ಹಳೇಸೊರಬದಲ್ಲಿ ಜೀವ ವೈವಿಧ್ಯ ತಾಣ ನಿರ್ಮಾಣಕ್ಕೆ ನಿರ್ಣಯ
Team Udayavani, Jul 27, 2020, 11:45 AM IST
ಸೊರಬ: ಹಳೇಸೊರಬ ಗ್ರಾಮದಲ್ಲಿ ರಾಜ್ಯ ಜೀವವೈವಿಧ್ಯ ಮಂಡಳಿ ಅಧ್ಯಕ್ಷ ಅನಂತ ಹೆಗಡೆ ಅಶೀಸರ ದೇವರ ಕಾಡು ವೀಕ್ಷಿಸಿದರು.
ಸೊರಬ: ತಾಲೂಕಿನ ಹಳೇಸೊರಬ ಗ್ರಾಮದಲ್ಲಿರುವ 600 ಎಕರೆ ದೇವರ ಕಾಡನ್ನು ರಾಜ್ಯದಲ್ಲಿ ಪಾರಂಪರಿಕ ಜೀವವೈವಿಧ್ಯ ತಾಣ ವನ್ನಾಗಿ ನಿರ್ಮಿಸಲು ನಿರ್ಣಯ ಕೈಗೊಳ್ಳಲಾಗಿದೆ ಎಂದು ಜೀವವೈವಿಧ್ಯ ಮಂಡಳಿ ರಾಜ್ಯಾಧ್ಯಕ್ಷ ಅನಂತ ಹೆಗಡೆ ಅಶೀಸರ ಹೇಳಿದರು.
ತಾಲೂಕಿನ ಹಳೇಸೊರಬ ಗ್ರಾಪನಲ್ಲಿ ಜೀವ ವೈವಿಧ್ಯ ಸಮಿತಿ ಸಭೆ ನಡೆಸಿ, ನಂತರ ಹಳೇಸೊರಬ ದೇವರ ಕಾಡು ಹಾಗೂ ಬರಗಿ ಗ್ರಾಮದಲ್ಲಿ ಜೇಡು ಕಾಡುಗಳಿಗೆ ಭೇಟಿ ನೀಡಿ ಸುದ್ದಿಗಾರರೊಂದಿಗೆ ಮಾತನಾಡಿದರು. ಬ್ರಿಟಿಷರ ಕಾಲದಿಂದಲೂ ಹಳೇಸೊರಬ ಗ್ರಾಮದಲ್ಲಿ ದೇವರ ಕಾಡು ಮೀಸಲಾಗಿದ್ದು, ಈ ಬಗ್ಗೆ ಜೀವ ವೈವಿಧ್ಯ ಮಂಡಳಿಯು ಕಳೆದ 10 ವರ್ಷಗಳಿಂದಲೂ ಅಧ್ಯಯನ, ಸಮೀಕ್ಷೆ ನಡೆಸಿ ಕಾಡಿನ ಸಂರಕ್ಷಣೆ, ಗಡಿ ಗುರುತು ಮಾಡಿ ಯಾವುದೇ ರೀತಿಯಲ್ಲಿ ಅರಣ್ಯ ಪ್ರದೇಶದಲ್ಲಿ ಭೂಮಿ ಹಾಗೂ ಜೀವ ಸಂಕುಲಗಳಿಗೆ ನಷ್ಟವಾಗದಂತೆ ಭದ್ರತೆ ಮಾಡಿರುವ ಬಗ್ಗೆ ಸರ್ಕಾರಕ್ಕೆ ವರದಿ ನೀಡಲಾಗಿದೆ. ಪ್ರಾಣಿ-ಪಕ್ಷಿಗಳ ಸಂಕುಲಕ್ಕೆ ಪೂರಕವಾಗಿರುವ ದೇವರ ಕಾಡನ್ನು ರಾಜ್ಯದಲ್ಲಿ ಪ್ರಸಿದ್ಧವಾದ ಪಾರಂಪರಿಕ ಜೀವವೈವಿಧ್ಯ ತಾಣವಾಗಿ ನಿರ್ಮಿಸಲು ಹಾಗೂ ದೇವರ ಕಾಡನ್ನು ಪರಿಸರ ಪ್ರವಾಸೋದ್ಯಮಕ್ಕೆ ಸೇರಿಸುವಂತೆ ಸರ್ಕಾರಕ್ಕೆ ಒತ್ತಾಯಿಸಲಾಗಿದೆ ಎಂದರು.
ತಾಲೂಕಿನ ಬರಗಿ ಗ್ರಾಮದಲ್ಲಿ ಸುಮಾರು 25 ಎಕರೆ ಪ್ರದೇಶದಲ್ಲಿರುವ ಜೇನು ಕಾಡು ಅಭಿವೃದ್ಧಿಗಾಗಿ ಸಂಶೋಧನೆ ನಡೆಸಲಾಗುತ್ತಿದ್ದು, ಶೀಘ್ರದಲ್ಲಿಯೇ ಸರ್ಕಾರದಿಂದ ಪ್ರದೇಶದಲ್ಲಿ ಅಭಿವೃದ್ಧಿ ಕೈಗೊಳ್ಳುವ ಬಗ್ಗೆ ವರದಿ ನೀಡಿ ಅಭಿವೃದ್ಧಿ ಪಡಿಸಲಾಗುವುದು ಎಂದರು. ಜೀವವೈವಿಧ್ಯ ಸಮಿತಿ ಆಡಳಿತಾ ಧಿಕಾರಿ ಕೆ. ಕುಮಾರ್, ವಲಯ ಸಂರಕ್ಷಣಾಧಿ ಕಾರಿ ಮಂಜುನಾಥ್, ವಲಯ ಅರಣ್ಯಾ ಧಿಕಾರಿ ಗಣೇಶ್, ಶ್ರೀಪಾದ ಬಿಚ್ಚುಗತ್ತಿ, ಈರೇಶಗೌಡ, ಮೋಹನ್ ಸುರಭಿ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ
Shobha, Bharathi Shetty ಹೊರತು ಬಿಎಸ್ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ
Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮನೆ ರತ್ನಾಕರ್
Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್ರಿಂದ ಪರಿಶೀಲನೆ
Lok Sabha Election: ‘ಬಿವೈಆರ್ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’
MUST WATCH
ಹೊಸ ಸೇರ್ಪಡೆ
Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ
Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ
ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು
MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್
UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು