕೊಂಡು ಇಲಾಖೆ ಸರ್ಕಾರಕ್ಕೆ ವರದಿ ಸಲ್ಲಿಸುತ್ತದೆ. ನಂತರ ರೈತರ ಬ್ಯಾಂಕ್‌ ಖಾತೆಗೆ ನೇರವಾಗಿ ಸಬ್ಸಿಡಿ ಹಣ ಹಾಕಲಾಗುತ್ತದೆ. ರೈತರು ತಮಗಿರುವ ತೋಟಗಾರಿಕೆ ಬೆಳೆಯನ್ನು ಅನ್ವಯಿಸಿ ಸಬ್ಸಿಡಿ ಯೋಜನೆಯನ್ನು ಪಡೆದುಕೊಳ್ಳಬಹುದು. ಸರ್ಕಾರದ ನಿಯಮಾವಳಿಯಂತೆ ಹನಿ ನೀರವರಿಯನ್ನು ಅಳವಡಿಸಿಕೊಂಡ ನಂತರ ಅರ್ಜಿ ಸಲ್ಲಿಸಿ ಸಬ್ಸಿಡಿ ಹಣಕ್ಕಾಗಿ ಕಾಯುತ್ತಿದ್ದಾರೆ. ಆದರೆ ಎರಡು ವರ್ಷದಿಂದ ಸಬ್ಸಿಡಿ ಬಂದಿಲ್ಲ. ಸಾಲ ಮಾಡಿಕೊಂಡು ತಮ್ಮ ತೋಟಗಳಿಗೆ ಹನಿ ನೀರಾವರಿ ಅಳವಡಿಸಿಕೊಂಡ ರೈತರು ಸಾಲ ಕಟ್ಟಲಾಗದೆ ಪರದಾಡುವಂತಾಗಿದೆ.

697 ಕಡತ ಬಾಕಿ: ತಾಲೂಕಿನ ತೋಟಗಾರಿಕಾ ಇಲಾಖೆಯಲ್ಲಿ ಸಬ್ಸಿಡಿಗಾಗಿ ಕಾದು ಕುಳಿತ 697 ಕಡತಗಳಿವೆ. 2018-19ರಲ್ಲಿ 313 ಫೈಲ್‌, 2019-20 ರಲ್ಲಿ 384 ರೈತರ್‌ ಫೈಲ್‌ ಸಬ್ಸಿಡಿಗಾಗಿ ಬಾಕಿ ಉಳಿದಿವೆ.ಈ ಬಗ್ಗೆ ಅಧಿ ಕಾರಿಗಳನ್ನು ಕೇಳಿದರೆ ಸಬ್ಸಿಡಿ ಬರುತ್ತದೆ ಎನ್ನುತ್ತಾರೆ ಹೊರತು ಯಾವಾಗ ಬರಲಿದೆ ಎಂಬ ಸ್ಪಷ್ಟ ಉತ್ತರ ನೀಡುತ್ತಿಲ್ಲ ಎಂಬುದು ರೈತರ ಅಳಲು.

ಮಲೆನಾಡಲ್ಲಿ ಕೃಷಿಯೇ ಒಂದು ಸವಾಲು. ಬಿಸಿಲ-ಮಳೆಯ ವ್ಯತ್ಯಯದಿಂದಾಗಿ ತೋಟಗಾರಿಕಾ ಬೆಳೆಯನ್ನು ಉಳಿಸಿಕೊಳ್ಳುವುದೇ ಕಷ್ಟ. ಈ ನಡುವೆ ಸಾಲಮಾಡಿ ಹನಿ ನೀರಾವರಿ ಅಳವಡಿಸಿಕೊಂಡ ರೈತರಿಗೆ ಸರ್ಕಾರದ ಸಬ್ಸಿಡಿ ಹಣವೇ ದಿಕ್ಕು. ಕೋವಿಡ್ ಆರ್ಭಟದಿಂದಾಗಿ ಬದುಕೇ ದೊಡ್ಡ ಸಮಸ್ಯೆಯಾಗಿದೆ. ಈ ನಡುವೆ ಬರಬೇಕಾದ ಸಬ್ಸಿಡಿ ಹಣವೂ ಬಾಕಿ ಉಳಿದರೆ ಏನು ಗತಿ ಸ್ವಾಮಿ. ಸರ್ಕಾರ ಇನ್ನಾದರೂ ರೈತರ ಹಿತರಕ್ಷಣೆಗೆ ಧಾವಿಸಲಿ.- ಶ್ರೀಧರ ಶೆಟ್ಟಿ, ಕೋಟೆಕೆರೆ

