ನವೆಂಬರೊಳಗೆ ದೇವೇಗೌಡರ ಜೀವನ ಚರಿತ್ರೆ ಬಿಡುಗಡೆ
Team Udayavani, Sep 16, 2017, 6:25 AM IST
ಶಿವಮೊಗ್ಗ: “ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡರ ಜೀವನ ಚರಿತ್ರೆ ನವೆಂಬರ್ ಒಳಗೆ ಬಿಡುಗಡೆಗೊಳ್ಳಲಿದೆ’ ಎಂದು ಪುಸ್ತಕದ ಲೇಖಕ ಹಾಗೂ ಜೆಡಿಎಸ್ ರಾಜ್ಯ ವಕ್ತಾರ ವೈ.ಎಸ್.ವಿ.ದತ್ತಾ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “1973ರಿಂದಲೂ ಜನತಾ ಪರಿವಾರದಲ್ಲಿ ಹಾಗೂ ದೇವೇಗೌಡರ ಅನುಯಾಯಿಯಾಗಿ, ಬೆಂಬಲಿಗನಾಗಿ, ಒಡನಾಡಿಯಾಗಿ ರಾಜಕೀಯ ಜೀವನ ನಡೆಸುತ್ತಿದ್ದೇನೆ. ಇದೀಗ ಅವರ ಜೀವನ ಚರಿತ್ರೆ ಬರೆಯುತ್ತಿದ್ದು, ನವೆಂಬರ್ ವೇಳೆಗೆ ಅದನ್ನು ಬಿಡುಗಡೆಗೊಳಿಸುವ ಇಚ್ಛೆ ಇದೆ.
ದೇವೇಗೌಡರ ರಾಜಕೀಯ ಜೀವನದಲ್ಲಿ ಎದುರಾದಂತಹ ಸಮಸ್ಯೆಗಳು, ಅವರ ರಾಜಕೀಯ ಹೋರಾಟ, ರೈತರ ಬಗೆಗಿನ ಕಾಳಜಿ, ಕೆಲವು ಸನ್ನಿವೇಶಗಳಲ್ಲಿ ಎದುರಿಸಿದಂತಹ ಘಟನೆಗಳು ಇನ್ನು ಮುಂತಾದ ವಿಷಯಗಳ ಸಮಗ್ರ ವಾಸ್ತವಿಕ ಸತ್ಯವನ್ನು ಜೀವನ ಚರಿತ್ರೆ ಒಳಗೊಂಡಿರುತ್ತದೆ. ಕಳೆದ ಕೆಲ ತಿಂಗಳಿಂದ ಬಿಡುವಿಲ್ಲದೆ ಪುಸ್ತಕ ಮುಗಿಸುವ ಕಾರ್ಯದಲ್ಲಿ ಮಗ್ನನಾಗಿದ್ದು, ರಾಜಕೀಯ ಚಟುವಟಿಕೆಗಳಲ್ಲಿ ಹೆಚ್ಚಾಗಿ ಕಾಣಿಸಿಕೊಳ್ಳಲು ಸಾಧ್ಯವಾಗಿಲ್ಲ ‘ ಎಂದು ಹೇಳಿದರು.
ನಾನು ಜನತಾ ಪರಿವಾರದ ಕಟ್ಟಾ ಅನುಯಾಯಿಯಾಗಿದ್ದೇನೆ. ಕಾಂಗ್ರೆಸ್ ಸೇರುವಂತಹ ಯೋಚನೆಯನ್ನು ಎಂದೂ ಮಾಡಿಲ್ಲ. ಸಾಮಾಜಿಕ ಜಾಲತಾಣಗಳಲ್ಲಿ ಬರುತ್ತಿರುವ ಸುದ್ದಿಯಲ್ಲಿ ಯಾವುದೇ ಹುರುಳಿಲ್ಲ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ
Ls Polls: ಕಾಂಗ್ರೆಸ್ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್
Election Commission: ಪ್ರಿಯಾಂಕ್ ಖರ್ಗೆ, ಡಿಕೆಶಿ ವಿರುದ್ಧ ಚು.ಆಯೋಗಕ್ಕೆ ಬಿಜೆಪಿ ದೂರು
MUST WATCH
ಹೊಸ ಸೇರ್ಪಡೆ
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ
Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