ಡಿ.10ರಂದು ಬೆಳಗಾವಿಯಲ್ಲಿ ಬೃಹತ್ ಪ್ರತಿಭಟನೆ: ಬಿಎಸ್ವೈ
Team Udayavani, Nov 23, 2018, 6:40 AM IST
ಶಿವಮೊಗ್ಗ: ಕಬ್ಬು ಬೆಳೆಗಾರರ ಸಮಸ್ಯೆ, ರೈತರ ಸಾಲ ಮನ್ನಾ ಎನ್ನುವ ಹಲವು ಜ್ವಲಂತ ಸಮಸ್ಯೆಗಳಿವೆ. ಡಿ.10ರಂದು ಬೆಳಗಾವಿಯಲ್ಲಿ ಒಂದು ಲಕ್ಷಕ್ಕೂ ಹೆಚ್ಚು ರೈತರೊಂದಿಗೆ ಸೇರಿ ಪ್ರತಿಭಟನೆ ಮಾಡುತ್ತೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ತಿಳಿಸಿದರು.
ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡಿಸಿಸಿ ಬ್ಯಾಂಕ್ಗಳಿಂದ ಅಂಕಿ ಅಂಶ ತೆಗೆದುಕೊಂಡಿ¨ªೇನೆ. 547 ಕೋಟಿ ರೂ.ಬಡ್ಡಿ ಇನ್ನೂ ಪಾವತಿ ಮಾಡಿಲ್ಲ. ಒಂದು ಲಕ್ಷ ರೂ.ರೈತರ ಸಾಲ ಮನ್ನಾ ಮಾಡಿದ್ದೇನೆ ಎಂದು ಮುಖ್ಯಮಂತ್ರಿ ಬೊಬ್ಬೆ ಹೊಡೆಯುತ್ತಿದ್ದಾರೆ. ಆದರೆ, ಒಂದು ರೂಪಾಯಿ ಬಿಡುಗಡೆ ಮಾಡಿಲ್ಲ. ಸದನದ ಒಳಗೆ ಹಾಗೂ ಹೊರಗೆ ರೈತರ ಪರವಾಗಿ ಹೋರಾಟ ನಡೆಸುತ್ತೇನೆ ಎಂದರು.
ಮುಂಬರುವ ಲೋಕಸಭಾ ಚುನಾವಣೆಗೆ ವಿಧಾನಸಭೆ ಅ ಧಿವೇಶನ ಮುಗಿದ ಬಳಿಕ ರಾಜ್ಯ ಪ್ರವಾಸ ಕೈಗೊಳ್ಳುತ್ತೇನೆ. ಕನಿಷ್ಠ 22 ಕ್ಷೇತ್ರಗಳಲ್ಲಿ ಗೆಲ್ಲಬೇಕು ಎನ್ನುವುದು ನಮ್ಮ ಗುರಿಯಾಗಿದೆ. ಇದಕ್ಕಾಗಿ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಿ ಕಣಕ್ಕಿಳಿಸುತ್ತೇವೆ ಎಂದರು.