ಶಿಕ್ಷಣ ಇಲಾಖೆ ಸಮಸ್ಯೆ ಪರಿಹಾರಕ್ಕೆ ನಿರ್ಣಯ


Team Udayavani, Jan 5, 2021, 2:55 PM IST

ಶಿಕ್ಷಣ ಇಲಾಖೆ ಸಮಸ್ಯೆ ಪರಿಹಾರಕ್ಕೆ ನಿರ್ಣಯ

ಶಿವಮೊಗ್ಗ: ಜಿಲ್ಲೆಯ ಪ್ರಾಥಮಿಕ, ಹಿರಿಯ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವಶಿಕ್ಷಕರ ಬಹುದಿನಗಳಿಂದ ನನೆಗುದಿಗೆ ಬಿದ್ದಿದ್ದ, ಸ್ಥಳೀಯವಾಗಿ ಇತ್ಯರ್ಥಪಡಿಸಿಕೊಳ್ಳಬಹುದಾದ ಹಾಗೂ ಇಲಾಖೆಯಲ್ಲಿನ ಜ್ವಲಂತ ಸಮಸ್ಯೆಗಳನ್ನು ತ್ವರಿತಗತಿಯಲ್ಲಿ ಪರಿಹಾರ ಕಂಡುಕೊಳ್ಳಲು ರಾಜ್ಯದಲ್ಲಿಯೇ ಇದೇಮೊದಲ ಬಾರಿಗೆ ಸಭೆಯನ್ನು ಏರ್ಪಡಿಸಿ, ಹಲವುಮಹತ್ವದ ನಿರ್ಣಯಗಳನ್ನು ಕೈಗೊಳ್ಳಲಾಯಿತು.

ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕರ ಸಂಘ ಹಾಗೂ ರಾಜ್ಯ ಸರ್ಕಾರಿ ನೌಕರರ ಸಂಘದಅಧ್ಯಕ್ಷರ ಕೋರಿಕೆಯ ಮೇರೆಗೆ ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು, ಸಾರ್ವಜನಿಕಶಿಕ್ಷಣ ಇಲಾಖೆಯ ಉಪನಿರ್ದೇಶಕರು, ಎಲ್ಲಾ ತಾಲೂಕುಗಳ ಕ್ಷೇತ್ರ ಶಿಕ್ಷಣಾಧಿಕಾರಿಗಳು ಹಾಗೂಪ್ರೌಢ ಮತ್ತು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದಪದಾಧಿಕಾರಿಗಳ ಉಪಸ್ಥಿತಿಯಲ್ಲಿ ಸೋಮವಾರ ಜಿಪಂ ನಜೀರಸಾಬ್‌ ಸಭಾಂಗಣದಲ್ಲಿ ಸಭೆಯನ್ನು ಏರ್ಪಡಿಸಲಾಗಿತ್ತು.

ಈ ಸಂದರ್ಭದಲ್ಲಿ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್‌. ಷಡಾಕ್ಷರಿ ಮಾತನಾಡಿ, ನೂತನವಾಗಿ ಸೇವೆಗೆ ನಿಯುಕ್ತರಾದ ಶಿಕ್ಷಕರ ಖಾಯಂ ಪೂರ್ವ ಸೇವಾವ ಧಿ ತೃಪ್ತಿಕರವಾಗಿರುವ ಬಗ್ಗೆ ಆದೇಶ ಹೊರಡಿಸುವ, ಶಿಕ್ಷಕರ ಮೇಲೆ ಬಹುದಿನಗಳಿಂದಬಾಕಿ ಇರುವ ಇಲಾಖಾ ವಿಚಾರಣೆ ಬಾಕಿ, ನಿವೃತ್ತ ಶಿಕ್ಷಕರ ಸೌಲಭ್ಯಗಳನ್ನು ನೀಡದಿರುವುದು, ವೈದ್ಯಕೀಯ ವೆಚ್ಚದ ಮರುಪಾವತಿ, ವೇತನ ವಿಳಂಬಮುಂತಾದ ಸಮಸ್ಯೆಗಳು ಜಿಲ್ಲೆಯ ಎಲ್ಲಾ ತಾಲೂಕುಕೇಂದ್ರಗಳಲ್ಲಿಯೂ ಬಾಕಿ ಇರುವುದು ಬೇಸರಸಂಗತಿಯಾಗಿದೆ. ಇವುಗಳನ್ನು ಅನಗತ್ಯ ವಿಳಂಬಕ್ಕೆ ಅವಕಾಶವಿಲ್ಲದಂತೆ ತ್ವರಿತಗತಿಯಲ್ಲಿ ವಿಲೇ ಮಾಡಲು ಸಂಬಂಧಿಸಿದ ಅಧಿಕಾರಿಗಳಿಗೆ ನಿರ್ದೇಶನ ನೀಡುವಂತೆ ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಂ.ಎಲ್‌. ವೈಶಾಲಿ ಅವರಲ್ಲಿ ಮನವಿ ಮಾಡಿದರು.

