ದೊಡ್ಡಗೌಡ್ರು, ಸಿದ್ದರಾಮಯ್ಯರದ್ದು ಆಚಾರವಿಲ್ಲದ ನಾಲಿಗೆ: ಸಿ.ಟಿ.ರವಿ
Team Udayavani, Oct 22, 2018, 6:10 AM IST
ಶಿವಮೊಗ್ಗ: ದೀಪಾವಳಿ ಹಬ್ಬ ಆದ ಮೇಲೆ ಇಲ್ಲಿಗೆ ಹಗಲು ವೇಷದವರು ಬರುತ್ತಾರೆ. ಬೆಂಗಳೂರಲ್ಲಿ ದಸರಾ ಹಬ್ಬದ ಮರುದಿನವೇ ಹಗಲು ವೇಷದವರ ಸುದ್ದಿಗೋಷ್ಠಿ ನಡೆದಿದೆ. ಮಾಜಿ ಪ್ರಧಾನಿ ದೇವೇಗೌಡ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಹಗಲು ವೇಷದವರಂತೆ ಒಗ್ಗಟ್ಟಿನ ಅಭಿನಯದೊಂದಿಗೆ ಮಾತನಾಡಿದ್ದಾರೆ ಎಂದು ಬಿಜೆಪಿ ಶಾಸಕ ಸಿ.ಟಿ. ರವಿ ಟೀಕಿಸಿದರು.
ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಆರು ತಿಂಗಳ ಹಿಂದೆ ದೊಡ್ಡಗೌಡರ ಡೈಲಾಗ್ ಬೇರೆಯೇ ಇತ್ತು. ಆದರೆ, ಈಗ ಎಲ್ಲವೂ ಬದಲಾಗಿದೆ. ಅಧಿಕಾರಕ್ಕಾಗಿ ಇವರು ಏನೆಲ್ಲ ಮಾಡುತ್ತಾರೆ ಎನ್ನುವುದಕ್ಕೆ ಇದು ಸಾಕ್ಷಿ. ಕೆಲ ತಿಂಗಳುಗಳ ಹಿಂದೆ ದೇವೇಗೌಡರು “ನನ್ನ ರಾಜಕೀಯ ಜೀವನದಲ್ಲೇ ಸಿದ್ದರಾಮಯ್ಯ ರೀತಿಯ ಸಿಎಂ ನೋಡಿರಲಿಲ್ಲ. ಕಾಂಗ್ರೆಸ್ ಸೋಲಿಸುವುದೇ ನನ್ನ ಕೊನೆಯ ಆಸೆ ಎಂದಿದ್ದರು. ಇದಕ್ಕೆ ಪ್ರತಿಯಾಗಿ ಸಿದ್ದರಾಮಯ್ಯ, “ಜೆಡಿಎಸ್ ಬಿಜೆಪಿಯ ಬಿ- ಟೀಂ, ಅದು ಧೃತರಾಷ್ಟ್ರನ ಜಾತಿ, ಅಲ್ಲಿದ್ದರೆ ಯಾರೂ ಬೆಳೆಯೋದಿಲ್ಲ’ ಎಂದಿದ್ದರು. ಹೀಗೆಲ್ಲ ಮಾತನಾಡಿದವರು ಈಗ ಒಂದಾಗಿದ್ದಾರೆ. ದಾಸಶ್ರೇಷ್ಠರು ಹೇಳಿದ ಆಚಾರವಿಲ್ಲದ ನಾಲಿಗೆ ಎಂಬ ಮಾತು ಕಾಂಗ್ರೆಸ್-ಜೆಡಿಎಸ್ನವರಿಗೆ ಸರಿಯಾಗಿ ಹೊಂದುತ್ತದೆ ಎಂದು ಲೇವಡಿ ಮಾಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ
Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು
Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ
Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್
Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್
MUST WATCH
ಹೊಸ ಸೇರ್ಪಡೆ
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ
Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