ಹನಿ ನೀರಾವರಿ ಅಳವಡಿಸಿಕೊಂಡು ಸಬ್ಸಿಡಿ ಹಣಕ್ಕಾಗಿ ರೈತರು ಕಾಯುತ್ತಿರುವುದು ನಿಜ. ಈಗಾಗಲೇ ಮೇಲಧಿಕಾರಿಗಳ ಗಮನಕ್ಕೆ ತರಲಾಗಿದೆ. ಶಿವಮೊಗ್ಗ ತೋಟಗಾರಿಕಾ ಇಲಾಖೆಯ ಡಿಡಿ ರಾಘವೇಂದ್ರ ಮಡಿವಾಳ್‌ ಅವರು ಬಂದು ಖುದ್ದಾಗಿ ಪರಿಶೀಲಿಸಿದ್ದಾರೆ.ಶೀಘ್ರ ಸಬ್ಸಿಡಿ ಹಣ ಮಂಜುರಾತಿಗೆ ಸರ್ಕಾರದ ಮಟ್ಟದಲ್ಲಿ ಮಾತನಾಡಲಾಗಿದೆ. ರೈತರು ಆತಂಕಪಡುವ ಅಗತ್ಯವಿಲ್ಲ ಎಂಬ ಭರವಸೆ ನೀಡಿದ್ದಾರೆ. – ಪುಟ್ಟನಾಯ್ಕ ಟಿ.ಸಿ., ತೋಟಗಾರಿಕೆ ಅಧಿಕಾರಿ, ಹೊಸನಗರ

ಟಾಪ್ ನ್ಯೂಸ್

mamata

EC ಚುನಾವಣ ಆಯೋಗ ಅಲ್ಲ, ಬಿಜೆಪಿ ಆಯೋಗ: ಮಮತಾ ಬ್ಯಾನರ್ಜಿ ಟೀಕಾಸ್ತ್ರ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

kejriwal 2

ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್‌ಗೆ ಕೇಜ್ರಿವಾಲ್‌ ಮಾಹಿತಿ

ದೇಶದ ಅಭಿವೃದ್ಧಿಗೆ ಮೋದಿ ಗ್ಯಾರಂಟಿಯೇ ಶಾಶ್ವತ: ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ

ದೇಶದ ಅಭಿವೃದ್ಧಿಗೆ ಮೋದಿ ಗ್ಯಾರಂಟಿಯೇ ಶಾಶ್ವತ: ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ

ದೇಶ ಒಡೆಯುವ ಮಾನಸಿಕತೆ ಕಾಂಗ್ರೆಸ್‌ನದ್ದು: ಮೀನಾಕ್ಷಿ ಲೇಖಿ

ದೇಶ ಒಡೆಯುವ ಮಾನಸಿಕತೆ ಕಾಂಗ್ರೆಸ್‌ನದ್ದು: ಮೀನಾಕ್ಷಿ ಲೇಖಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Shobha, Bharathi Shetty  ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Shobha, Bharathi Shetty ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

mamata

EC ಚುನಾವಣ ಆಯೋಗ ಅಲ್ಲ, ಬಿಜೆಪಿ ಆಯೋಗ: ಮಮತಾ ಬ್ಯಾನರ್ಜಿ ಟೀಕಾಸ್ತ್ರ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

kejriwal 2

ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್‌ಗೆ ಕೇಜ್ರಿವಾಲ್‌ ಮಾಹಿತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.