ಶಿಕ್ಷಕರ ಮೇಲಿನ ಆರೋಪಗಳಿಗೆ ಸಂಬಂಧಿಸಿದಂತೆ ಇಲಾಖಾ ವಿಚಾರಣೆ ಕಾಯ್ದಿರಿಸಿದ್ದಲ್ಲಿ ಕೂಡಲೇ ವಿಚಾರಣೆಯನ್ನು ಪೂರ್ಣಗೊಳಿಸಬೇಕು. ಈ ವಿಷಯದಲ್ಲಿ ಅನಗತ್ಯ ವಿಳಂಬ ಸರಿಯಲ್ಲ. ಅಧಿಕಾರ ದುರ್ಬಳಕೆಯಂತಹ ಪ್ರಕರಣಗಳಲ್ಲಿನಿಯಮಾನುಸಾರ ಕ್ರಮವಹಿಸುವ ಬಗ್ಗೆ ನೌಕರರ ಆಕ್ಷೇಪ ವ್ಯಕ್ತಪಡಿಸುವುದಿಲ್ಲ ಎಂದರು.

ಗುರುಭವನ ನಿರ್ಮಾಣಕ್ಕೆ ಸಂಬಂಧಿಸಿದಂತೆ ಈಗಾಗಲೆ ಸರ್ಕಾರ ಅಗತ್ಯವಾಗಿರುವ ಅನುದಾನವನ್ನು ಬಿಡುಗಡೆ ಮಾಡಿದ್ದು ಜಿಲ್ಲಾ ಉಸ್ತುವಾರಿ ಸಚಿವರ ದಿನಾಂಕ ಪಡೆದು, ಕೂಡಲೇ ಕಟ್ಟಡ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಲು ಕ್ರಮ ಕೈಗೊಳ್ಳುವಂತೆತಿಳಿಸಿದ ಅವರು, ಶಿಕ್ಷಕರ ಮುಂಬಡ್ತಿಗೆ ಸಂಬಂ ಸಿದ ಕಡತಗಳನ್ನು ಕೂಡಲೇ ವಿಲೇ ಮಾಡುವಂತೆ ಮನವಿ ಮಾಡಿದರು.

ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಂ.ಎಲ್‌. ವೈಶಾಲಿ ಮಾತನಾಡಿ, ಮುಂಬಡ್ತಿ ಮತ್ತುಕಾಲಮಿತಿ ಬಡ್ತಿಗೆ ಸಂಬಂ ಸಿದ ಕಡತಗಳನ್ನು ಕೂಡಲೇವಿಲೇವಾರಿ ಮಾಡುವಂತೆ ಸಂಬಂ ಧಿಸಿದ ಅ ಧಿಕಾರಿಗಳಿಗೆಸೂಚಿಸಿದರು. ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಎನ್‌.ಎಂ. ರಮೇಶ್‌ ಮಾತನಾಡಿ,ಮಕ್ಕಳ ಸಂಖ್ಯೆ ಕಡಿಮೆ ಇದ್ದು, ಕೊಠಡಿಗಳ ಸಂಖ್ಯೆ ಸಾಕಷ್ಟಿದ್ದರೆ, ಅಂತಹ ಶಾಲೆಗಳಲ್ಲಿ ಕೋವಿಡ್‌ ಸುರಕ್ಷತಾ ಕ್ರಮಗಳನ್ನು ಅನುಸರಿಸಿ, ನಿರಂತರವಾಗಿ ತರಗತಿಗಳನ್ನು ನಡೆಸುವಂತೆ ಸೂಚಿಸಲಾಗಿದೆ ಎಂದರು. ‘

ಸಭೆಯಲ್ಲಿ ಡಯಟ್‌ ಪ್ರಾಂಶುಪಾಲ ಬಿ.ಆರ್‌. ಬಸವರಾಜು, ನೌಕರರ ಸಂಘದ ಬೆಂಗಳೂರು ವಿಭಾಗದ ವಿಭಾಗೀಯ ಉಪಾಧ್ಯಕ್ಷ ಆರ್‌. ಮೋಹನ್‌ ಕುಮಾರ್‌ ಮತ್ತಿತರರು ಇದ್ದರು.

ಟಾಪ್ ನ್ಯೂಸ್

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

ಬೊಮ್ಮಾಯಿ

Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

LokSabha Election; ಕಾಂಗ್ರೆಸ್ ಪರ ನಟ ದರ್ಶನ್ ಪ್ರಚಾರಕ್ಕೆ ಕುಮಾರಸ್ವಾಮಿ ಪ್ರತಿಕ್ರಿಯೆ

LokSabha Election; ಕಾಂಗ್ರೆಸ್ ಪರ ನಟ ದರ್ಶನ್ ಪ್ರಚಾರಕ್ಕೆ ಕುಮಾರಸ್ವಾಮಿ ಪ್ರತಿಕ್ರಿಯೆ

Shimoga; ವಿರೋಧ ಪಕ್ಷದವರಿಗೆ ಅಪಪ್ರಚಾರವೇ ಕೊನೆಯ ಅಸ್ತ್ರ: ಬಿವೈ ರಾಘವೇಂದ್ರ

Shimoga; ವಿರೋಧ ಪಕ್ಷದವರಿಗೆ ಅಪಪ್ರಚಾರವೇ ಕೊನೆಯ ಅಸ್ತ್ರ: ಬಿವೈ ರಾಘವೇಂದ್ರ

Shimoga; ಕೆ.ಎಸ್. ಈಶ್ವರಪ್ಪರನ್ನು ಭೀಷ್ಮರಿಗೆ ಹೋಲಿಸಿದ ಋಷಿಕುಮಾರ ಸ್ವಾಮೀಜಿ

Shimoga; ಕೆ.ಎಸ್. ಈಶ್ವರಪ್ಪರನ್ನು ಭೀಷ್ಮರಿಗೆ ಹೋಲಿಸಿದ ಋಷಿಕುಮಾರ ಸ್ವಾಮೀಜಿ

2-shimoga

Bhadravathi: ಲಾರಿ ಡಿಕ್ಕಿ, ರೈಲು ಹಳಿಗಳು ಏರುಪೇರು; ಎರಡೂವರೆ ತಾಸು ಪ್ರಯಾಣಿಕರು ಹೈರಾಣು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

9-fusion

Drama: ಪ್ರೇಕ್ಷಕರ ಮನಗೆದ್ದ “ಸೀತಾರಾಮ ಚರಿತಾ”

8-ptr

Puttur: ಶ್ರೀ ಮಹಾಲಿಂಗೇಶ್ವರ ದೇವರ ಅವಭೃಥ ಸವಾರಿ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

jagadish shettar

Belagavi; ಕಾಂಗ್ರೆಸ್ ಸರ್ಕಾರದ ಓಲೈಕೆಯಿಂದ ಜಿಹಾದಿ ಕೃತ್ಯಗಳು ಹೆಚ್ಚುತ್ತಿದೆ: ಶೆಟ್ಟರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.